nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಹೋದರತ್ವದ ಬದುಕು ಕಲಿಯುವುದೇ ಇಫ್ತಾರ್ ಕೂಟ: ಅಯುಬಖಾನ್ ಪಟೇಲ್
    ಜಿಲ್ಲಾ ಸುದ್ದಿ March 28, 2025

    ಸಹೋದರತ್ವದ ಬದುಕು ಕಲಿಯುವುದೇ ಇಫ್ತಾರ್ ಕೂಟ: ಅಯುಬಖಾನ್ ಪಟೇಲ್

    By adminMarch 28, 2025No Comments2 Mins Read
    ifthar

    ವರದಿ: ಅರವಿಂದ ಮಲ್ಲಿಗೆ, ಬೀದರ್

    ಬೀದರ್/ಔರಾದ್: ಪರರ ಬಗ್ಗೆ ಕಾಳಜಿ, ರಂಜಾನ್ ಉಪವಾಸ ಸಂದರ್ಭದಲ್ಲಿ ನಮ್ಮಲ್ಲಿರುವಂತಹ ಸಹೋದರತ್ವ ಸಮಾಜದಲ್ಲಿ ಒಳಗೊಳ್ಳುವುದು ಆಗಿದೆ. ಇಫ್ತಾರ್ ಕೂಟದಲ್ಲಿ ಮುಸ್ಲಿಮರಷ್ಟೇ ಅಲ್ಲಾ ಗ್ರಾಮದ ಎಲ್ಲಾ ಧರ್ಮದ ಜನರನ್ನು ಸೇರಿಸಿಕೊಂಡು ಈ ಒಂದು ಇಫ್ತಾರ್ ಕೂಟ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡರಾದ ಅಯುಬಖಾನ್ ಪಟೇಲ್ ಹೇಳಿದರು.

    ಔರಾದ್ ತಾಲ್ಲೂಕಿನ ಬೋರ್ಗಿ (ಜೆ) ಗ್ರಾಮದ ಮಸೀದಿ ಆವರಣದಲ್ಲಿ ಗುರುವಾರ ಆಯೋಜಿಸಿರುವ ಸಾಮೂಹಿಕ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾಮಾಜಿಕ ಜೀವನದಲ್ಲಿ ಸೌಹಾರ್ದಯುತವಾಗಿ ಬದುಕುವುದು ಹೇಗೆ ಎಂಬುದನ್ನು ಕಲಿತುಕೊಳ್ಳುವುದೇ ಇಫ್ತಾರ್ ಕೂಟದ ಉದ್ದೇಶವಾಗಿದೆ. ಪ್ರೀತಿ, ಭಾಂದವ್ಯ ಭ್ರಾತೃತ್ವ ಭಾವನೆಯನ್ನು ಮೂಡಿಸಲು ಈ ಇಫ್ತಾರ್ ಕೂಟವನ್ನು ಆಯೋಜನೆ ಮಾಡಲಾಗಿದೆ” ಎಂದು ಹೇಳಿದರು.

    ಶಿಕ್ಷಕ ಬಸಿರೋದ್ದಿನ್ ಮಾತನಾಡಿ, ಒಬ್ಬ ವ್ಯಕ್ತಿಯನ್ನು ಅರಿಯಬೇಕೆಂದರೆ ಆ ವ್ಯಕ್ತಿಯ ಜೊತೆ ಬೆರೆತಾಗ ಮಾತ್ರ ಆ ವ್ಯಕ್ತಿಯನ್ನು ಅರ್ಥಮಾಡಿಕೊಳ್ಳಲು ಸಾಧ್ಯ. ವ್ಯಕ್ತಿಯನ್ನು ಅರ್ಥ ಮಾಡಿಕೊಂಡರೆ ಸಮಾಜವನ್ನು ಅರ್ಥ ಮಾಡಿಕೊಂಡಂತೆ. ಸಮಾಜದಲ್ಲಿರುವ ಇತರ ಧರ್ಮೀಯರನ್ನು ಸೋದರತ್ವದಿಂದ ಕಾಣುವುದು ಮುಖ್ಯವಾಗಿದೆ ಎಂದರು.

