nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026

    ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ

    August 1, 2026
    Facebook Twitter Instagram
    ಟ್ರೆಂಡಿಂಗ್
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    • ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ
    • ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ
    • ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ
    • ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
    • ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಹೋದರತ್ವದ ಬದುಕು ಕಲಿಯುವುದೇ ಇಫ್ತಾರ್ ಕೂಟ: ಅಯುಬಖಾನ್ ಪಟೇಲ್
    ಜಿಲ್ಲಾ ಸುದ್ದಿ March 28, 2025

    ಸಹೋದರತ್ವದ ಬದುಕು ಕಲಿಯುವುದೇ ಇಫ್ತಾರ್ ಕೂಟ: ಅಯುಬಖಾನ್ ಪಟೇಲ್

    By adminMarch 28, 2025No Comments2 Mins Read
    ifthar

    ವರದಿ: ಅರವಿಂದ ಮಲ್ಲಿಗೆ, ಬೀದರ್

    ಬೀದರ್/ಔರಾದ್: ಪರರ ಬಗ್ಗೆ ಕಾಳಜಿ, ರಂಜಾನ್ ಉಪವಾಸ ಸಂದರ್ಭದಲ್ಲಿ ನಮ್ಮಲ್ಲಿರುವಂತಹ ಸಹೋದರತ್ವ ಸಮಾಜದಲ್ಲಿ ಒಳಗೊಳ್ಳುವುದು ಆಗಿದೆ. ಇಫ್ತಾರ್ ಕೂಟದಲ್ಲಿ ಮುಸ್ಲಿಮರಷ್ಟೇ ಅಲ್ಲಾ ಗ್ರಾಮದ ಎಲ್ಲಾ ಧರ್ಮದ ಜನರನ್ನು ಸೇರಿಸಿಕೊಂಡು ಈ ಒಂದು ಇಫ್ತಾರ್ ಕೂಟ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡರಾದ ಅಯುಬಖಾನ್ ಪಟೇಲ್ ಹೇಳಿದರು.

    ಔರಾದ್ ತಾಲ್ಲೂಕಿನ ಬೋರ್ಗಿ (ಜೆ) ಗ್ರಾಮದ ಮಸೀದಿ ಆವರಣದಲ್ಲಿ ಗುರುವಾರ ಆಯೋಜಿಸಿರುವ ಸಾಮೂಹಿಕ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾಮಾಜಿಕ ಜೀವನದಲ್ಲಿ ಸೌಹಾರ್ದಯುತವಾಗಿ ಬದುಕುವುದು ಹೇಗೆ ಎಂಬುದನ್ನು ಕಲಿತುಕೊಳ್ಳುವುದೇ ಇಫ್ತಾರ್ ಕೂಟದ ಉದ್ದೇಶವಾಗಿದೆ. ಪ್ರೀತಿ, ಭಾಂದವ್ಯ ಭ್ರಾತೃತ್ವ ಭಾವನೆಯನ್ನು ಮೂಡಿಸಲು ಈ ಇಫ್ತಾರ್ ಕೂಟವನ್ನು ಆಯೋಜನೆ ಮಾಡಲಾಗಿದೆ” ಎಂದು ಹೇಳಿದರು.

    ಶಿಕ್ಷಕ ಬಸಿರೋದ್ದಿನ್ ಮಾತನಾಡಿ, ಒಬ್ಬ ವ್ಯಕ್ತಿಯನ್ನು ಅರಿಯಬೇಕೆಂದರೆ ಆ ವ್ಯಕ್ತಿಯ ಜೊತೆ ಬೆರೆತಾಗ ಮಾತ್ರ ಆ ವ್ಯಕ್ತಿಯನ್ನು ಅರ್ಥಮಾಡಿಕೊಳ್ಳಲು ಸಾಧ್ಯ. ವ್ಯಕ್ತಿಯನ್ನು ಅರ್ಥ ಮಾಡಿಕೊಂಡರೆ ಸಮಾಜವನ್ನು ಅರ್ಥ ಮಾಡಿಕೊಂಡಂತೆ. ಸಮಾಜದಲ್ಲಿರುವ ಇತರ ಧರ್ಮೀಯರನ್ನು ಸೋದರತ್ವದಿಂದ ಕಾಣುವುದು ಮುಖ್ಯವಾಗಿದೆ ಎಂದರು.

    ರಮ್ಜಾನ್ ತಿಂಗಳು ಅತ್ಯಂತ ವೈಶಿಷ್ಟ ಪೂರ್ಣವಾದ ಮಾಸವಾಗಿದ್ದು ಮುಸ್ಲಿಮರು ಅತ್ಯಂತ ಪ್ರಾಧಾನ್ಯತೆಯೊಂದಿಗೆ ರಮ್ಜಾನ್ ರೋಜಾ ನಡೆಸುತ್ತಾರೆ. ಈ ಪ್ರಯುಕ್ತ ನಡೆಯುವ ಇಫ್ತಾರ್ ಕೂಟಗಳು ಸಮಾಜಕ್ಕೆ ಸಾಮಾಜಿಕ ಸಾಮರಸ್ಯ ಸಂದೇಶ ಬೀರುವ ಆಚರಣೆಯಾಗಿದೆ. ಇಫ್ತಾರ್ ಕೂಟದ ಮೂಲಕ ಸಮಾಜದ ಎಲ್ಲ ವರ್ಗದ ಜನರ ನಡುವೆ ಸೌಹಾರ್ದತೆ ಬೀರಲು ಸಾಧ್ಯ ಎಂದರು.

    ಶಾಮರಾವ ಜೈನಾಪುರೆ ಮಾತನಾಡಿ, ದೇವನೊಬ್ಬ ನಾಮ ಹಲವು ಎಂಬಂತೆ ನಾವೆಲ್ಲರೂ ಮನುಷ್ಯರೆಂಬ ಏಕತೆಯ ಭಾವನೆಯಲ್ಲಿ ಪ್ರೀತಿ, ಪ್ರೇಮ ಮತ್ತು ಮಾನವೀಯತೆ ಬೆಳೆಸಿಕೊಳ್ಳಬೇಕು ಎಂದರು.

    ಸುಮಾರು 200 ಕ್ಕಿಂತ ಹೆಚ್ಚು ಗ್ರಾಮದ ಎಲ್ಲಾ ಧರ್ಮದ ಜನರು ಮಸೀದಿಯಲ್ಲಿ ಭಾಗವಹಿಸಿ ಪರಸ್ಪರ ಸೌಹಾರ್ದತೆಯಿಂದ ಮುಸ್ಲಿಂ ಬಾಂಧವರೊಂದಿಗೆ ಭಾಗವಹಿಸಿ ಹಣ್ಣು ಹಂಪಲು ಸೇವನೆ ಮಾಡಿದರು.

    ಈ ಸಂದರ್ಭದಲ್ಲಿ ಗ್ರಾಮದ ಪಿಕೆಪಿಎಸ್ ಸದಸ್ಯರಾದ ಘಾಳೆಪ್ಪ ವಿಳಸಪೂರೆ, ಬಸವರಾಜ ನೇಳಗೆ, ಫರೀದಖಾನ್ ಸಂಗಮೇಶ ಕೌಟಗೆ, ಮಾಳಪ್ಪ ಮೇತ್ರೆ, ಗಣಪತಿ ಕಾಂಬ್ಳೆ, ಮಾರುತಿ ಕೋಳಿ, ನರಸಪ್ಪಾ ಜಮಾದಾರ, ವಿರಶೇಟ್ಟಿ ಕೌಟಗೆ, ತಾಜ್ಜೋದಿನ್ ಅತ್ಮಲೆ, ಬಸಯ್ಯ ಸ್ವಾಮಿ, ಸಿದ್ದಪ್ಪಾ ಉಜ್ಜುಣಗೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

    ನಾವೆಲ್ಲರೂ ಮಾನವೀಯತೆ ಪರವಾಗಿ ಇರುವವರು. ಹಾಗಾಗಿಯೇ ಸೌಹಾರ್ದತೆಗಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸುಮಾರು ವರ್ಷಗಳಿಂದ ನಮ್ಮೂರಲ್ಲಿ ಆಯೋಜಿಸುವ ಇಫ್ತಾರ್ ಕೂಟದಲ್ಲಿ ಎಲ್ಲಾ ಧರ್ಮದವರು ಪ್ರೀತಿಯಿಂದ ಭಾಗವಹಿಸುವರು. ಮನುಷ್ಯನಲ್ಲಿ ಉತ್ತಮ ಗುಣಗಳಿದ್ದರೆ ಸಮಾಜ ಪ್ರಗತಿಯತ್ತ ಸಾಗುತ್ತದೆ. ಹಿಂದೂ, ಮುಸ್ಲಿಂ ಎಂಬ ಭೇದ ಮರೆತು ಎಲ್ಲರೂ ಮನುಷ್ಯರು ಎನ್ನುವ ಉದಾರ ಮನಸ್ಸಿನಿಂದ ಜೀವನಸಾಗಿಸಬೇಕು.

    -ಅಯುಬಖಾನ್ ಪಟೇಲ್, ಗ್ರಾಮದ ಮುಖಂಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ

    August 1, 2026

    ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ

    August 1, 2026

    ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ

    August 1, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಜಾರಿಯಾಗಿ ಇದುವರೆಗೂ ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಯಡಿ 323 ಕೋಟಿ ಹಣ…

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026

    ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ

    August 1, 2026

    ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ

    August 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.