nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌

    November 16, 2025

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025
    Facebook Twitter Instagram
    ಟ್ರೆಂಡಿಂಗ್
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    • ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ
    • ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ
    • ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    • ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ಪಕ್ಷಕ್ಕೆ ಮತ ಹಾಕಿದ್ರೇ ನಿಮ್ಮ ಮನೆ ಬಾಗಿಲಿಗೆ ಲಾಲ್ ಬರ್ತಾರೆ:  ಮುಡಿಮಡು ರಂಗಶಾಮಯ್ಯ
    ಕೊರಟಗೆರೆ April 10, 2023

    ಜೆಡಿಎಸ್ ಪಕ್ಷಕ್ಕೆ ಮತ ಹಾಕಿದ್ರೇ ನಿಮ್ಮ ಮನೆ ಬಾಗಿಲಿಗೆ ಲಾಲ್ ಬರ್ತಾರೆ:  ಮುಡಿಮಡು ರಂಗಶಾಮಯ್ಯ

    By adminApril 10, 2023No Comments3 Mins Read
    jds

    ಕೊರಟಗೆರೆ : ಪರಮೇಶ್ವರ್ ಗೆ ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳೋಕೆ ಅಧಿಕಾರ ಬೇಕಿದೆ. ಸ್ನೇಹಜೀವಿ ಸುಧಾಕರಲಾಲ್‍ಗೆ  ಜನಸೇವೆ ಮಾಡಲು ಅಧಿಕಾರ ಬೇಕಿದೆ. ಕೊರಟಗೆರೆ ಜನರೇ ಕಾಂಗ್ರೇಸ್-ಬಿಜೆಪಿಗೆ ಮತ ಹಾಕಿದ್ರೇ ನಿಮ್ಮ ಕೆಲಸಕ್ಕೆ ಬೆಂಗಳೂರು ಮತ್ತು ತುಮಕೂರು ನಗರಕ್ಕೆ ಹೋಗ್ಬೇಕು. ಜೆಡಿಎಸ್ ಪಕ್ಷಕ್ಕೆ ಮತ ಹಾಕಿದ್ರೇ ನಿಮ್ಮ ಮನೆ ಬಾಗಿಲಿಗೆ ಲಾಲ್ ಬರ್ತಾರೇ ಎಂದು ಹಿಂದುಳಿದ ವರ್ಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಡಿಮಡು ರಂಗಶಾಮಯ್ಯ ಎಂದು  ತಿಳಿಸಿದರು.

    ಕೊರಟಗೆರೆ ಪಟ್ಟಣದ ಜಾಮೀಯಾ ಸಮುದಾಯ ಭವನದ ಆವರಣದಲ್ಲಿ ಜಾತ್ಯತೀತಾ ಜನತಾದಳ ಪಕ್ಷದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಹಿಂದುಳಿದ ವರ್ಗಗಳ ಜೆಡಿಎಸ್ ರಾಜ್ಯಾಧ್ಯಕ್ಷ ಜಯರಾಂ ಮಾತನಾಡಿ ಹಿಂದುಳಿದ ವರ್ಗದ ಪರವಾಗಿ ಹೋರಾಟ ಮಾಡುವ ನಾಯಕ ನಮ್ಮ ದೇವೇಗೌಡರು ಮಾತ್ರ. ಪಂಚರತ್ನ ಯೋಜನೆಯು ಮಾಜಿ ಸಿಎಂ ಕುಮಾರಸ್ವಾಮಿಯ ಕರ್ನಾಟಕ ಸಮಗ್ರ ಅಭಿವೃದ್ದಿಯ ಕನಸು. ಕೊರಟಗೆರೆ ಕ್ಷೇತ್ರದ ಲಾಲ್ 25ವರ್ಷದ ಜನಸೇವೆಯೇ ಅವರ ಗೆಲುವಿಗೆ ಆಧಾರಸ್ತಂಭ. ಆರೋಗ್ಯ ಸೇವೆ ಪಡೆದಿರುವ 35ಸಾವಿರ ಜನರೇ ಲಾಲ್‍ರನ್ನು ಮತ್ತೇ ಶಾಸಕರನ್ನಾಗಿ ಮಾಡ್ತಾರೇ. ಕುಮಾರಸ್ವಾಮಿ ಸಿಎಂ ಮತ್ತು ಸುಧಾಕರಲಾಲ್ ಸಚಿವ ಆಗೋದು ಖಚಿತ ಎಂದು ತಿಳಿಸಿದರು.

