nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ

    January 22, 2026

    ಡಾ.ಶ್ರೀಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯ: ಲಿಂಗೈಕ್ಯ ಶ್ರೀಗಳ 7ನೇ ಪುಣ್ಯಸಂಸ್ಮರಣೆಯಲ್ಲಿ ಉಪರಾಷ್ಟ್ರಪತಿಗಳ ಬಣ್ಣನೆ

    January 22, 2026

    ಹೇಮಾವತಿ ನೀರಿನ ವಿಚಾರದಲ್ಲಿ ನನಗೆ ವಿರೋಧವಿದೆ: ಶಾಸಕ ಎಸ್.ಆರ್.ಶ್ರೀನಿವಾಸ್

    January 22, 2026
    Facebook Twitter Instagram
    ಟ್ರೆಂಡಿಂಗ್
    • ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ
    • ಡಾ.ಶ್ರೀಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯ: ಲಿಂಗೈಕ್ಯ ಶ್ರೀಗಳ 7ನೇ ಪುಣ್ಯಸಂಸ್ಮರಣೆಯಲ್ಲಿ ಉಪರಾಷ್ಟ್ರಪತಿಗಳ ಬಣ್ಣನೆ
    • ಹೇಮಾವತಿ ನೀರಿನ ವಿಚಾರದಲ್ಲಿ ನನಗೆ ವಿರೋಧವಿದೆ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ
    • ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು
    • ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್
    • ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ
    • ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ ಕಥಾ ನಿರೂಪಣೆಯ ಆಗರ: ಡಾ.ಎಲ್.ಮುರುಗನ್
    ರಾಜ್ಯ ಸುದ್ದಿ February 2, 2025

    ಭಾರತ ಕಥಾ ನಿರೂಪಣೆಯ ಆಗರ: ಡಾ.ಎಲ್.ಮುರುಗನ್

    By adminFebruary 2, 2025No Comments2 Mins Read
    l murugan

    ಮೈಸೂರು:  ಭಾರತ ರಾಮಾಯಣ, ಮಹಾಭಾರತದ ಸನ್ನಿವೇಶಗಳನ್ನು ವಿಶಿಷ್ಟ ಕಥೆಗಳಾಗಿ ನೀಡುವ ಮೂಲಕ ಜಗತ್ತಿನಲ್ಲಿ ಕಥೆಗಳ ಆಗರವೆನಿಸಿದೆ. ಭಾರತದಲ್ಲಿ ನಿರ್ಮಿತ ಸಿನೆಮಾಗಳು ಕೂಡ ಜಾಗತಿಕ ಮಟ್ಟದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್ ಅವರು  ಹೇಳಿದರು‌.

    ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಎರಡು ದಿನಗಳ ಕಾಲ ನಡೆದ ಮೂರನೇ ‘ಪರಿದೃಶ್ಯ’ ಅಂತರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.


    Provided by
    Provided by

    ಭಾರತವನ್ನು ಜಾಗತಿಕ ಮಟ್ಟದ ಸೃಜನಾತ್ಮಕ ಆರ್ಥಿಕತೆಯಾಗಿ ಮಾಡಲು ಆಡಿಯೋ ವಿಶ್ಯುವಲ್ ಎಂಟರ್ ಟೈನ್ಮೆಂಟ್ ಸಮ್ಮಿಟ್ ಅನ್ನು 2019 ರಲ್ಲಿ  ಘೋಷಣೆ ಮಾಡಿದ್ದು  ಈ ವರ್ಷ ಅದು ನಡೆಯಲಿದೆ. ಎಲ್ಲಾ ರೀತಿಯ ಮಾಧ್ಯಮಗಳಿಗೂ ಇದು ಪೂರಕವಾದದ್ದು. ಪಾರಂಪರಿಕ ಮಾಧ್ಯಮ, ಟಿವಿ ಮಾಧ್ಯಮ, ಗೇಮಿಂಗ್, ಸಾಮಾಜಿಕ ಜಾಲತಾಣ ಕ್ಷೇತ್ರಕ್ಕೆ ಪ್ರೋತ್ಸಾಹದಾಯಕವಾಗಿದೆ. ಯಂಗ್ ಫಿಲ್ಮ್ ಮೇಕರ್ಸ್ ಚಾಲೆಂಜ್ ಎಂಬುದು ಕೂಡ ಇದರ ಒಂದು ಭಾಗ. ಇದರ ಅಡಿಯಲ್ಲಿ ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಗೋವಾದಲ್ಲಿ 100 ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಪ್ರಸ್ತುತ ಹಾಲಿವುಡ್ ಸಿನೆಮಾಗಳ ಪೋಸ್ಟ್ ಪ್ರೊಡಕ್ಷನ್ ಕೆಲಸವನ್ನು ಮಾಡಲು ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ವ್ಯವಸ್ಥೆ ರೂಪಿಸಲಾಗಿದೆ ಎಂದು ನುಡಿದರು.

