nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    • ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ
    • ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ
    ತುಮಕೂರು July 6, 2025

    ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ

    By adminJuly 6, 2025No Comments2 Mins Read
    g parameshwar

    ತುಮಕೂರು: ಪ್ರಪಂಚದ ಗಮನ ಸೆಳೆಯುವ ಮಟ್ಟಿಗೆ ಭಾರತ ಬದಲಾಗಿದ್ದು, ಶಿಕ್ಷಣ ಮತ್ತು ಯುವಕರ ಪಾತ್ರ ಹೆಚ್ಚಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

    ನಗರದ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್‌ ಎಸ್‌ ಎಲ್‌ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಪಡೆದ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


    Provided by
    Provided by

    ದೇಶದ 96 ಕೋಟಿ ಜನ ಇಂಟರ್‌ ನೆಟ್ ಬಳಸುತ್ತಿದ್ದಾರೆ. ಬೇರೆ ಯಾವ ದೇಶಗಳ ಜನರು ಇಷ್ಟೊಂದು ಇಂಟರ್‌ ನೆಟ್ ಬಳಸುತ್ತಿರುವ ಉದಾಹರಣೆಗಳಿಲ್ಲ. ಶಿಕ್ಷಣ ಸಾಕಷ್ಟು ಬದಲಾವಣೆ ತಂದಿದೆ. ಕರ್ನಾಟಕವು ಶೇ.75ರಷ್ಟು ಸಾಕ್ಷರತೆ ಪ್ರಮಾಣ ಹೊಂದಿದೆ. ಭಾರತ ಹೊರತುಪಡಿಸಿದರೆ ವೈದ್ಯರು, ಇಂಜಿನಿಯರ್‌ ಗಳ ಉತ್ಪಾದನೆಯಾವ ದೇಶದಲ್ಲಿಯೂ ಆಗುತ್ತಿಲ್ಲ. ಶಿಕ್ಷಣದಿಂದ ಇಷ್ಟೆಲ್ಲ ಬದಲಾವಣೆ ಸಾಧ್ಯವಾಗಿದೆ ಎಂದರು.

    ಪ್ರತಿಭಾ ಪುರಸ್ಕೃತರು ಶೇ.‌ 90ರಷ್ಟು ಅಂಕ ಪಡೆದುಕೊಂಡಿದ್ದಾರೆ. ಕೆಲವು ವಿಷಯಗಳಲ್ಲಿ ಶೇ.100ರಷ್ಟು ಅಂಕ ಪಡೆದುಕೊಂಡಿದ್ದಾರೆ. ಸ್ಪರ್ಧಾತ್ಮಕ ಯುಗ ನಿಮ್ಮ‌ ಮುಂದೆ ನಿಂತಿದೆ ಎಂಬುದಕ್ಕೆ ಉದಾಹರಣೆ. ಇದಕ್ಕೆ ಭಾರತ ನಿಮ್ಮನ್ನು ಕಾಯುತ್ತಿದೆ. ನಿಮ್ಮ ಭವಿಷ್ಯ ಕಾಯುತ್ತಿದೆ. ಭಾರತವನ್ನು ನೀವು ಕಟ್ಟಬೇಕು ಎಂಬುದನ್ನು ನೆನಪಿಸಲು ಪುರಸ್ಕಾರಗಳಿಂದ ಸಾಧ್ಯವಾಗುತ್ತದೆ ಎಂದು ಹೇಳಿದರು.

    ತುಮಕೂರಿನ ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಮಾಣ ಸುಧಾರಿಸಿದೆ. ಇದು ಸಾಲದು. ಮಕ್ಕಳ ಕಲಿಕೆಗಾಗಿ ಶಿಕ್ಷಕರು ಮತ್ತಷ್ಟು ಹೆಚ್ಚಿನ ಒತ್ತು ನೀಡಬೇಕಿದೆ. ಬೆಂಗಳೂರಿಗೆ ಹತ್ತಿರದಲ್ಲಿರುವ ತುಮಕೂರು ಶೇ.70ರಷ್ಟು ತೆಗೆದುಕೊಳ್ಳಬೇಕೇ ಎಂದು ಪ್ರಶ್ನಿಸಿದರು.

