ಹಿರಿಯೂರು: ಮುಸ್ಲಿಂ ಭಾಂಧವರ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಹಿರಿಯೂರು ನಗರದ ವಾರ್ಡ್ ನಂ.06 ರಲ್ಲಿನ ಜಾಮೀಯ ಮಸೀದಿಯಲ್ಲಿ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಏರ್ಪಾಡಿಸಲಾಗಿದ್ದ ಸೌಹಾರ್ದದ ಇಪ್ತಿಯಾರ್ ಕೂಟ ಕಾರ್ಯಕ್ರಮದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರಾದ ಡಿ.ಸುಧಾಕರ್ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಸ್ಲಿಂ ಬಾಂಧವರು ಏರ್ಪಡಿಸಿದ್ದ ಈ ಇಫ್ತಿಯಾರ್ ಕೂಟ ಕಾರ್ಯಕ್ರಮಕ್ಕೆ ಭಾಗವಹಿಸಿದ್ದು ನಿಜಕ್ಕೂ ಸಹ ನನಗೆ ಸಂತೋಷ ತಂದಿದೆ. ಅದರಲ್ಲೂ ಸಹ ಅಂದಿನಿಂದ ಇಂದಿನವರೆಗೂ ಈ ಹಿರಿಯೂರು ತಾಲ್ಲೂಕಿನ ಮುಸ್ಲಿಂ ಬಾಂಧವರು ನನ್ನ ಮೇಲೆ ಇಟ್ಟಿರುವಂತಹ ಪ್ರೀತಿ, ವಾತ್ಸಲ್ಯವನ್ನು ನಾನು ಎಂದಿಗೂ ಸಹ ಮರೆಯಲು ಸಾಧ್ಯವಿಲ್ಲ ಎಂದ ಅವರು, ಇದೇ ಸಂದರ್ಭದಲ್ಲಿ ಎಲ್ಲಾ ಮುಸ್ಲಿಂ ಭಾಂಧವರಿಗೂ ರಂಜಾನ್ ಹಬ್ಬದ ಶುಭಾಶಯ ತಿಳಿಸಿದರು.
ಚಿತ್ರದುರ್ಗ ಜಿಲ್ಲಾ ಪಂಚಾಯತಿ ಸದಸ್ಯರಾದ ಮಹಮ್ಮದ್ ಫಕೃದ್ದಿನ್ ನವರು ಮಾತನಾಡಿ, ಇಂದಿನ ಸೌಹಾರ್ದದ ಇಫ್ತಿಯಾರ್ ಕೂಟ ಕಾರ್ಯಕ್ರಮಕ್ಕೆ ಮಾಜಿ ಶಾಸಕರಾದ ಡಿ.ಸುಧಾಕರ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನಿಜಕ್ಕೂ ಸಹ ಸಂತೋಷವಾಗಿದೆ . ಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ಡಿ.ಸುಧಾಕರ್ ರವರು ಸಹ ಅತಿ ಹೆಚ್ಚಿನ ಬಹುಮತಗಳಿಂದ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಭವಿಷ್ಯ ನುಡಿದರು.
ಈ ಸಂದರ್ಭದಲ್ಲಿ ಸೂರ್ಯೋದಯ ಸ್ಟುಡಿಯೋ ಅಬ್ದುಲ್ ಕರೀಂ, ನಗರಸಭೆ ಸದಸ್ಯರಾದ ಸನಾವುಲ್ಲಾ, ಜಬೀವುಲ್ಲಾ, ಸಾದತ್ ವುಲ್ಲಾ, ದಾದಾಪೀರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ ರಮೇಶ್, ಅಮೃತ ಸ್ವಾಮಿ, ಮನು, ಸೈಯದ್ ಸಾಧಿಕ್, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಹಾಗೂ ಮುಸ್ಲಿಂ ಬಾಂಧವರು ಇದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5