    ಹಿಂದುಳಿದ ವರ್ಗದ ರಾಜ್ಯ ಕಾರ್ಯಧ್ಯಕ್ಷ ಮಹಾಲಿಂಗಪ್ಪ ಮಾತನಾಡಿ ಕೊರಟಗೆರೆ ಕ್ಷೇತ್ರ ಜೆಡಿಎಸ್ ಪಕ್ಷದ ಭದ್ರಕೋಟೆ. 2023ಕ್ಕೆ ಕೊರಟಗೆರೆ ಕ್ಷೇತ್ರದಿಂದ 2023ಕ್ಕೆ ಸುಧಾಕರಲಾಲ್ ಶಾಸಕ ಆಗೋದು ಖಚಿತ. ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡಿದ್ದು ನಮ್ಮ ಹೆಮ್ಮೆಯ ಮಾಜಿ ಪ್ರಧಾನಿ ದೇವೇಗೌಡ.ಕಾಂಗ್ರೆಸ್ ಪಕ್ಷ ಜಾತಿ, ನೀತಿ ಮತ್ತು ಓಣಿಯನ್ನೇ ವಿಂಗಡಣೆ ಮಾಡಿ ರಾಜಕೀಯ ಮಾಡ್ತೀದೆ. ಕೊರಟಗೆರೆ ಕ್ಷೇತ್ರದ ಮತದಾರರು ಮನೆಯ ಮಗನಿಗೆ ಮತ ನೀಡಬೇಕಿದೆ ಎಂದು ಮನವಿ ಮಾಡಿದರು.

    ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಮಾತನಾಡಿ  ಹಿಂದುಳಿದ ಸಮಾಜಕ್ಕೆ ರಾಜಕೀಯ ಮೀಸಲಾತಿ ನೀಡಿದ್ದು ದೇವೇಗೌಡರು. ಧ್ವನಿ ಇಲ್ಲದ ಸಮಾಜಕ್ಕೆ ಶಕ್ತಿಯಾಗಿ ಆಸರೇ ನೀಡಿದವರು ನಮ್ಮ ಕುಮಾರಸ್ವಾಮಿ. ನನಗೇ ಅಧಿಕಾರ ಬೇಕಿರೋದು ಕುಮಾರಸ್ವಾಮಿ ಸಿಎಂ ಮಾಡಲು ಮತ್ತು ಕೊರಟಗೆರೆ ಕ್ಷೇತ್ರದ ಜನರ ಸೇವೆಗಾಗಿ ಮಾತ್ರ. ನನ್ನ ಬಳಿ ಹಣವಿಲ್ಲ ಅಂತಾರೇ ಆದರೇ ಜನರೇ ನನಗೇ ಹಣ ನೀಡಿ ಆರ್ಶಿವಾದ ಮಾಡಿದ್ದಾರೇ. ಜನರ ಋಣವನ್ನ ತೀರಿಸಲು ನನಗೇ ನಿಮ್ಮೇಲ್ಲರ ಸಹಕಾರ ಬೇಕಿದೆ ಎಂದು ಮನವಿ ಮಾಡಿದರು.

    ಸಮಾವೇಶದಲ್ಲಿ ಹಿಂದುಳಿದ ವರ್ಗದ ರಾಜ್ಯ ಕಾರ್ಯಧ್ಯಕ್ಷ ಪಾತಯ್ಯ, ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷೆ ಕುಸುಮಾ, ಕೊರಟಗೆರೆ ಜೆಡಿಎಸ್ ಕಾರ್ಯಧ್ಯಕ್ಷ ನರಸಿಂಹರಾಜು, ಉಪಾಧ್ಯಕ್ಷ ಕಾಮರಾಜು, ವಕ್ತಾರ ಲಕ್ಷ್ಮೀಣ್, ಕಾರ್ಯದರ್ಶಿ ಲಕ್ಷ್ಮಣ್, ಹಿಂದುಳಿದ ವರ್ಗದ ಅಧ್ಯಕ್ಷ ಸೋಮಶೇಖರ್, ಮುಖಂಡರಾದ ಮಂಜುನಾಥ, ವೀರಕ್ಯಾತರಾಯ, ಹನುಮಂತರಾಜು, ಪ್ರಕಾಶ್,  ಸತೀಶ್, ದೀಪೋ, ಶ್ರೀನಿವಾಸ್, ದೇವರಾಜು, ಸಾಕಾರಾಜು, ನಾಗೇಂದ್ರ, ನಟರಾಜು, ಪ್ರಕಾಶ್, ರಮೇಶ್, ಕೌಶಿಕ್, ಅಮರ, ಸೇರಿದಂತೆ ಇತರರು ಇದ್ದರು.