    ವಿ.ಸೋಮಣ್ಣ ಅವರು ಸಂಸದರಾದ ಬಳಿಕ ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗುತ್ತಿದ್ದಾರೆ. ನಮ್ಮ ಸಂಸದರು ಈ ರೀತಿಯಾಗಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದರು.

    8ನೇ ಹಣಕಾಸಿನ ಆಯೋಗದ ವರದಿ ಒಪ್ಪಿದರೆ ಶೇ. 25ರಷ್ಟು ಸಂಬಳ ಹೆಚ್ಚಾಗುತ್ತದೆ. ಪ್ರಸಕ್ತ ಸಾಲಿನಲ್ಲಿ 4.9 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಲಾಗಿದೆ. ನಮ್ಮ ಅಭಿವೃದ್ಧಿಗೆ 1.50 ಲಕ್ಷ ಕೋಟಿ ರೂ. ಸಿಗುತ್ತಿದೆ. ಒಪಿಎಸ್ ಮರು ಜಾರಿಗೊಳಿಸುವ ಭರವಸೆಯನ್ನು ಪ್ರಣಾಳಿಕೆಗೆ ರಾತ್ರಿ 2 ಗಂಟೆಯಲ್ಲಿ ನಾನೇ ಸೇರಿಸಿದೆ. ಇದನ್ನು ಮಾಡುತ್ತೇವೆ ಎಂಬುದಾಗಿ ಸಿಎಂ ಅವರು ಭರವಸೆ ನೀಡಿದ್ದು, ಸಮಿತಿ ರಚಿಸಿದ್ದಾರೆ ಎಂದು ಹೇಳಿದರು.

    ತುಮಕೂರಿನ ಅಭಿವೃದ್ಧಿ ವೇಗವಾಗಿ ಆಗಬೇಕು. ತುಮಕೂರಿಗೆ ಮೆಟ್ರೋ ತರಬೇಕು ಎಂದು ಕಳೆದ ಹತ್ತು ವರ್ಷದಿಂದ ಹೇಳಲಾಗುತ್ತಿದೆ. ಇದಕ್ಕೆ ಈಗ ವೇಗ ಸಿಕ್ಕಿದೆ. ಸೋಮಣ್ಣ ಅವರು ಸಹ ನನ್ನ ಜೊತೆ ಮೆಟ್ರೋ ಯೋಜನೆ ಆಗಬೇಕು ಎಂದಿದ್ದಾರೆ.

    ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ಆಗಿದೆ. ಜಪನೀಸ್ ಟೌನ್‌ ಶಿಪ್ ಬರುತ್ತಿದೆ. 150ಕ್ಕು ಹೆಚ್ಚು ಕೈಗಾರಿಕೆ, ಹೆಚ್‌ಎಎಲ್‌ ಹೆಲಿಕ್ಯಾಪ್ಟರ್ ಫ್ಯಾಕ್ಟರಿ ಆರಂಭವಾಗಿದೆ. 650 ಎಕರೆ ಬೇಕು ಎಂಬ ಪ್ರಸ್ತಾವನೆ ಬಂದಿದ್ದು, ಭೂಮಿ ಗುರುತಿಸಲಾಗುತ್ತಿದೆ. ಏಳು ಇಂಜಿನಿಯರಿಂಗ್ ಕಾಲೇಜುಗಳಿವೆ. ಇವರಿಗೆಲ್ಲ ಉದ್ಯೋಗ ಸಿಗವಂತಾಗಬೇಕು ಎಂದು ಹೇಳಿದರು.

    ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ವಿ.ಸೋಮಣ್ಣ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಂಸದ ಜಿ.ಎಸ್.ಬಸವರಾಜ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಅವರು ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ

    April 9, 2026

    ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ತುಮಕೂರು: ಹಣದ ವಿಚಾರಕ್ಕಾಗಿ ಸ್ವಂತ ತಂದೆಯನ್ನೇ ಭೀಕರವಾಗಿ ಕೊಲೆ ಮಾಡಿದ್ದ ಮಗನಿಗೆ ಇಲ್ಲಿನ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ…

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026

    ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.