nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ಪಕ್ಷಕ್ಕೆ ಮತ ಹಾಕಿದ್ರೇ ನಿಮ್ಮ ಮನೆ ಬಾಗಿಲಿಗೆ ಲಾಲ್ ಬರ್ತಾರೆ:  ಮುಡಿಮಡು ರಂಗಶಾಮಯ್ಯ
    ಕೊರಟಗೆರೆ April 10, 2023

    ಜೆಡಿಎಸ್ ಪಕ್ಷಕ್ಕೆ ಮತ ಹಾಕಿದ್ರೇ ನಿಮ್ಮ ಮನೆ ಬಾಗಿಲಿಗೆ ಲಾಲ್ ಬರ್ತಾರೆ:  ಮುಡಿಮಡು ರಂಗಶಾಮಯ್ಯ

    By adminApril 10, 2023No Comments3 Mins Read
    jds

    ಕೊರಟಗೆರೆ : ಪರಮೇಶ್ವರ್ ಗೆ ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳೋಕೆ ಅಧಿಕಾರ ಬೇಕಿದೆ. ಸ್ನೇಹಜೀವಿ ಸುಧಾಕರಲಾಲ್‍ಗೆ  ಜನಸೇವೆ ಮಾಡಲು ಅಧಿಕಾರ ಬೇಕಿದೆ. ಕೊರಟಗೆರೆ ಜನರೇ ಕಾಂಗ್ರೇಸ್-ಬಿಜೆಪಿಗೆ ಮತ ಹಾಕಿದ್ರೇ ನಿಮ್ಮ ಕೆಲಸಕ್ಕೆ ಬೆಂಗಳೂರು ಮತ್ತು ತುಮಕೂರು ನಗರಕ್ಕೆ ಹೋಗ್ಬೇಕು. ಜೆಡಿಎಸ್ ಪಕ್ಷಕ್ಕೆ ಮತ ಹಾಕಿದ್ರೇ ನಿಮ್ಮ ಮನೆ ಬಾಗಿಲಿಗೆ ಲಾಲ್ ಬರ್ತಾರೇ ಎಂದು ಹಿಂದುಳಿದ ವರ್ಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಡಿಮಡು ರಂಗಶಾಮಯ್ಯ ಎಂದು  ತಿಳಿಸಿದರು.

    ಕೊರಟಗೆರೆ ಪಟ್ಟಣದ ಜಾಮೀಯಾ ಸಮುದಾಯ ಭವನದ ಆವರಣದಲ್ಲಿ ಜಾತ್ಯತೀತಾ ಜನತಾದಳ ಪಕ್ಷದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಹಿಂದುಳಿದ ವರ್ಗಗಳ ಜೆಡಿಎಸ್ ರಾಜ್ಯಾಧ್ಯಕ್ಷ ಜಯರಾಂ ಮಾತನಾಡಿ ಹಿಂದುಳಿದ ವರ್ಗದ ಪರವಾಗಿ ಹೋರಾಟ ಮಾಡುವ ನಾಯಕ ನಮ್ಮ ದೇವೇಗೌಡರು ಮಾತ್ರ. ಪಂಚರತ್ನ ಯೋಜನೆಯು ಮಾಜಿ ಸಿಎಂ ಕುಮಾರಸ್ವಾಮಿಯ ಕರ್ನಾಟಕ ಸಮಗ್ರ ಅಭಿವೃದ್ದಿಯ ಕನಸು. ಕೊರಟಗೆರೆ ಕ್ಷೇತ್ರದ ಲಾಲ್ 25ವರ್ಷದ ಜನಸೇವೆಯೇ ಅವರ ಗೆಲುವಿಗೆ ಆಧಾರಸ್ತಂಭ. ಆರೋಗ್ಯ ಸೇವೆ ಪಡೆದಿರುವ 35ಸಾವಿರ ಜನರೇ ಲಾಲ್‍ರನ್ನು ಮತ್ತೇ ಶಾಸಕರನ್ನಾಗಿ ಮಾಡ್ತಾರೇ. ಕುಮಾರಸ್ವಾಮಿ ಸಿಎಂ ಮತ್ತು ಸುಧಾಕರಲಾಲ್ ಸಚಿವ ಆಗೋದು ಖಚಿತ ಎಂದು ತಿಳಿಸಿದರು.