    ರಮ್ಜಾನ್ ತಿಂಗಳು ಅತ್ಯಂತ ವೈಶಿಷ್ಟ ಪೂರ್ಣವಾದ ಮಾಸವಾಗಿದ್ದು ಮುಸ್ಲಿಮರು ಅತ್ಯಂತ ಪ್ರಾಧಾನ್ಯತೆಯೊಂದಿಗೆ ರಮ್ಜಾನ್ ರೋಜಾ ನಡೆಸುತ್ತಾರೆ. ಈ ಪ್ರಯುಕ್ತ ನಡೆಯುವ ಇಫ್ತಾರ್ ಕೂಟಗಳು ಸಮಾಜಕ್ಕೆ ಸಾಮಾಜಿಕ ಸಾಮರಸ್ಯ ಸಂದೇಶ ಬೀರುವ ಆಚರಣೆಯಾಗಿದೆ. ಇಫ್ತಾರ್ ಕೂಟದ ಮೂಲಕ ಸಮಾಜದ ಎಲ್ಲ ವರ್ಗದ ಜನರ ನಡುವೆ ಸೌಹಾರ್ದತೆ ಬೀರಲು ಸಾಧ್ಯ ಎಂದರು.

    ಶಾಮರಾವ ಜೈನಾಪುರೆ ಮಾತನಾಡಿ, ದೇವನೊಬ್ಬ ನಾಮ ಹಲವು ಎಂಬಂತೆ ನಾವೆಲ್ಲರೂ ಮನುಷ್ಯರೆಂಬ ಏಕತೆಯ ಭಾವನೆಯಲ್ಲಿ ಪ್ರೀತಿ, ಪ್ರೇಮ ಮತ್ತು ಮಾನವೀಯತೆ ಬೆಳೆಸಿಕೊಳ್ಳಬೇಕು ಎಂದರು.

    ಸುಮಾರು 200 ಕ್ಕಿಂತ ಹೆಚ್ಚು ಗ್ರಾಮದ ಎಲ್ಲಾ ಧರ್ಮದ ಜನರು ಮಸೀದಿಯಲ್ಲಿ ಭಾಗವಹಿಸಿ ಪರಸ್ಪರ ಸೌಹಾರ್ದತೆಯಿಂದ ಮುಸ್ಲಿಂ ಬಾಂಧವರೊಂದಿಗೆ ಭಾಗವಹಿಸಿ ಹಣ್ಣು ಹಂಪಲು ಸೇವನೆ ಮಾಡಿದರು.

    ಈ ಸಂದರ್ಭದಲ್ಲಿ ಗ್ರಾಮದ ಪಿಕೆಪಿಎಸ್ ಸದಸ್ಯರಾದ ಘಾಳೆಪ್ಪ ವಿಳಸಪೂರೆ, ಬಸವರಾಜ ನೇಳಗೆ, ಫರೀದಖಾನ್ ಸಂಗಮೇಶ ಕೌಟಗೆ, ಮಾಳಪ್ಪ ಮೇತ್ರೆ, ಗಣಪತಿ ಕಾಂಬ್ಳೆ, ಮಾರುತಿ ಕೋಳಿ, ನರಸಪ್ಪಾ ಜಮಾದಾರ, ವಿರಶೇಟ್ಟಿ ಕೌಟಗೆ, ತಾಜ್ಜೋದಿನ್ ಅತ್ಮಲೆ, ಬಸಯ್ಯ ಸ್ವಾಮಿ, ಸಿದ್ದಪ್ಪಾ ಉಜ್ಜುಣಗೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

    ನಾವೆಲ್ಲರೂ ಮಾನವೀಯತೆ ಪರವಾಗಿ ಇರುವವರು. ಹಾಗಾಗಿಯೇ ಸೌಹಾರ್ದತೆಗಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸುಮಾರು ವರ್ಷಗಳಿಂದ ನಮ್ಮೂರಲ್ಲಿ ಆಯೋಜಿಸುವ ಇಫ್ತಾರ್ ಕೂಟದಲ್ಲಿ ಎಲ್ಲಾ ಧರ್ಮದವರು ಪ್ರೀತಿಯಿಂದ ಭಾಗವಹಿಸುವರು. ಮನುಷ್ಯನಲ್ಲಿ ಉತ್ತಮ ಗುಣಗಳಿದ್ದರೆ ಸಮಾಜ ಪ್ರಗತಿಯತ್ತ ಸಾಗುತ್ತದೆ. ಹಿಂದೂ, ಮುಸ್ಲಿಂ ಎಂಬ ಭೇದ ಮರೆತು ಎಲ್ಲರೂ ಮನುಷ್ಯರು ಎನ್ನುವ ಉದಾರ ಮನಸ್ಸಿನಿಂದ ಜೀವನಸಾಗಿಸಬೇಕು.

    -ಅಯುಬಖಾನ್ ಪಟೇಲ್, ಗ್ರಾಮದ ಮುಖಂಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸರಗೂರು: ಮಕ್ಕಳಲ್ಲಿ ಜಂತುಹುಳು ಸೋಂಕಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಿ ಅವರ ದೈಹಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೆರವಾಗುವ ನಿಟ್ಟಿನಲ್ಲಿ…

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.