     400 ಜನ ಕಾರ್ಯಕರ್ತರು ಸೇರ್ಪಡೆ:

    ಹಿಂದುಳಿದ ವರ್ಗದ ಬೃಹತ್ ಸಮಾವೇಶದಲ್ಲಿ ಮಾಜಿ ತಾಪಂ ಸದಸ್ಯರಾದ ಸುಮರಾಜು, ಹನುಮಂತರಾಯಪ್ಪ, ಅಶ್ವತ್ಥನಾರಾಯಣ,  ಮಾಜಿ ಗ್ರಾಪಂ ಅಧ್ಯಕ್ಷ ಮಂಜುನಾಥ, ಹಾಲಿ ಗ್ರಾಪಂ ಸದಸ್ಯರು, ಮಾಜಿ ಸದಸ್ಯರು ಸೇರಿದಂತೆ 400ಕ್ಕೂ ಅಧಿಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

     

    ಕೊರಟಗೆರೆ ಕ್ಷೇತ್ರದಲ್ಲಿ 25ವರ್ಷ ಸೋತ್ರು-ಗೆದ್ರು ಜನರ ಜೊತೆಗಿದ್ದು ಜನಸೇವೆ ಮಾಡಿದ್ದೀನಿ. ಮುಂದಿನ 30ದಿನ ಮಾತ್ರ ನೀವು ನನ್ನ ಜೊತೆ ಇರಿ, ನಾನು 5ವರ್ಷ ಮನೆಮಗನಾಗಿ ನಿಮ್ಮ ಸೇವೆ ಮಾಡ್ತೀನಿ. 2023ರ ವಿಧಾನಸಭಾ ಚುನಾವಣೆಗೆ ನಾನು ಏ.15ರ 10ಗಂಟೆಗೆ ನಾಮಪತ್ರ ಸಲ್ಲಿಸ್ತೀನಿ. ತಾವೇಲ್ಲರೂ ಆಗಮಿಸಿ ನನಗೇ ಬೆಂಬಲ ಮತ್ತು ಸಹಕಾರ ನೀಡಬೇಕಿದೆ.

    — ಪಿ.ಆರ್.ಸುಧಾಕರಲಾಲ್. ಮಾಜಿ ಶಾಸಕ. ಕೊರಟಗೆರೆ

     

    ಕಾಂಗ್ರೇಸ್ ಮತ್ತು ಬಿಜೆಪಿ ನಾಯಕರೇ ಹಿಂದುಳಿದ ವರ್ಗದ ಎಷ್ಟು ಜನರಿಗೆ ಟಿಕೇಟ್ ನೀಡಿದ್ದಿರಾ. ನಮ್ಮ ಜೆಡಿಎಸ್ ಪಕ್ಷ ಬಲಿಜ ಮತ್ತು ಕುರುಬ ಸಮಾಜಕ್ಕೆ ನೀಡಿದೆ. ಕುರುಬ ಸಮಾಜ ಪರಮೇಶ್ವರ್‍ಗೆ ಮತ ಹಾಕ್ತಾರೇ ಎಂಬ ನಂಬಿಕೆಯೇ ಸುಳ್ಳು. ಕೊರಟಗೆರೆ ಕ್ಷೇತ್ರದ ಮನೆಯ ಮಗನಾಗಿ ದುಡಿಯುವ ಸುಧಾಕರಲಾಲ್‍ಗೆ ಕುರುಬ ಸಮಾಜದ ಶೇ.75ರಷ್ಟು ಜನ ಬೆಂಬಲ ನೀಡ್ತಾರೇ.

    —ಆರ್.ಸಿ.ಅಂಜಿನಪ್ಪ. ಜೆಡಿಎಸ್ ಜಿಲ್ಲಾಧ್ಯಕ್ಷ. ತುಮಕೂರು

     

    ವರದಿ: ಮಂಜುಸ್ವಾಮಿ. ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌

    November 16, 2025

    ತುಮಕೂರು: ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸುವ ಅಗತ್ಯವಿದೆ ಎಂದು ಕರ್ನಾಟಕ ವಿಜ್ಞಾನ ಹಾಗೂ ತಂತ್ರಜ್ಞಾನ ಅಕಾಡೆಮಿ ಅಧ್ಯಕ್ಷ…

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.