    ದೆಹಲಿಯಲ್ಲಿ ಆಯೋಜನೆಗೊಂಡಿರುವ ವಿಶ್ವ ಆಡಿಯೊ ವಿಷುವಲ್ ಎಂಟರ್ಟೈನ್ಮೆಂಟ್ ಶೃಂಗಸಭೆಯಲ್ಲಿ (ವೇವ್ಸ್ ) ಮನರಂಜನೆ ಕ್ಷೇತ್ರದ ಎಲ್ಲ ಪ್ರಮುಖರು ಭಾಗವಹಿಸಲಿದ್ದು, ದೇಶದ ಯುವ ಜನತೆ ಇದರ ಲಾಭ ಪಡೆಯಬೇಕು’ ಎಂದು ಸಚಿವರು ತಿಳಿಸಿದರು. ದೇಶದ ಮನರಂಜನಾ ಕ್ಷೇತ್ರವೂ ಪ್ರತಿ ವರ್ಷ ಶೇ 9.7ರಷ್ಟು ಅಭಿವೃದ್ಧಿ ಹೊಂದುತ್ತಿದ್ದು, 2027ರೊಳಗೆ ₹469 ದಶಲಕ್ಷ ಕೋಟಿಯ ಉದ್ಯಮವಾಗಿ ಬೆಳೆಯಲಿದೆ ಎಂದರು.

    ‌ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನೇತೃತ್ವದಿಂದ ಈ ಶೃಂಗಸಭೆ ಭಾರತದಲ್ಲಿ ಆಯೋಜನೆಗೊಂಡಿದೆ. ಇಂದು ದೇಶದಲ್ಲಿ ಚಲನಚಿತ್ರ ನಿರ್ಮಾಣ ಪೂರ್ವ ಮತ್ತು ನಂತರದ ಕಾರ್ಯಗಳಿಗೆ ಅಗತ್ಯ ಮೂಲಸೌಭ್ಯ ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮದ ಮೂಲಕ ಚಲನಚಿತ್ರ ಸೌಲಭ್ಯ ಕಚೇರಿಯನ್ನು ತೆರೆಯಲಾಗಿದ್ದು, ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಲು ಏಕ ಗವಾಕ್ಷಿ ವ್ಯವಸ್ಥೆ ಸ್ಥಾಪಿಸಿದ್ದೇವೆ. ತ್ವರಿತಗತಿಯಲ್ಲಿ ಅನುಮತಿ ನೀಡಲಾಗುತ್ತಿದೆ. ದೇಶದೊಳಗೆ ಚಿತ್ರೀಕರಣಕ್ಕೆ ಸಬ್ಸಿಡಿಯನ್ನೂ ಒದಗಿಸಿದ್ದೇವೆ ಎಂದರು.

    ‘ಮುಂಬೈನಲ್ಲಿ ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್(ಎವಿಜಿಸಿ) ವಿಭಾಗದಲ್ಲಿ ರಾಷ್ಟ್ರೀಯ ಸ್ಕೂಲ್ ಆಫ್ ಎಕ್ಸಲೆನ್ಸಿ ಕೇಂದ್ರ ಆರಂಭಿಸಲು ಸರ್ಕಾರ ಮುಂದಾಗಿದ್ದು, ಐಐಟಿ, ಏಮ್ಸ್‌ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದೆ ಎಂದರು.

    2022ರಲ್ಲಿ ಪ್ರಾರಂಭವಾದ ಮೈಸೂರಿನ ಪರಿದೃಶ್ಯ ಅಂತರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವ ಮೂರೇ ವರ್ಷದಲ್ಲಿ 3000ಕ್ಕೂ ಅಧಿಕ ಚಿತ್ರಗಳನ್ನು ಸ್ವೀಕರಿಸುವ ಮೂಲಕ ಒಂದು ಪ್ರಮುಖ ವೇದಿಕೆಯಾಗಿ ಬೆಳೆದಿದೆ. ಅವರ ಶ್ರಮಕ್ಕೆ, ಪ್ರಯತ್ನಕ್ಕೆ ಅಭಿನಂದನೆಗಳು ಎಂದು ನುಡಿದರು.

