nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ವಿದ್ಯುತ್ ಗುತ್ತಿಗೆದಾರರ ಸಂಘದ ನೂತನ ಕಚೇರಿ ಕಟ್ಟಡ ಉದ್ಘಾಟನೆ
    ಕೊರಟಗೆರೆ August 30, 2025

    ಕೊರಟಗೆರೆ ವಿದ್ಯುತ್ ಗುತ್ತಿಗೆದಾರರ ಸಂಘದ ನೂತನ ಕಚೇರಿ ಕಟ್ಟಡ ಉದ್ಘಾಟನೆ

    By adminAugust 30, 2025No Comments2 Mins Read
    koratagere

    ಕೊರಟಗೆರೆ : ಬಡವ, ಶ್ರೀಮಂತ ಎನ್ನದೇ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿದ್ಯುತ್ ಅವಶ್ಯಕತೆಯಿದೆ. ವಿದ್ಯುತ್‌ನಿಂತ ಉಪಯೋಗವೂ ಇದೆ, ಅಪಾಯವು ಇದೆ. ಇದಕ್ಕೆ ಯಾವುದೇ ಜಾತಿ, ಧರ್ಮ, ಭೇದವಿಲ್ಲ ಎಂದು ಎಲೆರಾಂಪುರ ಶ್ರೀಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು.

    ಕೊರಟಗೆರೆ ಪಟ್ಟಣದ ಬೆಸ್ಕಾಂ ಕಚೇರಿ ಪಕ್ಕದಲ್ಲಿನ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ನೂತನ ಕಚೇರಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಗುತ್ತಿಗೆದಾರರ ನಡುವೆ ಉತ್ತಮ ಬಾಂಧವ್ಯ ಇರಬೇಕು, ಗುತ್ತಿಗೆದಾರರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ತಮ್ಮ ವೃತ್ತಿಯಲ್ಲಿ ಯಶಸ್ವಿಯಾಗಬೇಕಿದೆ ಎಂದರು.


    Provided by
    Provided by

    ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ವಿದ್ಯುತ್ ಗುತ್ತಿಗೆದಾರರು ಸಂಘಟನೆ ಸ್ಥಾಪನೆ ಮೂಲಕ ಸಾಧಕ ಬಾದಕಗಳಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರ ಕೂಡ ವಿದ್ಯುತ್ ಗುತ್ತಿಗೆದಾರರ ಬೇಡಿಗಳನ್ನು ಆದಷ್ಟು ಬೇಗ ಈಡೇರಿಸಬೇಕಿದೆ. ಖಾಸಗಿ ಸ್ಥಳದಲ್ಲಿ ಕಚೇರಿ ತಾತ್ಕಲಿಕವಾಗಿರಲಿದ್ದು ಶಾಸಕರು ಈ ಬಗ್ಗೆ ಗಮನಹರಿಸಿ ಗುತ್ತಿಗೆದಾರರ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ, ಉದ್ಘಾಟನೆ ಮಾಡಬೇಕಿದೆ ಎಂದು ಒತ್ತಾಯ ಮಾಡಿದರು.

    ಕೇಂದ್ರ ಸಮಿತಿ ಕಾರ್ಯದರ್ಶಿ ಹೆಚ್.ವಿ ಚಂದ್ರಬಾಬು ಮಾತನಾಡಿ, ರಾಜ್ಯದ 31 ಜಿಲ್ಲಾ ಸಮಿತಿ, 236 ತಾ.ಸಮಿತಿಗಳಿದ್ದು ಹಲವು ಸಮಿತಿ ಸ್ವಂತ ಕಟ್ಟಡವನ್ನು ಹೊಂದಿದೆ. ಕೊರಟಗೆರೆ ತಾಲ್ಲೂಕಿನಲ್ಲೂ ನೂತನ ಕಚೇರಿ ಉದ್ಘಾಟನೆಯಾಗಿದೆ. 1922ರಲ್ಲಿ ನಮ್ಮ ಸಂಘಟನೆಯಲ್ಲಿ ಬೆರಳೆಣಿಕೆಯಷ್ಟು ಮಂದಿ ಸದಸ್ಯರು ಮಾತ್ರ ನೋಂದಾಯಿತರಾಗಿದ್ದರು, ಪ್ರಸ್ತುತವಾಗಿ 15 ಸಾವಿರಕ್ಕೂ ಹೆಚ್ಚಿನ ಸಂಖೈಯಲ್ಲಿ ಸದಸ್ಯರು ನೊಂದಾಯಿತರಾಗಿದ್ದಾರೆ. ಸಂಘಟನೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ರಾಜ್ಯದಲ್ಲಿ ಅತ್ಯುತ್ತಮವಾಗಿ ತಂತ್ರಜ್ಞಾನ ಬಳಕೆಯಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

    ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಅಶೋಕ್‌ ಕುಮಾರ್ ಮಾತನಾಡಿ, ವಿದ್ಯುತ್ ಗುತ್ತಿಗೆದಾರರ ಸಂಘದ ಸಹಕಾರದೊಂದಿಗೆ ಇಂದು ಗುತ್ತಿಗೆದಾರರ ನೂತನ ಕಚೇರಿ ಉದ್ಘಾಟನೆಯಾಗಿದೆ. ಕೇಂದ್ರ ಸಮಿತಿ ರಾಜ್ಯದಲ್ಲಿ 31 ಜಿಲ್ಲೆ, 236 ತಾಲ್ಲೂಕುಗಳಲ್ಲಿ ಸಂಘಟನೆ ಕಾರ್ಯನಿರ್ವಹಿಸುತ್ತಿದೆ. ತುಮಕೂರು ಜಿಲ್ಲೆಯಲ್ಲಿ ಕೆಲ ತಾಲ್ಲೂಕುಗಳಲ್ಲಿ ಮಾತ್ರ ಕಚೇರಿಯಿದೆ. ಮುಂದಿನ ದಿನಗಳಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ಕಟ್ಟಡ ಕಟ್ಟುವಂತಹ ಆಶಾ ಮನೋಭಾವನೆ ಹೊಂದಿದ್ದೇವೆ ಎಂದು ಹೇಳಿದರು.

    ತಾಲ್ಲೂಕು ಸಮಿತಿಯ ತಾ.ಅಧ್ಯಕ್ಷ ಎಸ್.ಆರ್.ಸೋಮಶೇಖರ್ ಮಾತನಾಡಿ, ಗುತ್ತಿಗೆದಾರ ಸಂಘದಲ್ಲಿ ಸದಸ್ಯರ ಪ್ರೀತಿ ವಿಶ್ವಾಸದಿಂದ ಮೂರನೇ ಬಾರಿ ಅಧ್ಯಕ್ಷನಾಗಿ ಮುಂದುವರೆದಿದ್ದೇನೆ, ಇದೇ ರೀತಿ ತಮ್ಮೆಲ್ಲರಾ ಸಹಕಾರ ನೀಡುವಂತೆ ಕೋರಿದರು.

    ಈ ಸಂದರ್ಭದಲ್ಲಿ ಗೃಹ ಸಚಿವ ವಿಶೇಷ ಅಧಿಕಾರಿ ಡಾ.ಕೆ.ನಾಗಣ್ಣ, ಬೆಸ್ಕಾಂ ಎಇಇ ಪ್ರಸನ್ನಕುಮಾರ್, ತಾ.ಸಮಿತಿ ಉಪಾಧ್ಯಕ್ಷ ಮೂಡಲಗಿರಿಯಪ್ಪ, ಎ.ಆರ್.ರವಿಕುಮಾರ್, ಬಿ.ಆರ್.ಲಕ್ಷ್ಮಿ ಕಾಂತಬಾಬು, ಫಾರುಕ್ ಅಹಮದ್, ಪ್ರದೀಪ್‌ ಕುಮಾರ್ ಸೇರಿದಂತೆ ಇತರರು ಇದ್ದರು.

    ಗುತ್ತಿಗೆದಾರರ ಸಂಘದ ಕೇಂದ್ರ ಸಮಿತಿ ಕಾರ್ಯದರ್ಶಿ ಹೆಚ್.ವಿ ಚಂದ್ರಬಾಬು ಮಾತನಾಡಿ, ಗುತ್ತಿಗೆದಾರರ ಸಂಘಟನೆ ರಾಜ್ಯ ಮಟ್ಟದಲ್ಲಿ ವಿಶೇಷ ಮನ್ನಣೆ ಪಡೆದಿದೆ. ಇತಿಹಾಸವಿರುವ ನಮ್ಮ ಸಂಘಟನೆಯಲ್ಲಿ ವಿದ್ಯುತ್ ಗುತ್ತಿಗೆದಾರರ ಆಕಸ್ಮಿಕ ಮರಣದಿಂದ ಮೃತರಾದ ವ್ಯಕ್ತಿಯ ಕುಟುಂಬಕ್ಕೆ 2 ಲಕ್ಷ ಪರಿಹಾರ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ, ಕಾಮಗಾರಿ ಸಂದರ್ಭದಲ್ಲಿ ಗ್ರಾಹಕರು ಸಮಸ್ಯೆಗೆ ಸಿಲುಕಿದ್ದಲ್ಲಿ ಸಂಘಟನೆಯು ಗ್ರಾಹಕರ ಪರವಾಗಿ ಧ್ವನಿ ಎತ್ತಿ ಬೆಂಬಲ ಸೂಚಿಸಿದೆ. ಗುತ್ತಿಗೆದಾರರಿಗೆ ಒಂದು ಲಕ್ಷದಿಂದ ಐದು ಲಕ್ಷದವರೆಗೆ ತುಂಡು ಗುತ್ತಿಗೆ ನೀಡುವಂತೆ ಕೆಪಿಟಿಟಿ ಅಕ್ಟ್ ಬದಲಾವಣೆಯಾಗಿದೆ ಎಂದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ

    March 6, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಭಾರಿ ಶಾಕ್ ನೀಡಿದ್ದಾರೆ.…

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.