nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ವಿದ್ಯುತ್ ಗುತ್ತಿಗೆದಾರರ ಸಂಘದ ನೂತನ ಕಚೇರಿ ಕಟ್ಟಡ ಉದ್ಘಾಟನೆ
    ಕೊರಟಗೆರೆ August 30, 2025

    ಕೊರಟಗೆರೆ ವಿದ್ಯುತ್ ಗುತ್ತಿಗೆದಾರರ ಸಂಘದ ನೂತನ ಕಚೇರಿ ಕಟ್ಟಡ ಉದ್ಘಾಟನೆ

    By adminAugust 30, 2025No Comments2 Mins Read
    koratagere

    ಕೊರಟಗೆರೆ : ಬಡವ, ಶ್ರೀಮಂತ ಎನ್ನದೇ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿದ್ಯುತ್ ಅವಶ್ಯಕತೆಯಿದೆ. ವಿದ್ಯುತ್‌ನಿಂತ ಉಪಯೋಗವೂ ಇದೆ, ಅಪಾಯವು ಇದೆ. ಇದಕ್ಕೆ ಯಾವುದೇ ಜಾತಿ, ಧರ್ಮ, ಭೇದವಿಲ್ಲ ಎಂದು ಎಲೆರಾಂಪುರ ಶ್ರೀಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು.

    ಕೊರಟಗೆರೆ ಪಟ್ಟಣದ ಬೆಸ್ಕಾಂ ಕಚೇರಿ ಪಕ್ಕದಲ್ಲಿನ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ನೂತನ ಕಚೇರಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಗುತ್ತಿಗೆದಾರರ ನಡುವೆ ಉತ್ತಮ ಬಾಂಧವ್ಯ ಇರಬೇಕು, ಗುತ್ತಿಗೆದಾರರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ತಮ್ಮ ವೃತ್ತಿಯಲ್ಲಿ ಯಶಸ್ವಿಯಾಗಬೇಕಿದೆ ಎಂದರು.


    Provided by
    Provided by

    ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ವಿದ್ಯುತ್ ಗುತ್ತಿಗೆದಾರರು ಸಂಘಟನೆ ಸ್ಥಾಪನೆ ಮೂಲಕ ಸಾಧಕ ಬಾದಕಗಳಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರ ಕೂಡ ವಿದ್ಯುತ್ ಗುತ್ತಿಗೆದಾರರ ಬೇಡಿಗಳನ್ನು ಆದಷ್ಟು ಬೇಗ ಈಡೇರಿಸಬೇಕಿದೆ. ಖಾಸಗಿ ಸ್ಥಳದಲ್ಲಿ ಕಚೇರಿ ತಾತ್ಕಲಿಕವಾಗಿರಲಿದ್ದು ಶಾಸಕರು ಈ ಬಗ್ಗೆ ಗಮನಹರಿಸಿ ಗುತ್ತಿಗೆದಾರರ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ, ಉದ್ಘಾಟನೆ ಮಾಡಬೇಕಿದೆ ಎಂದು ಒತ್ತಾಯ ಮಾಡಿದರು.

    ಕೇಂದ್ರ ಸಮಿತಿ ಕಾರ್ಯದರ್ಶಿ ಹೆಚ್.ವಿ ಚಂದ್ರಬಾಬು ಮಾತನಾಡಿ, ರಾಜ್ಯದ 31 ಜಿಲ್ಲಾ ಸಮಿತಿ, 236 ತಾ.ಸಮಿತಿಗಳಿದ್ದು ಹಲವು ಸಮಿತಿ ಸ್ವಂತ ಕಟ್ಟಡವನ್ನು ಹೊಂದಿದೆ. ಕೊರಟಗೆರೆ ತಾಲ್ಲೂಕಿನಲ್ಲೂ ನೂತನ ಕಚೇರಿ ಉದ್ಘಾಟನೆಯಾಗಿದೆ. 1922ರಲ್ಲಿ ನಮ್ಮ ಸಂಘಟನೆಯಲ್ಲಿ ಬೆರಳೆಣಿಕೆಯಷ್ಟು ಮಂದಿ ಸದಸ್ಯರು ಮಾತ್ರ ನೋಂದಾಯಿತರಾಗಿದ್ದರು, ಪ್ರಸ್ತುತವಾಗಿ 15 ಸಾವಿರಕ್ಕೂ ಹೆಚ್ಚಿನ ಸಂಖೈಯಲ್ಲಿ ಸದಸ್ಯರು ನೊಂದಾಯಿತರಾಗಿದ್ದಾರೆ. ಸಂಘಟನೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ರಾಜ್ಯದಲ್ಲಿ ಅತ್ಯುತ್ತಮವಾಗಿ ತಂತ್ರಜ್ಞಾನ ಬಳಕೆಯಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

    ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಅಶೋಕ್‌ ಕುಮಾರ್ ಮಾತನಾಡಿ, ವಿದ್ಯುತ್ ಗುತ್ತಿಗೆದಾರರ ಸಂಘದ ಸಹಕಾರದೊಂದಿಗೆ ಇಂದು ಗುತ್ತಿಗೆದಾರರ ನೂತನ ಕಚೇರಿ ಉದ್ಘಾಟನೆಯಾಗಿದೆ. ಕೇಂದ್ರ ಸಮಿತಿ ರಾಜ್ಯದಲ್ಲಿ 31 ಜಿಲ್ಲೆ, 236 ತಾಲ್ಲೂಕುಗಳಲ್ಲಿ ಸಂಘಟನೆ ಕಾರ್ಯನಿರ್ವಹಿಸುತ್ತಿದೆ. ತುಮಕೂರು ಜಿಲ್ಲೆಯಲ್ಲಿ ಕೆಲ ತಾಲ್ಲೂಕುಗಳಲ್ಲಿ ಮಾತ್ರ ಕಚೇರಿಯಿದೆ. ಮುಂದಿನ ದಿನಗಳಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ಕಟ್ಟಡ ಕಟ್ಟುವಂತಹ ಆಶಾ ಮನೋಭಾವನೆ ಹೊಂದಿದ್ದೇವೆ ಎಂದು ಹೇಳಿದರು.

    ತಾಲ್ಲೂಕು ಸಮಿತಿಯ ತಾ.ಅಧ್ಯಕ್ಷ ಎಸ್.ಆರ್.ಸೋಮಶೇಖರ್ ಮಾತನಾಡಿ, ಗುತ್ತಿಗೆದಾರ ಸಂಘದಲ್ಲಿ ಸದಸ್ಯರ ಪ್ರೀತಿ ವಿಶ್ವಾಸದಿಂದ ಮೂರನೇ ಬಾರಿ ಅಧ್ಯಕ್ಷನಾಗಿ ಮುಂದುವರೆದಿದ್ದೇನೆ, ಇದೇ ರೀತಿ ತಮ್ಮೆಲ್ಲರಾ ಸಹಕಾರ ನೀಡುವಂತೆ ಕೋರಿದರು.

    ಈ ಸಂದರ್ಭದಲ್ಲಿ ಗೃಹ ಸಚಿವ ವಿಶೇಷ ಅಧಿಕಾರಿ ಡಾ.ಕೆ.ನಾಗಣ್ಣ, ಬೆಸ್ಕಾಂ ಎಇಇ ಪ್ರಸನ್ನಕುಮಾರ್, ತಾ.ಸಮಿತಿ ಉಪಾಧ್ಯಕ್ಷ ಮೂಡಲಗಿರಿಯಪ್ಪ, ಎ.ಆರ್.ರವಿಕುಮಾರ್, ಬಿ.ಆರ್.ಲಕ್ಷ್ಮಿ ಕಾಂತಬಾಬು, ಫಾರುಕ್ ಅಹಮದ್, ಪ್ರದೀಪ್‌ ಕುಮಾರ್ ಸೇರಿದಂತೆ ಇತರರು ಇದ್ದರು.

    ಗುತ್ತಿಗೆದಾರರ ಸಂಘದ ಕೇಂದ್ರ ಸಮಿತಿ ಕಾರ್ಯದರ್ಶಿ ಹೆಚ್.ವಿ ಚಂದ್ರಬಾಬು ಮಾತನಾಡಿ, ಗುತ್ತಿಗೆದಾರರ ಸಂಘಟನೆ ರಾಜ್ಯ ಮಟ್ಟದಲ್ಲಿ ವಿಶೇಷ ಮನ್ನಣೆ ಪಡೆದಿದೆ. ಇತಿಹಾಸವಿರುವ ನಮ್ಮ ಸಂಘಟನೆಯಲ್ಲಿ ವಿದ್ಯುತ್ ಗುತ್ತಿಗೆದಾರರ ಆಕಸ್ಮಿಕ ಮರಣದಿಂದ ಮೃತರಾದ ವ್ಯಕ್ತಿಯ ಕುಟುಂಬಕ್ಕೆ 2 ಲಕ್ಷ ಪರಿಹಾರ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ, ಕಾಮಗಾರಿ ಸಂದರ್ಭದಲ್ಲಿ ಗ್ರಾಹಕರು ಸಮಸ್ಯೆಗೆ ಸಿಲುಕಿದ್ದಲ್ಲಿ ಸಂಘಟನೆಯು ಗ್ರಾಹಕರ ಪರವಾಗಿ ಧ್ವನಿ ಎತ್ತಿ ಬೆಂಬಲ ಸೂಚಿಸಿದೆ. ಗುತ್ತಿಗೆದಾರರಿಗೆ ಒಂದು ಲಕ್ಷದಿಂದ ಐದು ಲಕ್ಷದವರೆಗೆ ತುಂಡು ಗುತ್ತಿಗೆ ನೀಡುವಂತೆ ಕೆಪಿಟಿಟಿ ಅಕ್ಟ್ ಬದಲಾವಣೆಯಾಗಿದೆ ಎಂದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಕಾರವಾರ:  ಜಿಲ್ಲೆಯಲ್ಲಿ ಘಟಿಸುವ ಪ್ರತಿಯೊಂದು ಜನನ ಮತ್ತು ಮರಣ ಘಟನೆಗಳನ್ನು 21 ದಿನಗಳ ಒಳಗೆ ಕಡ್ಡಾಯವಾಗಿ ಶೇ.100 ರಷ್ಟು ನೋಂದಣಿ…

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.