nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ

    December 25, 2025

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!

    December 25, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
    • ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
    • “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!
    • ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ
    • ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ
    • ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ
    • ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
    • ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಲಿನ ಜೊತೆಗೆ ಅರಿಶಿಣ ಬೆರೆಸಿ ಕುಡಿದ್ರೆ ಈ ಕಾಯಿಲೆಗಳೆಲ್ಲಾ ಮಾಯ
    ಆರೋಗ್ಯ June 13, 2024

    ಹಾಲಿನ ಜೊತೆಗೆ ಅರಿಶಿಣ ಬೆರೆಸಿ ಕುಡಿದ್ರೆ ಈ ಕಾಯಿಲೆಗಳೆಲ್ಲಾ ಮಾಯ

    By adminJune 13, 2024No Comments2 Mins Read
    milk 2

    ಹಾಲಿಗೆ ಅರಿಶಿನ ಸೇರಿಸಿ ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ.

    ರಕ್ತವನ್ನು ಶುದ್ಧೀಕರಿಸುತ್ತದೆ: ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ. ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಎಲ್ಲಾ ಕಲ್ಮಶಗಳಿಂದ ರಕ್ತನಾಳಗಳು ಮತ್ತು ದುಗ್ಧರಸ ವ್ಯವಸ್ಥೆ(ಲಿಂಫ್ಯಾಟಿಕ್ ಸಿಸ್ಟಮ್)ಯನ್ನು ಶುದ್ಧಗೊಳಿಸುತ್ತದೆ.


    Provided by
    Provided by

    ಕ್ಯಾನ್ಸರ್ ತಡೆಗಟ್ಟುತ್ತದೆ: ಅರಿಶಿನ ಹಾಲನ್ನು ನಿಯಮಿತವಾಗಿ ಸೇವಿಸುವುದರಿಂದ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಬಹುದು. ಅರಿಶಿನದಲ್ಲಿರುವ ‘ಕರ್ಕ್ಯುಮಿನ್ ‘ ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ.

    ಜೀರ್ಣಕ್ರಿಯೆ ಹೆಚ್ಚಿಸುತ್ತದೆ: ಅರಿಶಿನದ ಹಾಲು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಹೊಟ್ಟೆಯ ಹುಣ್ಣು ಮತ್ತು ಅತಿಸಾರವನ್ನು ತಡೆಯುತ್ತದೆ. ಹೊಟ್ಟೆಯುಬ್ಬರ, ಎದೆಯುರಿ, ಇತರ ಜಠರಗರುಳಿನ ಸೋಂಕುಗಳಿದ್ದರೆ ಪ್ರತಿದಿನ ಅರಿಶಿನವನ್ನು ಒಂದು ಕಪ್ ಹಾಲಿಗೆ ಸೇರಿಸಿ ಕುಡಿಯಿರಿ.

    ಸಮಯಕ್ಕೆ ಸರಿಯಾಗಿ ಋತುಚಕ್ರ: ಅರಿಶಿನದ ಹಾಲು ಕುಡಿಯುತ್ತಿದ್ದರೆ ಮುಟ್ಟಿನ ನೋವು ಶಮನಗೊಂಡು, ಋತುಚಕ್ರ ಸಮಯಕ್ಕೆ ಸರಿಯಾಗಿ ಆಗುತ್ತದೆ. ಜೊತೆಗೆ, ಲ್ಯುಕೋರಿಯಾ, ಎಂಡೊಮೆಟ್ರಿಯೊಸಿಸ್, ಫೈಬ್ರಾಯ್ಡ್ಸ್ ಮತ್ತು ಹಾರ್ಮೋನುಗಳಲ್ಲಿ ಅಸಮತೋಲನ ಹೊಂದಿರುವ ಮಹಿಳೆಯರಿಗೂ ಅರಿಶಿನ ಹಾಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.

    ಕೆಮ್ಮು ಮತ್ತು ಶೀತಕ್ಕೆ ಪರಿಹಾರ: ಅರಿಶಿನ ಹಾಲು ಆಂಟಿವೈರಲ್ ಮತ್ತು ಆಂಟಿಬ್ಯಾಕ್ಟೀರಿಯಾ ಗುಣಗಳನ್ನು ಹೊಂದಿರುವುದರಿಂದ ಕೆಮ್ಮು ಮತ್ತು ಶೀತವನ್ನು ಹೋಗಲಾಡಿಸುತ್ತದೆ. ಗಂಟಲು ನೋಯುತ್ತಿದ್ದರೆ ಅರಿಶಿನ ಹಾಲನ್ನು ಕುಡಿಯಿರಿ.

    ಉಸಿರಾಟದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ: ಅರಿಶಿನದ ಹಾಲು ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಅಸ್ತಮಾ, ಬ್ರಾಂಕೈಟಿಸ್‌ಗೆ ಪರಿಣಾಮಕಾರಿ ಪರಿಹಾರವಾಗಿದೆ. ಸೈನಸ್ ಮತ್ತು ಶ್ವಾಸಕೋಶದ ಸಮಸ್ಯೆಯಿದ್ದರೂ ಪರಿಹಾರ ನೀಡುತ್ತದೆ.

    ತೂಕ ಕಡಿಮೆಯಾಗುತ್ತದೆ: ಹೌದು, ಅರಿಶಿನ ಹಾಲು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ! ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

    ಸರಿಯಾಗಿ ನಿದ್ರೆ ಬರಲು: ನಿದ್ರೆ ಸರಿಯಾಗಿ ಬರದಿದ್ದರೆ ಅರಿಶಿನ ಹಾಲು ಕುಡಿಯಿರಿ. ಮಲಗುವ ಮೊದಲು ಅರಿಶಿನ ಹಾಲು ಕುಡಿದರೆ ವಿಶ್ರಾಂತಿ ಸಿಗುತ್ತದೆ. ಮನಸ್ಸು ಶಾಂತಗೊಂಡು ನಿದ್ರೆ ಬರುತ್ತದೆ.

    ಕೀಲು ನೋವು ನಿವಾರಣೆ: ಅರಿಶಿನವನ್ನು ಆಯುರ್ವೇದದಲ್ಲಿ ‘ನೈಸರ್ಗಿಕ ಆಸ್ಪಿರಿನ್’ಎಂದು ಕರೆಯುತ್ತಾರೆ. ಇದು ಎಲ್ಲಾ ರೀತಿಯ ನೋವನ್ನು ನಿವಾರಿಸುತ್ತದೆ. ಅರಿಶಿನ ಹಾಲಿನಲ್ಲಿ ಕ್ಯಾಲ್ಸಿಯಂ ಇರುವುದರಿಂದ ಕೀಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮೂಳೆಗಳನ್ನು ಆರೋಗ್ಯವಾಗಿರಿಸುತ್ತದೆ. ಈ ಹಾಲನ್ನು ಪ್ರತಿದಿನ ಸೇವಿಸುವುದರಿಂದ ಭವಿಷ್ಯದಲ್ಲಿ ಆಸ್ಟಿಯೊಪೊರೋಸಿಸ್ ಮತ್ತು ಸಂಧಿವಾತ ಬರುವುದನ್ನು ತಪ್ಪಿಸಬಹುದು.

    ಚರ್ಮಕ್ಕೆ ಹೊಳಪು ನೀಡುತ್ತದೆ: ಅರಿಶಿನದ ಹಾಲು ಮೊಡವೆ, ಎಸ್ಜಿಮಾ, ಇತರ ಚರ್ಮದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ. ಚರ್ಮದಲ್ಲಿ ಮೂಡಿರುವ ಸುಕ್ಕುಗಳನ್ನು ತೆಗೆದು, ನೈಸರ್ಗಿಕವಾಗಿ ಹೊಳೆಯಲು ಸಹಾಯ ಮಾಡುತ್ತದೆ.

    ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ: ಅರಿಶಿನ ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ ಎಂದು ಅಧ್ಯಯನಗಳು ಹೇಳಿವೆ. ಅರಿಶಿನದಲ್ಲಿನ ಕರ್ಕ್ಯುಮಿನ್ ಸೈಟೊಕಿನ್ ಗಳ ಬಿಡುಗಡೆ ತಡೆಯುತ್ತದೆ. ಈ ಸೈಟೊಕಿನ್‌ ಗಳು ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗೆ ಸಂಬಂಧಿಸಿವೆ.

    ಮಧುಮೇಹ ಚಿಕಿತ್ಸೆಗೆ: ಅರಿಶಿನದಲ್ಲಿರುವ ಕರ್ಕ್ಯುಮಿನ್ ಅಂಶ ರಕ್ತದಲ್ಲಿರುವ ಗ್ಲೂಕೋಸ್ ಮಟ್ಟ ಕಡಿಮೆ ಮಾಡುತ್ತದೆ. ಇದು ಮಧುಮೇಹ ಚಿಕಿತ್ಸೆಗೆ ಸಹಾಯ ಮಾಡುತ್ತದೆ. ಡಯಾಬಿಟಿಕ್ ನೆಫ್ರೋಪತಿ, ಡಯಾಬಿಟಿಕ್ ರೆಟಿನೋಪತಿ ಚಿಕಿತ್ಸೆಯಲ್ಲಿ ಕರ್ಕ್ಯುಮಿನ್ ಬಳಸಲಾಗುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಒದ್ದೆ ಕೂದಲಿನಲ್ಲಿ ಮಲಗುವ ಅಭ್ಯಾಸ ನಿಮಗಿದೆಯೇ? ಎಚ್ಚರ, ಎದುರಾಗಬಹುದು ಈ ಗಂಭೀರ ಸಮಸ್ಯೆಗಳು!

    December 22, 2025

    ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರುವುದಿಲ್ಲ: ವದಂತಿಗಳಿಗೆ ತೆರೆ ಎಳೆದ FSSAI

    December 21, 2025

    ಹೃದಯಾಘಾತಕ್ಕೂ ಮುನ್ನ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ: ನಿರ್ಲಕ್ಷಿಸಿದರೆ ಜೀವಕ್ಕೆ ಅಪಾಯ!

    September 6, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ

    December 25, 2025

    ತುಮಕೂರು ಬೆಸ್ಕಾಂ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಡಿಸೆಂಬರ್ 27 ಮತ್ತು 28ರಂದು…

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!

    December 25, 2025

    ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ

    December 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.