    ಹಿಂದುಳಿದ ವರ್ಗದ ರಾಜ್ಯ ಕಾರ್ಯಧ್ಯಕ್ಷ ಮಹಾಲಿಂಗಪ್ಪ ಮಾತನಾಡಿ ಕೊರಟಗೆರೆ ಕ್ಷೇತ್ರ ಜೆಡಿಎಸ್ ಪಕ್ಷದ ಭದ್ರಕೋಟೆ. 2023ಕ್ಕೆ ಕೊರಟಗೆರೆ ಕ್ಷೇತ್ರದಿಂದ 2023ಕ್ಕೆ ಸುಧಾಕರಲಾಲ್ ಶಾಸಕ ಆಗೋದು ಖಚಿತ. ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡಿದ್ದು ನಮ್ಮ ಹೆಮ್ಮೆಯ ಮಾಜಿ ಪ್ರಧಾನಿ ದೇವೇಗೌಡ.ಕಾಂಗ್ರೆಸ್ ಪಕ್ಷ ಜಾತಿ, ನೀತಿ ಮತ್ತು ಓಣಿಯನ್ನೇ ವಿಂಗಡಣೆ ಮಾಡಿ ರಾಜಕೀಯ ಮಾಡ್ತೀದೆ. ಕೊರಟಗೆರೆ ಕ್ಷೇತ್ರದ ಮತದಾರರು ಮನೆಯ ಮಗನಿಗೆ ಮತ ನೀಡಬೇಕಿದೆ ಎಂದು ಮನವಿ ಮಾಡಿದರು.

    ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಮಾತನಾಡಿ  ಹಿಂದುಳಿದ ಸಮಾಜಕ್ಕೆ ರಾಜಕೀಯ ಮೀಸಲಾತಿ ನೀಡಿದ್ದು ದೇವೇಗೌಡರು. ಧ್ವನಿ ಇಲ್ಲದ ಸಮಾಜಕ್ಕೆ ಶಕ್ತಿಯಾಗಿ ಆಸರೇ ನೀಡಿದವರು ನಮ್ಮ ಕುಮಾರಸ್ವಾಮಿ. ನನಗೇ ಅಧಿಕಾರ ಬೇಕಿರೋದು ಕುಮಾರಸ್ವಾಮಿ ಸಿಎಂ ಮಾಡಲು ಮತ್ತು ಕೊರಟಗೆರೆ ಕ್ಷೇತ್ರದ ಜನರ ಸೇವೆಗಾಗಿ ಮಾತ್ರ. ನನ್ನ ಬಳಿ ಹಣವಿಲ್ಲ ಅಂತಾರೇ ಆದರೇ ಜನರೇ ನನಗೇ ಹಣ ನೀಡಿ ಆರ್ಶಿವಾದ ಮಾಡಿದ್ದಾರೇ. ಜನರ ಋಣವನ್ನ ತೀರಿಸಲು ನನಗೇ ನಿಮ್ಮೇಲ್ಲರ ಸಹಕಾರ ಬೇಕಿದೆ ಎಂದು ಮನವಿ ಮಾಡಿದರು.

    ಸಮಾವೇಶದಲ್ಲಿ ಹಿಂದುಳಿದ ವರ್ಗದ ರಾಜ್ಯ ಕಾರ್ಯಧ್ಯಕ್ಷ ಪಾತಯ್ಯ, ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷೆ ಕುಸುಮಾ, ಕೊರಟಗೆರೆ ಜೆಡಿಎಸ್ ಕಾರ್ಯಧ್ಯಕ್ಷ ನರಸಿಂಹರಾಜು, ಉಪಾಧ್ಯಕ್ಷ ಕಾಮರಾಜು, ವಕ್ತಾರ ಲಕ್ಷ್ಮೀಣ್, ಕಾರ್ಯದರ್ಶಿ ಲಕ್ಷ್ಮಣ್, ಹಿಂದುಳಿದ ವರ್ಗದ ಅಧ್ಯಕ್ಷ ಸೋಮಶೇಖರ್, ಮುಖಂಡರಾದ ಮಂಜುನಾಥ, ವೀರಕ್ಯಾತರಾಯ, ಹನುಮಂತರಾಜು, ಪ್ರಕಾಶ್,  ಸತೀಶ್, ದೀಪೋ, ಶ್ರೀನಿವಾಸ್, ದೇವರಾಜು, ಸಾಕಾರಾಜು, ನಾಗೇಂದ್ರ, ನಟರಾಜು, ಪ್ರಕಾಶ್, ರಮೇಶ್, ಕೌಶಿಕ್, ಅಮರ, ಸೇರಿದಂತೆ ಇತರರು ಇದ್ದರು.

