nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    ಲೇಖನ August 15, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    By Ganesh TumkuruAugust 15, 2026No Comments2 Mins Read
    indipendece day

    ಲೇಖಕರು: ವಿ.ಎಂ.ಎಸ್.ಗೋಪಿ,  ಬೆಂಗಳೂರು

    ಆಗಸ್ಟ್ 15 ಬಂತೆಂದರೆ ಸಾಕು, ಇಡೀ ದೇಶದಲ್ಲೇ ಹಬ್ಬದ ವಾತಾವರಣ. ಸಿಲಿಕಾನ್ ಸಿಟಿ ಬೆಂಗಳೂರಿನ ಮಾಲ್ ಮತ್ತು ಮಳಿಗೆಗಳು ಶೃಂಗಾರಗೊಂಡು, ರಿಯಾಯಿತಿ ಹಾಗೂ ಆಕರ್ಷಕ ಆಫರ್‌ ಗಳ ಬ್ಯಾನರ್‌ ಗಳಿಂದ ಕಂಗೊಳಿಸುತ್ತಿದ್ದರೆ, ಇನ್ನೊಂದೆಡೆ ವರಮಹಾಲಕ್ಷ್ಮಿ ಹಬ್ಬ ಮತ್ತು ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಭಾರತವು ತನ್ನ ಸ್ವಾತಂತ್ರ್ಯದ ಹಾದಿಯಲ್ಲಿ 79 ವಸಂತಗಳನ್ನು ಪೂರೈಸಿ 80ನೇ ಸ್ವಾತಂತ್ರ್ಯೋತ್ಸವಕ್ಕೆ ಕಾಲಿಡುತ್ತಿರುವ ಈ ಸಂದರ್ಭವು ಪ್ರತಿಯೊಬ್ಬ ಭಾರತೀಯನಿಗೂ ಅತ್ಯಂತ ಹೆಮ್ಮೆಯ ಕ್ಷಣ.

    ಜಾತಿ, ಮತ, ಧರ್ಮ, ಭಾಷೆ, ಬಡವ–ಶ್ರೀಮಂತ ಎಂಬ ಯಾವುದೇ ಭೇದಭಾವವಿಲ್ಲದೆ ನಾವೆಲ್ಲರೂ ‘ಭಾರತೀಯರು’ ಎಂಬ ಒಗ್ಗಟ್ಟಿನಿಂದ ಆಚರಿಸುವ ದಿನವಿದು. ದೇಶದ ಮೂಲೆಮೂಲೆಯಲ್ಲೂ ದೇಶಭಕ್ತಿಯ ಗೀತೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಭಾಷಣಗಳು ನಮ್ಮ ವೈವಿಧ್ಯಮಯ ಪರಂಪರೆಯನ್ನು ಎತ್ತಿಹಿಡಿಯುತ್ತವೆ.

    ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ಮಹಾನ್ ಹೋರಾಟಗಾರರ ತ್ಯಾಗದ ಫಲವಾಗಿ ಇಂದು ನಾವು ಸ್ವತಂತ್ರ ಭಾರತದಲ್ಲಿದ್ದೇವೆ. ಸ್ವಾತಂತ್ರ್ಯಾನಂತರದ ದಶಕಗಳಲ್ಲಿ ದೇಶವು ಅಪಾರ ಪ್ರಗತಿಯನ್ನು ಸಾಧಿಸಿದೆ:

    ಗ್ರಾಮೀಣ ಮಟ್ಟದಿಂದ ಹಿಡಿದು ಜಾಗತಿಕ ಮಟ್ಟದವರೆಗೆ ಶಿಕ್ಷಣ ಹಾಗೂ ಆಹಾರ ಭದ್ರತೆಬಾಹ್ಯಾಕಾಶ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಮುಂಚೂಣಿ ರಾಷ್ಟ್ರಗಳ ಸಾಲಿನಲ್ಲಿ ಭಾರತದ ಹೆಜ್ಜೆಸಿನಿಮಾ, ಕ್ರೀಡೆ ಹಾಗೂ ವೈದ್ಯಕೀಯ ರಂಗಗಳಲ್ಲಿ ಜಾಗತಿಕ ಮಟ್ಟದಲ್ಲಿ ಸಾಧಿಸಿದ ಅಭಿವೃದ್ಧಿಯಾಗಿದೆ.

    ದೇಶದ ಈ ಸುದೀರ್ಘ ಪ್ರಗತಿ ಪಥದಲ್ಲಿ “ನಮ್ಮ ದೇಶದ ಪ್ರಗತಿಯೇ ನಮ್ಮ ಪ್ರಗತಿ” ಎಂಬ ಭಾವನೆ ಪ್ರತಿಯೊಬ್ಬ ಪ್ರಜೆಯಲ್ಲೂ ಮೂಡಬೇಕಿದೆ.

    ಚಿಂತಿಸಬೇಕಾದ ವಿಷಯಗಳು:

    ನಮ್ಮ ರಾಷ್ಟ್ರೀಯ ಧೈಯವಾಕ್ಯ “ಸತ್ಯಮೇವ ಜಯತೇ” (ಸತ್ಯಕ್ಕೆ ಗೆಲುವು). ಆದರೆ ಇಂದಿನ ಸಮಾಜದಲ್ಲಿ ಸುಳ್ಳು, ವಂಚನೆ, ಮೋಸ ಮತ್ತು ಲಂಚಗುಳಿತನಗಳು ವ್ಯಾಪಿಸುತ್ತಿರುವುದು ದುರಂತ. ಸ್ವಾತಂತ್ರ್ಯ ಹೋರಾಟದಲ್ಲಿ ಪುರುಷರಷ್ಟೇ ಸಮಾನವಾಗಿ ಮಹಿಳೆಯರೂ ಹೋರಾಡಿದ್ದಾರೆ. ಆದ್ದರಿಂದ ದೇಶಕ್ಕೆ ನೀಡುವ ಗೌರವವನ್ನು ಮನೆಯ ತಾಯಿ, ಮಗಳು, ಸೊಸೆ ಹಾಗೂ ಸಹೋದರಿಯರಿಗೂ ನೀಡಿ, ಮಹಿಳಾ ಗೌರವವನ್ನು ಎತ್ತಿಹಿಡಿಯುವುದು ನಮ್ಮ ಕರ್ತವ್ಯ.

    ನಮ್ಮೆಲ್ಲರ ಸೃಷ್ಟಿಕರ್ತ ಒಬ್ಬನೇ. ಒಂದೇ ದೇಶದ ನಿವಾಸಿಗಳಾದ ನಾವು ಸಹೋದರತೆಯಿಂದ ಬಾಳಬೇಕಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಆಗಸ್ಟ್ 15ರ ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ, “ನಾವೆಲ್ಲರೂ ಒಂದೇ” ಎಂಬ ಭಾವನೆಯನ್ನು ದಿನನಿತ್ಯದ ಜೀವನದಲ್ಲಿ ಗಟ್ಟಿಗೊಳಿಸೋಣ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!

    August 8, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    ತುಮಕೂರು:  ಜಿಲ್ಲಾ ಪೊಲೀಸ್ ಕಛೇರಿಯ ಮುಂಭಾಗದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ ಮತ್ತು ಗೌರವಗಳೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು…

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.