    ಮುಖ್ಯಅತಿಥಿಯಾಗಿ ಭಾಗವಹಿಸಿದ ಸುನೀಲ್ ಪುರಾಣಿಕ್ ಪರಿದೃಶ್ಯದಲ್ಲಿ ಉತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ ಪಡೆದ ಚಿತ್ರ ಇಂದು ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದಿದೆ. ಸಾಕ್ಷ್ಯಚಿತ್ರ, ಕಿರುಚಿತ್ರದ ಮೂಲಕ, ಸಿನೆಮಾ ಕ್ಷೇತ್ರಕ್ಕೆ ಬರಬೇಕೆನ್ನುವ ಪ್ರತಿಭೆಗಳಿಗೆ ಪರಿದೃಶ್ಯ ಉತ್ತಮ ವೇದಿಕೆ. ಬೆಂಗಳೂರಲ್ಲಿ ಪ್ರಾರಂಭವಾದ ಪರಿದೃಶ್ಯ ಮುಂದಿನ ದಿನಗಳಲ್ಲಿ ಸಿನೆಮಾ ಕ್ಷೇತ್ರದ ಹಬ್ ಆಗಲಿರುವ ಮೈಸೂರಿಗೆ ಅದು ರವಾನೆಯಾಗಿದ್ದು ಅಭಿನಂದನಾರ್ಹ ಎಂದರು.

    ಕಾರ್ಯಕ್ರಮದಲ್ಲಿ ಉದ್ಯಮಿ ಜಗನ್ನಾಥ ಶೆಣೈ, ಮೈಸೂರು ಸಿನೆಮಾ ಸೊಸೈಟಿಯ ಅಧ್ಯಕ್ಷ ಡಾ. ಚಂದ್ರಶೇಖರ ಸಿ ಆರ್, ಕಾರ್ಯದರ್ಶಿ ಪದ್ಮಾವತಿ ಎಸ್ ಭಟ್ ಉಪಸ್ಥಿತರಿದ್ದರು.

    ಪರಿದೃಶ್ಯ ಚಿತ್ರೋತ್ಸವಕ್ಕೆ ಪ್ರಪಂಚದಾದ್ಯಂತ 109 ದೇಶಗಳಿಂದ 3123 ಕಿರು ಮತ್ತು ಸಾಕ್ಷ್ಯಚಿತ್ರಗಳು ಬಂದಿವೆ. ಈ ಚಿತ್ರಗಳಲ್ಲಿ ಆಯ್ಕೆಯಾದ ಸಿನಿಮಾಗಳಿಗೆ 26 ವರ್ಗಗಳ ಪ್ರಶಸ್ತಿಗಳನ್ನು ನೀಡಲಾಯಿತು. ಭಾರತದಿಂದ 985, ಇರಾನ್ ಇಂದ 413, ಸ್ಪೇನ್ ಇಂದ 138, ಫ್ರಾನ್ಸ್ 137, ಬ್ರೆಜಿಲ್ 108, ಚೀನಾ 99, ಇಂಡೋನೇಷಿಯಾ 91, ಟರ್ಕಿ 88, USA 82, ಇಟಲಿ 81 ಮುಂತಾದ ದೇಶಗಳಿಂದ 3123 ಸಿನಿಮಾಗಳು ಬಂದಿವೆ. ಕನ್ನಡದ ಒಟ್ಟು 73 ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರಗಳು ಸೇರಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್

    January 21, 2026

    ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ

    January 20, 2026

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ

    January 22, 2026

    ಕುಣಿಗಲ್: ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಕೋಟ್ಯಂತರ ಹಣ ಖರ್ಚು ಮಾಡುತ್ತಿದೆ. ಆದರೆ ನೀವುಗಳು ಕಾಟಾಚಾರಕ್ಕೆ ಯೋಜನೆಗಳನ್ನು ತಯಾರು ಮಾಡಿ…

    ಡಾ.ಶ್ರೀಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯ: ಲಿಂಗೈಕ್ಯ ಶ್ರೀಗಳ 7ನೇ ಪುಣ್ಯಸಂಸ್ಮರಣೆಯಲ್ಲಿ ಉಪರಾಷ್ಟ್ರಪತಿಗಳ ಬಣ್ಣನೆ

    January 22, 2026

    ಹೇಮಾವತಿ ನೀರಿನ ವಿಚಾರದಲ್ಲಿ ನನಗೆ ವಿರೋಧವಿದೆ: ಶಾಸಕ ಎಸ್.ಆರ್.ಶ್ರೀನಿವಾಸ್

    January 22, 2026

    ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ

    January 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.