ರೈತರ ವಿಚಾರವಾಗಿ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಆತ್ಮಹತ್ಯೆ ಮಾಡಿಕೊಂಡರೆ ನಾನು ₹5 ಕೋಟಿ ಪರಿಹಾರ ಕೊಡುತ್ತೇನೆ. ಅವರ ಮಾತನ್ನು ಬೆಂಬಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಚುನಾವಣಾ ಪ್ರಚಾರ ಸಂದರ್ಭ ಮಾತನಾಡಿದ ಅವರು, ‘ರೈತರು ಪರಿಹಾರದ ಆಸೆಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಸಚಿವ ಶಿವಾನಂದ ಅವರು ವಿಧಾನಸೌಧದಲ್ಲೇ ಈ ಹಿಂದೆ ಹೇಳಿಕೆ ನೀಡಿದ್ದಾರೆ. ಅವತ್ತೇ, ‘ನೀವು ಕೂಡಾ ಆತ್ಮಹತ್ಯೆ ಮಾಡಿಕೊಂಡು ತೋರಿಸಿ’ ಎಂದು ನಾನು ಹೇಳಿದ್ದೆ. ಈಗಲೂ ಹೇಳುತ್ತೇನೆ; ನಮ್ಮ ಬಳಿ ಹಣವಿಲ್ಲದಿದ್ದರೂ ಜನರಿಂದ ಸಂಗ್ರಹಿಸಿ ನಿಮ್ಮ ಕುಟುಂಬಕ್ಕೆ ಕೊಡುತ್ತೇವೆ’ ಎಂದು ಅವರು ಹೇಳಿದ್ದಾರೆ.
ತಾನು ಪಂಚಮಸಾಲಿ ಎಂದು ಪುತ್ರಿ ಪರವಾಗಿ ಮತ ಕೇಳುತ್ತಿರುವ ಶಿವಾನಂದ ಪಾಟೀಲ ಅವರು, ಪಂಚಮಸಾಲಿ ಹೋರಾಟ ನಡೆದಾಗ ಇವರೆಲ್ಲ ಎಲ್ಲಿ ಹೋಗಿದ್ದರು’ ಎಂದು ಯತ್ನಾಳ್ ಖಾರವಾಗಿ ಕುಟುಕಿದ್ದಾರೆ. ‘ಬಿಜೆಪಿ ಪಕ್ಷವು 400 ಸ್ಥಾನಗಳನ್ನು ಗೆದ್ದರೂ ಸಂವಿಧಾನ ಬದಲಾವಣೆ ಮಾಡುವುದಿಲ್ಲ. ಬದಲಾವಣೆಯ ಮಾತು ಆಡಿದವರಿಗೆ ಪಕ್ಷದ ಟಿಕೆಟ್ ಅನ್ನೇ ಕೊಟ್ಟಿಲ್ಲ’ ಎಂದವರು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA