ಪಾವಗಡ: ಅಂತರಾಷ್ಟ್ರೀಯ ಸಂಬಂಧಗಳಲ್ಲಿ ಅಲಿಪ್ತ ನೀತಿಯನ್ನು ಸಾರಿದ ರಾಷ್ಟ್ರ ನಮ್ಮದು, ವಿದೇಶಾಂಗ ನೀತಿಯಲ್ಲಿಯೂ ಸಹ ಭಾರತ ಉತ್ತಮ ಸ್ಥಾನ ಪಡೆದಿದೆ, ನಾವಿಂದು ಅನಿವಾರ್ಯ ಕಾರಣಗಳಿಂದ ಭಾರತ ಅಶಾಂತಿ ಸಂಘರ್ಷಕ್ಕೆ ಇಳಿಯಬೇಕಾಗಿದೆ ಎಂದು ತುಮಕೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲ ಸಚಿವ ಪ್ರಸನ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಪಾವಗಡ ಪಟ್ಟಣದ ಶಿರಾ ರಸ್ತೆ ಮಾರ್ಗದಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಜಾನಪದ ಉತ್ಸವವನ್ನು ಕುರುಬರಹಳ್ಳಿ ಗೇಟ್ ನಿಂದ ಕಾಲೇಜಿನವರಿಗೂ ವಿವಿಧ ಕಲಾತಂಡಗಳ ಮೆರವಣಿಗೆಯೊಂದಿಗೆ ಆಗಮಿಸಿ ನಂತರ ವೇದಿಕೆಯಲ್ಲಿ ವಾದ್ಯ ಬಾರಿಸುವುದರ ಮೂಲಕ ಚಾಲನೆ ನೀಡಿದ ನಂತರ ಅವರು ಮಾತನಾಡಿದರು.
ರಾಜ್ಯದಲ್ಲಿ 140ಕ್ಕೂ ಅಧಿಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು, ರಾಷ್ಟ್ರೀಯ ಐಕ್ಯತೆ ಮೂಡಿಸುವ ಉದ್ದೇಶದಿಂದ ಜನಪದ ಉತ್ಸವಗಳನ್ನು ಆಯೋಜಿಸಲಾಗುತ್ತಿದೆ, ನಾಡು ನುಡಿ, ಕಲೆ, ಸಂಸ್ಕೃತಿಯನ್ನು ಉಳಿಸಿ ರಾಷ್ಟ್ರೀಯ ಭಾವೈಕ್ಯತೆ ಯನ್ನು ಬೆಳೆಸುವ ಮತ್ತು ಗ್ರಾಮೀಣ ಸೊಗಡನ್ನು ಉಳಿಸುವ ಉದ್ದೇಶದಿಂದ ಈ ಒಂದು ಜನಪದ ಉತ್ಸವ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಇಂದಿನ ಯುವ ಸಮೂಹ ಇಂತಹ ಜನಪದ ಉತ್ಸವಗಳಲ್ಲಿ ಭಾಗಿಯಾಗಿ ರಾಷ್ಟ್ರೀಯ ಭಾವೈಕ್ಯತೆ ಮೂಡಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿ ಅನಿವಾರ್ಯವಾಗಿ ಪಾಕಿಸ್ತಾನ ಜೊತೆ ಯುದ್ಧ ಮಾಡುತ್ತಿರುವ ಸೈನಿಕರ ಜೊತೆ ನಾವು ಸಹ ಯುದ್ಧದಲ್ಲಿ ಪಾಲ್ಗೊಳ್ಳಬೇಕೆಂದು ದೇಶಪ್ರೇಮದ ಸಾರವನ್ನು ಉರಿದುಂಬಿಸಿದರು.
ಪ್ರಾಂಶುಪಾಲರಾದ ಡಾ.ಶಿವನಂದಯ್ಯ ಮಾತನಾಡಿ, ಈ ಕಾಲೇಜು ಸರ್ವತೋಮುಖವಾಗಿ ಅಭಿವೃದ್ಧಿಯಾಗುತ್ತಿದ್ದು ಮುಂದಿನ ಶೈಕ್ಷಣಿಕ ಸಾಲಿನಿಂದ ಬಿ.ಎಸ್ಸಿ. ಬಿಸಿಎ ಕೋರ್ಸ್ ಗಳನ್ನ ಪ್ರಾರಂಭಿಸಲಾಗುತ್ತಿದೆ, ಇಲ್ಲಿಯವರೆಗೆ 11 ಕೋಟಿ ವೆಚ್ಚದಲ್ಲಿ ವಿವಿಧ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದ್ದು., ಇನ್ನೂ ಐದು ಕೋಟಿ ವೆಚ್ಚದಲ್ಲಿ ವಿಜ್ಞಾನ ವಿಭಾಗ ಶಾಸಕರಾದ ಹೆಚ್.ವಿ.ವೆಂಕಟೇಶ್ ಅವರು ಮಂಜೂರು ಮಾಡಿಸಿದ್ದು, ಮಹಿಳಾ ವಿಶ್ರಾಂತಿ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಗುವುದು, ಈ ಕಾಲೇಜು ಸರ್ವತೋಮುಖ ಅಭಿವೃದ್ಧಿಯಾಗಲು ಕಾರಣಭೂತರಾದ ಮಾಜಿ ಸಚಿವರಾದ ವೆಂಕಟರಮಣಪ್ಪ ಮತ್ತು ಶಾಸಕರಾದ ಹೆಚ್.ವಿ.ವೆಂಕಟೇಶ್ ಕೃತಜ್ಞತೆಗಳನ್ನು ಸಲ್ಲಿಸಿದರು.
ಕಾಲೇಜಿನ ನಿಕಟ ಪೂರ್ವ ಪ್ರಾಂಶುಪಾಲರ ಕೆ.ಓ. ಮಾರಪ್ಪ ಮಾತನಾಡಿ, ಕುರುಬರಹಳ್ಳಿ ಗೇಟ್ ಬಳಿ ಸುಮಾರು 13 ಎಕರೆಯಲ್ಲಿ ಸ್ಥಳವನ್ನು ನೀಡಿದ್ದರ ಫಲವಾಗಿ ಇಂದು ಸುಸಜ್ಜಿತವಾದ ಮಹಿಳಾ ಪ್ರಥಮ ದರ್ಜೆ ಕಾಲೇಜಿನು ನಿರ್ಮಾಣ ಮಾಡಲಾಗಿದೆ ಮತ್ತು ಕಾಲೇಜಿಗೆ ಕಾಪೌಂಡನ್ನು ನಿರ್ಮಾಣ ಮಾಡಬೇಕಾಗಿದ್ದು, ನ್ಯಾಕ್ ಸಮಿತಿಯಿಂದ ಈ ಕಾಲೇಜು ಬಿ+ ಗ್ರೇಡ್ ಪಡೆದುಕೊಂಡಿದೆ ಎಂದು ಹೆಮ್ಮೆಯನ್ನು ವ್ಯಕ್ತಪಡಿಸಿದರು.
ನಿವೃತ್ತ ಶಿಕ್ಷಕರಾದ ಮೈಲಪ್ಪ ನಿವೃತ್ತ ಪ್ರಾಂಶುಪಾಲರಾದ ಬಸವಲಿಂಗಪ್ಪ, ಮುದ್ರಾಂಕ ಇಲಾಖೆ ಅಧಿಕಾರಿ ಹಾಗೂ ಜನಪದ ಕಲಾವಿದರಾದ ನಾಗರಾಜ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಸಾಂಸ್ಕೃತಿಕ ಸಂಚಾಲಕರಾದ ಮಧು ಕುಮಾರ್, ಉಪನ್ಯಾಸಕ ನಾಗೇಂದ್ರ ಮಾತನಾಡಿದರು.
ಜನಪದ ಉತ್ಸವದಲ್ಲಿ ಬಲರಾಂ ಮತ್ತು ತಂಡ, ಮತ್ತು ನಾಗರಾಜ್ ಮತ್ತು ತಂಡ ಹಾಗೂ ನಾಗೇಂದ್ರ ಮತ್ತು ತಂಡದಿಂದ ಕೋಲಾಟ ಪ್ರದರ್ಶನ ನಡೆಸಲಾಯಿತು.
ನಾಗರಾಜು, ದ್ಯಾವೀರಪ್ಪ ಮತ್ತು ಮರಿಸ್ವಾಮಿ ತಂಡದಿಂದ ಜನಪದ ಗೀತೆಗಳನ್ನು ಹಾಡಲಾಯಿತು. ಕಾಲೇಜಿನ ವಿದ್ಯಾರ್ಥಿನಿಯರು ಸಹ ವಿವಿಧ ಜನಪದ ನೃತ್ಯ ಕಲಾಪ್ರಕಾರಗಳನ್ನು ಪ್ರದರ್ಶಿಸಿದರು.
ಇದೇ ಸಂದರ್ಭದಲ್ಲಿ ಕುಲ ಸಚಿವರು ಭತ್ತ ಮತ್ತು ರಾಗಿ ರಾಶಿಗೆ ಗ್ರಾಮೀಣ ಶೈಲಿಯ ವಿಶೇಷ ಪೂಜೆಗಳನ್ನು ಸಹ ನೆರವೇರಿಸಲಾಗಿದ್ದು ಹಳೆಯ ಕಾಲದ ಆಯುಧಗಳನ್ನು ಮತ್ತು ಜಾನಪದ ಪರಿಕರಗಳನ್ನು ಪ್ರದರ್ಶಿಸಲಾಗಿದೆ
ಈ ವೇಳೆ ಮುಖಂಡರಾದ ಪ್ರಕಾಶ್ ರೆಡ್ಡಿ , ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಸ್ಟುಡಿಯೋ ಅಮರ್, ರಾಜವಂತಿ ರಂಗನಾಥ್. ನಲಿಗಾನಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ದುಗ್ಗಮ್ಮ ನಾಗಯ್ಯ, ಗ್ರಾಮ ಪಂಚಾಯತಿ ಸದಸ್ಯರು ಅಂಬುಜಾಕ್ಷಿ, ಜಯಮ್ಮ ಸೇರಿದಂತೆ ವಿದ್ಯಾರ್ಥಿಗಳು ಕಾಲೇಜಿನ ಪ್ರಾಧ್ಯಾಪಕರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ. ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW