ತುಮಕೂರು: ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನ ಕುರಿತಂತೆ, ಜಿಲ್ಲಾ ಪಂಚಾಯತ್ ತುಮಕೂರು ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ, ಜಲ ಜೀವನ್ ಮಿಷನ್ ಯೋಜನೆಯ ಎಲ್ಲಾ 10 ತಾಲೂಕುಗಳ ಗುತ್ತಿಗೆದಾರರ ಸಭೆಯನ್ನು ಆಯೋಜನೆ ಮಾಡಲಾಗಿತ್ತು,
ಸದರಿ ಸಭೆಯಲ್ಲಿ ಗುತ್ತಿಗೆದಾರರ ಸಮಸ್ಯೆಗಳನ್ನು ಕುರಿತಂತೆ, ಕಾಮಗಾರಿಗಳನ್ನು ತುರ್ತಾಗಿ ಮುಕ್ತಾಯಗೊಳಿಸಲು ಸುದೀರ್ಘವಾಗಿ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಯಿತು.
- ಗುತ್ತಿಗೆದಾರರು ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಕೈಗೊಂಡು ವಿಳಂಬ ಮಾಡದೆ ನಿಗದಿತ ಕಾಲಾವಧಿಯಲ್ಲಿ ಮುಕ್ತಾಯ ಮಾಡಿ ಹರ್ ಘರ್ ಜಲ್ ಘೋಷಣೆ ಮಾಡಿ ಗ್ರಾಮ ಪಂಚಾಯಿತಿ್ಗೆ ಹಸ್ತಾಂತರ ಮಾಡಲು ತಿಳಿಸಲಾಯಿತು.
- ಬಾಕಿ ಇರುವ ಕಾಮಗಾರಿಗಳ ಬಿಲ್ ಗಳ ಪ್ರಸ್ತಾವನೆಗಳನ್ನು ಎಲ್ಲಾ ಉಪ ವಿಭಾಗಗಳಿಂದ ಪಡೆದು 1 ವಾರದೊಳಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಬಿಲ್ ಪಾವತಿಗೆ ಅಗತ್ಯ ಕ್ರಮವಹಿಸಲು ಕಾರ್ಯಪಾಲಕ ಇಂಜಿನಿಯರ್ ರವರಿಗೆ ಸೂಚನೆ ನೀಡಲಾಯಿತು.
- EOT ಪ್ರಸ್ತಾವನೆಗಳನ್ನು ಯೋಜನೆ ಮಾರ್ಗಸೂಚಿ ಪ್ರಕಾರ ಪ್ರಸ್ತಾವನೆಗಳನ್ನು ಸಿದ್ಧಪಡಿಸಿ 15 ದಿವಸದೊಳಗಾಗಿ ಜಿಲ್ಲಾ ಪಂಚಾಯತ್ ಕಚೇರಿಗೆ ಸಲ್ಲಿಸಿ, ಅನುಮೋದನೆ ಪಡೆಯಲು ಕಾರ್ಯಪಾಲಕ ಇಂಜಿನಿಯರ್ ಹಾಗೂ ಎಲ್ಲ ತಾಲೂಕುಗಳ ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ ಅವರುಗಳಿಗೆ ಸೂಚನೆ ನೀಡಲಾಯಿತು.
- ಈಗಾಗಲೇ ಕಾಮಗಾರಿ ಮುಕ್ತಾಯಗೊಂಡಿರುವ ಕಾಮಗಾರಿಗಳ Work Sleep ಗಳನ್ನು ಅದೀಕ್ಷಕ ಇಂಜಿನಿಯರ್ ರವರಿಂದ ತಪಾಸಣಾ ವರದಿಯೊಂದಿಗೆ 15 ದಿವಸದೊಳಗಾಗಿ ಜಿಲ್ಲಾ ಪಂಚಾಯತ್ ಕಚೇರಿಗೆ ಸಲ್ಲಿಸಿ ಅನುಮೋದನೆ ಪಡೆಯಲು, ಕಾರ್ಯಪಾಲಕ ಇಂಜಿನಿಯರ್ ಹಾಗೂ ಸಹಾಯಕ ಕಾರ್ಯಪರಕ ಇಂಜಿನಿಯರ್ ರವರುಗಳಿಗೆ ಸೂಚನೆ ನೀಡಲಾಯಿತು.
- ಪೂರ್ಣಗೊಂಡಿರುವ ಕಾಮಗಾರಿಗಳ ಬಾಕಿ ಇರುವ ಸಮುದಾಯವಂತಿಕೆ ಮೊತ್ತ ಪಾವತಿಗೆ ಸಂಬಂದಿಸಿದಂತೆ ಸರ್ಕಾರ ಹಾಗೂ ನಿರ್ದೆಶಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳಗಳಲಾಗುವುದೆಂದ ತಿಳಿಸಿದರು.
- ಗುತ್ತಿಗೆದಾರರ ಇತರೆ ಎಲ್ಲ ಸಮಸ್ಯೆಗಳನ್ನು ಸಭೆಯಲ್ಲಿ ಚರ್ಚಿಸಿ, ಅಂತಿಮವಾಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಹಾಗೂ ಸಮುದಾಯಗಳ ಅಗತ್ಯ ಸಹಕಾರದೊಂದಿಗೆ ಉಳಿಕೆ ಬಾಕಿ ಇರುವ ಎಲ್ಲ ಕಾಮಗಾರಿಗಳನ್ನು ಡಿಸೆಂಬರ್ 2025ರ ಅಂತ್ಯದೊಳಗಾಗಿ ಪೂರ್ಣಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸದರಿ ಸಭೆಯಲ್ಲಿ ಉಪಕಾರ್ಯಧರ್ಶಿ (ಅಭಿವೃದ್ದಿ), ಕಾರ್ಯಪಾಲಕ ಇಂಜಿನಿಯರ್, ಎಲ್ಲಾ ತಾಲ್ಲೂಕುಗಳ ಸಹಾಯಕ ಕಾರ್ಯಾಪಾಲಕ ಇಂಜಿನಿಯರ್, ಹಾಗೂ ಎಲ್ಲಾ ತಾಲ್ಲೂಕುಗಳ 110 ಜನ ಗುತ್ತಿಗೆದಾರರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW