ಆತ ಶತ್ರುವೇ ಆಗಿರಲಿ ರಕ್ಷಣೆ ಕೋರಿ ಬಂದವರನ್ನು ರಕ್ಷಿಸುವುದು ನಮ್ಮ ಭಾರತೀಯರ ಗುಣ. ಅದೇ ರೀತಿಯಲ್ಲಿ ಭಾರತೀಯ ನೌಕಾಪಡೆ ಅರಬ್ಬಿ ಸಮುದ್ರದಲ್ಲಿ ಕಡಲ್ಗಳ್ಳರ ದಾಳಿಯಿಂದ 23 ಜನ ಪಾಕಿಸ್ತಾನ ಸಿಬ್ಬಂದಿಯನ್ನು ರಕ್ಷಣೆ ಮಾಡಿದೆ.
ಅರಬ್ಬೀ ಸಮುದ್ರದಲ್ಲಿ ಕಡಲ್ಗಳ್ಳರ ದಾಳಿಯನ್ನು ಹಿಮ್ಮೆಟ್ಟಿಸಿರುವ ಭಾರತೀಯ ನೌಕಾಪಡೆಯು, 12 ಗಂಟೆಗಳ ಕಾಲ ನಡೆದ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆಯಲ್ಲಿ, ಇರಾನಿನ ಮೀನುಗಾರಿಕಾ ಹಡಗನ್ನು ವಶಕ್ಕೆ ಪಡೆದು ಅದರಲ್ಲಿದ್ದ 23 ಪಾಕಿಸ್ತಾನಿ ಸಿಬ್ಬಂದಿಯನ್ನು ರಕ್ಷಿಸಿದೆ.
“ಮಾರ್ಚ್ 28ರ ತಡರಾತ್ರಿ ಇರಾನಿನ ಮೀನುಗಾರಿಕಾ ಹಡಗು ‘ಅಲ್-ಕಂಬರ್ 786’ ನಲ್ಲಿ ಸಂಭವಿಸಬಹುದಾದ ಕಡಲ್ಗಳ್ಳತನದ ಘಟನೆಯ ಮಾಹಿತಿಯ ಆಧಾರದ ಮೇಲೆ, ಅರೇಬಿಯನ್ ಸಮುದ್ರದಲ್ಲಿ ಕಡಲ ಭದ್ರತಾ ಕಾರ್ಯಾಚರಣೆಗಾಗಿ ನಿಯೋಜಿಸಲಾದ ಎರಡು ಭಾರತೀಯ ನೌಕಾಪಡೆಯ ಹಡಗುಗಳು, ಅಪಹರಣಕ್ಕೊಳಗಾದ ಮೀನುಗಾರಿಕಾ ಹಡಗುಗಳನ್ನು ತಡೆಯಲು ಕಳುಹಿಸಲಾಯಿತು” ಎಂದು ನೌಕಾಪಡೆ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ನೌಕಾ ತಂಡಗಳು ನಂತರ ಹಡಗನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಮೀನುಗಾರಿಕೆ ಚಟುವಟಿಕೆಗಳನ್ನು ಪುನರಾರಂಭಿಸಲು, ಸುರಕ್ಷತೆಯ ದೃಷ್ಟಿಯಿಂದ ಅದು ಸಮುದ್ರದಲ್ಲಿ ಸಾಗುವ ಸಾಮರ್ಥ್ಯ ಪರಿಶೀಲಿಸಿತು ಎಂದು ಭಾರತೀಯ ನೌಕಾಪಡೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


