ಬೆಂಗಳೂರು: ಪಿಂಕ್ ಐ ಅಥವಾ ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ರೋಗ ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತಿದೆ. ಇದರಿಂದ ಪೋಷಕರಲ್ಲಿ ಆತಂಕ ಹೆಚ್ಚಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ರೋಗ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾದ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಅಲ್ಲದೇ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳನ್ನು ತಿಳಿಸಿದೆ.
ಮದ್ರಾಸ್ ಐ ರೋಗದ ಲಕ್ಷಣಗಳು:
ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
ಅತಿಯಾದ ಕಣ್ಣೀರು
ಕಣ್ಣಿನಲ್ಲಿ ತುರಿಕೆ
ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು
ದೃಷ್ಟಿ ಮಂಜಾಗುವುದು
ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು
ಮದ್ರಾಸ್ ಐ ಬರದಂತೆ ತಡೆಯುವುದು ಹೇಗೆ ?
ವೈಯಕ್ತಿಕವಾಗಿ ಸ್ವಚ್ಛತೆ ಗೆ ಆದ್ಯತೆ ಕೊಡಿ.
ಆರೋಗ್ಯವಂತ ವ್ಯಕ್ತಿಯು ಸೊಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರ ಇರುವುದು.
ಸೊಂಕಿತ ವ್ಯಕ್ತಿ ಬಳಸಿದ ಕರವಸ್ರ್ತ ಮತ್ತು ಇತರ ವಸ್ತುಗಳನ್ನು ಬಳಸಬಾರದು.
ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನ ತೊಳೆಯಬೇಕು.
ಸೊಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು.
ತೀವ್ರ ಸೊಂಕು ಉಂಟಾದರೆ ತಕ್ಷಣವೇ ನೇತ್ರ ತಜ್ಞರನ್ನ ಭೇಟಿ ಮಾಡಬೇಕು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DcrUDkVwqFRBBjfR64Nebh
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA