nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದೆ ಸಂಸ್ಕೃತ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ April 20, 2025

    ಹಿಂದೆ ಸಂಸ್ಕೃತ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು: ಸಿಎಂ ಸಿದ್ದರಾಮಯ್ಯ

    By adminApril 20, 2025No Comments2 Mins Read
    siddaramaiah

    ತುಮಕೂರು: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

    ಪ್ರಜಾ ಪ್ರಗತಿ ಪತ್ರಿಕೆ,     ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

    ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು.

    ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ ಕತೆಗಳನ್ನು ಕಟ್ಟಿ ಬಿಡ್ತಾರೆ ಹುಷಾರು ಎಂದು ಎಚ್ಚರಿಸಿದರು.

    ಬಸವಣ್ಣ 850 ವರ್ಷಗಳ ಹಿಂದೆಯೇ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು.   ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ. ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು.

    ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದು ವಿವರಿಸಿದರು.

    ಮುಖ್ಯಮಂತ್ರಿಗಳ ಭಾಷಣದ ಇತರೆ ಹೈಲೈಟ್ಸ್:

    * ಜಾತಿಗೆ ಚಲನ ಇಲ್ಲ. ವರ್ಗಕ್ಕೆ ಚಲನೆ ಇಲ್ಲ. ಜಾತಿ ವ್ಯವಸ್ಥೆ ನಿಂತ ನೀರು. ಚಲನೆ ಇಲ್ಲ. ಆರ್ಥಿಕ ಚಲನೆ  ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ. ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ ಇದೆ ಎಂದರು.

    * ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ. ಆದರೆ ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು, ಶೈಕ್ಷಣಿಕ ಸಮಾನತೆ ಇಲ್ಲದಿರುವುದು  ಬೇಸರದ ಸಂಗತಿ.

    * ನಾನು ಶಿಕ್ಷಣ ಪಡೆದಿರುವುದು ನನ್ನ ಸ್ವಾರ್ಥಕ್ಕೆ ಅಲ್ಲ. ಅವಕಾಶ ವಂಚಿತ ಸಮುದಾಯಗಳ ಬಿಡುಗಡೆಗಾಗಿ ವಿದ್ಯೆ ಸಂಪಾದನೆ ಮಾಡಿದ್ದೇನೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಅರ್ಥ ಮಾಡಿಕೊಳ್ಳಬೇಕು.

    * ಸಂವಿಧಾನ ಬರದೇ ಇದ್ದರೆ ನಾವು, ನೀವು ಶಿಕ್ಷಣ ಪಡೆಯಲು ಸಾಧ್ಯವಿರಲಿಲ್ಲ.

    ಮನುಸ್ಮೃತಿ ಕಾರಣದಿಂದ ಜಾತಿ ಅಸಮಾನತೆ, ಜಾತಿ ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು

    *ಪಟ್ಟಭದ್ರರು  ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದಾರೆ. ಅದಕ್ಕೇ ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದರು. ನಿಮ್ಮಲ್ಲಿ ಎಷ್ಟು ಜನ ಕರ್ಮ ಸಿದ್ಧಾಂತ ತಿರಸ್ಕರಿಸಿದ್ದೀರೋ ಗೊತ್ತಿಲ್ಲ.

    *ಬ್ರಹ್ಮ ಒಬ್ಬರಿಗೆ ಶಿಕ್ಷಣ, ಮತ್ತೊಬ್ಬರಿಗೆ ಅನಕ್ಷರತೆ ಸಿಗಲಿ ಅಂತ ಬರೆದರಾ? ಒಬ್ಬನಿಗೆ ಬಡವನಾಗು, ಮತ್ತೊಬ್ಬನಿಗೆ ಶ್ರೀಮಂತನಾಗು ಅಂತ ಬ್ರಹ್ಮ ಬರೆದರಾ ? ಒಬ್ಬ ಹೊಟ್ಟೆತುಂಬ ಉಣ್ಣಬೇಕು, ಉಳಿದವರು ಹಸಿವಿನಿಂದ ಬಿದ್ದಿರಬೇಕು ಎಂದು ಬ್ರಹ್ಮ ಬರೆದುಬಿಟ್ಟರಾ ಎಂದು ಪ್ರಶ್ನಿಸಿದರು.

    ಪಟ್ಟಭದ್ರರು ಬಸವಣ್ಣನವರ ಕ್ರಾಂತಿ ಮುಂದುವರೆಸಲು ಬಿಡಲಿಲ್ಲ. ಆದ್ದರಿಂದ ನಾವು ವೈಜ್ಞಾನಿಕವಾಗಿ, ವೈಚಾರಿಕವಾಗಿ ಚಿಂತಿಸುವುದು ಅಗತ್ಯ

    *ಅಹಿಂದ ಸಮಾಜ ಮತ್ತು ಎಲ್ಲಾ ಜಾತಿ, ಧರ್ಮಗಳ ಬಡತನ, ಹಸಿವು ನಿವಾರಣೆ ಆಗಬೇಕು. ಅನ್ನಕ್ಕಾಗಿ ಯಾರೂ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿ ನಿಲ್ಲಬಾರದು ಎನ್ನುವ ಕಾರಣದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದು ಸ್ಮರಿಸಿದರು.

    *ಕಾಯಕ, ದಾಸೋಹ ಬಸವಣ್ಣನವರ ತತ್ವ.    ಇದನ್ನು ಎಲ್ಲರೂ ಪಾಲಿಸಬೇಕು ಎಂದರು.

    *ಎಲ್ಲಾ ಶ್ರಮಿಕ ವರ್ಗಗಳ ಸಂಸ್ಕೃತಿ, ಆಚಾರ, ವಿಚಾರ ಹೊರಗೆ ಬರಬೇಕು. ಇದಕ್ಕಾಗಿ ಎಲ್ಲರೂ ಸಾಹಿತ್ಯ ರಚನೆಯಲ್ಲಿ ತೊಡಗೇಕು ಎಂದರು.

    *ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ನಿಗಧಿಯಾಗಿತ್ತು. ಆದರೆ ಈಗ ಶಿಕ್ಷಣ ಸಿಕ್ಕಿದೆ. ನಿಮ್ಮ ನಿಮ್ಮ‌ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ. ನಮ್ಮ ಜ್ಞಾನ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ದೇಹಕ್ಕೆ ಜಿಲೆಟಿನ್ ಕಡ್ಡಿಗಳನ್ನು ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಪುತ್ರಿ…

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.