ಗುಬ್ಬಿ: ಓದುವಂತಹ ಸಂದರ್ಭದಲ್ಲಿ ಯಾವುದೇ ಮಾದಕ ವ್ಯಸನಗಳಿಗೆ ನೀವು ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್ ಹೇಳಿದರು. ಅವರು ಪಟ್ಟಣದ ಚಿದಂಬರ ಆಶ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಸಮಾಜ ನಿರ್ಮಾಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದಂತ ಚಿಕಿತ್ಸಕಿ ಡಾ.ಪ್ರಕೃತಿ ಮಾತನಾಡಿ, ಯಾವುದೇ ದುಶ್ಚಟಗಳು ಮೊದಲಿಗೆ ಆಹ್ಲಾದಕರವನ್ನು, ಮನೋರಂಜನೆಯನ್ನು ನೀಡಬಹುದು. ನಂತರದ ದಿನದಲ್ಲಿ ಅವುಗಳು ನಿಮಗೆ ಚಟವಾಗುತ್ತವೆ, ನೀವು ಬಿಡುತ್ತೇವೆ ಎಂದರೂ ಅವು ನಿಮ್ಮನ್ನು ಬಿಡದಂತೆ ಕಾಡುತ್ತವೆ. ಓದುವಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ವ್ಯಕ್ತಿತ್ವದ ಮೌಲ್ಯ ಶಿಕ್ಷಣವನ್ನು ಕಲಿಯಬೇಕು ಎಂದು ಹೇಳಿದರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಪ್ರಸನ್ನ ದೊಡ್ಡಗುಣಿ, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳು, ಧರ್ಮಸ್ಥಳ ಸಂಸ್ಥೆಯ ವಲಯ ಆನಂದ್ ಸೇರಿದಂತೆ ಇನ್ನಿತರರಿದ್ದರು.
ಇತ್ತೀಚಿನ ದಿನಗಳಲ್ಲಿ ಹಳ್ಳಿಯಿಂದ ನಗರದವರೆಗೂ ಕೂಡ ಮಾದಕ ವಸ್ತುಗಳು ಕೈಗೆ ಸಿಗುವಂತಾಗಿರುವುದು ನಿಜವಾಗಿಯೂ ಬೇಸರದ ವಿಷಯವಾಗಿದೆ. ಸರ್ಕಾರದ ಕಟ್ಟುನಿಟ್ಟಿನಲ್ಲಿಯೂ ಸಹ ಇಂತಹ ಮಾದಕ ವಸ್ತುಗಳು ಸಿಗುತ್ತಿರುವುದು ಆಘಾತಕಾರಿಯಾಗಿದೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಇಂತಹ ಕೆಟ್ಟ ಚಟಗಳಿಗೆ ಬಲಿಯಾಗಬೇಡಿ.
— ಶಿವಕುಮಾರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