     400 ಜನ ಕಾರ್ಯಕರ್ತರು ಸೇರ್ಪಡೆ:

    ಹಿಂದುಳಿದ ವರ್ಗದ ಬೃಹತ್ ಸಮಾವೇಶದಲ್ಲಿ ಮಾಜಿ ತಾಪಂ ಸದಸ್ಯರಾದ ಸುಮರಾಜು, ಹನುಮಂತರಾಯಪ್ಪ, ಅಶ್ವತ್ಥನಾರಾಯಣ,  ಮಾಜಿ ಗ್ರಾಪಂ ಅಧ್ಯಕ್ಷ ಮಂಜುನಾಥ, ಹಾಲಿ ಗ್ರಾಪಂ ಸದಸ್ಯರು, ಮಾಜಿ ಸದಸ್ಯರು ಸೇರಿದಂತೆ 400ಕ್ಕೂ ಅಧಿಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

     

    ಕೊರಟಗೆರೆ ಕ್ಷೇತ್ರದಲ್ಲಿ 25ವರ್ಷ ಸೋತ್ರು-ಗೆದ್ರು ಜನರ ಜೊತೆಗಿದ್ದು ಜನಸೇವೆ ಮಾಡಿದ್ದೀನಿ. ಮುಂದಿನ 30ದಿನ ಮಾತ್ರ ನೀವು ನನ್ನ ಜೊತೆ ಇರಿ, ನಾನು 5ವರ್ಷ ಮನೆಮಗನಾಗಿ ನಿಮ್ಮ ಸೇವೆ ಮಾಡ್ತೀನಿ. 2023ರ ವಿಧಾನಸಭಾ ಚುನಾವಣೆಗೆ ನಾನು ಏ.15ರ 10ಗಂಟೆಗೆ ನಾಮಪತ್ರ ಸಲ್ಲಿಸ್ತೀನಿ. ತಾವೇಲ್ಲರೂ ಆಗಮಿಸಿ ನನಗೇ ಬೆಂಬಲ ಮತ್ತು ಸಹಕಾರ ನೀಡಬೇಕಿದೆ.

    — ಪಿ.ಆರ್.ಸುಧಾಕರಲಾಲ್. ಮಾಜಿ ಶಾಸಕ. ಕೊರಟಗೆರೆ

     

    ಕಾಂಗ್ರೇಸ್ ಮತ್ತು ಬಿಜೆಪಿ ನಾಯಕರೇ ಹಿಂದುಳಿದ ವರ್ಗದ ಎಷ್ಟು ಜನರಿಗೆ ಟಿಕೇಟ್ ನೀಡಿದ್ದಿರಾ. ನಮ್ಮ ಜೆಡಿಎಸ್ ಪಕ್ಷ ಬಲಿಜ ಮತ್ತು ಕುರುಬ ಸಮಾಜಕ್ಕೆ ನೀಡಿದೆ. ಕುರುಬ ಸಮಾಜ ಪರಮೇಶ್ವರ್‍ಗೆ ಮತ ಹಾಕ್ತಾರೇ ಎಂಬ ನಂಬಿಕೆಯೇ ಸುಳ್ಳು. ಕೊರಟಗೆರೆ ಕ್ಷೇತ್ರದ ಮನೆಯ ಮಗನಾಗಿ ದುಡಿಯುವ ಸುಧಾಕರಲಾಲ್‍ಗೆ ಕುರುಬ ಸಮಾಜದ ಶೇ.75ರಷ್ಟು ಜನ ಬೆಂಬಲ ನೀಡ್ತಾರೇ.

    —ಆರ್.ಸಿ.ಅಂಜಿನಪ್ಪ. ಜೆಡಿಎಸ್ ಜಿಲ್ಲಾಧ್ಯಕ್ಷ. ತುಮಕೂರು

     

    ವರದಿ: ಮಂಜುಸ್ವಾಮಿ. ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಬೆಂಗಳೂರು: “ವೈಚಾರಿಕತೆ, ವೈಜ್ಞಾನಿಕತೆ ಹಾಗೂ ಮಾನವೀಯತೆ ಇಲ್ಲದಿದ್ದರೆ ಅದು ನಿಜವಾದ ಶಿಕ್ಷಣವಲ್ಲ, ಅದು ಕೇವಲ ಬದುಕುವ ದಾರಿಯಷ್ಟೇ,” ಎಂದು ಮುಖ್ಯಮಂತ್ರಿ…

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.