ನವದೆಹಲಿ: ಭಾರತೀಯ ನೌಕಾಪಡೆಯ ಗಸ್ತು ನೌಕೆ ಐಎನ್ ಎಸ್ ಸುಮಿತ್ರಾ, ಸೋಮಾಲಿಯಾದ ಪೂರ್ವ ಕರಾವಳಿ ಮತ್ತು ಏಡೆನ್ ಕೊಲ್ಲಿಯಲ್ಲಿ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆಗೆ ನಿಯೋಜಿಸಲಾಗಿದ್ದು, ಇರಾನ್ ಮೀನುಗಾರಿಕೆ ಹಡಗು ಇಮಾನ್ನ ಅಪಹರಿಸಲಾಗಿತ್ತು. ನಂತರ ಕಡಲ್ಗಳ್ಳರು ಸಿಬ್ಬಂದಿಗಳನ್ನು ಒತ್ತೆಯಾಳುಗಳಾಗಿ ಮಾಡಿಕೊಂಡಿದ್ದರು. ಈ ಪೈಕಿ ಹಡಗಿನಲ್ಲಿ 17 ಮಂದಿ ಭಾರತೀಯ ಮೀನುಗಾರಿದ್ದರು ಎಂದು ಭಾರತೀಯ ನೌಕಾಪಡೆ ತಿಳಿಸಿದೆ.
ಐಎನ್ ಎಸ್ ಸುಮಿತ್ರಾ ಇರಾನ್ ಹಡಗನ್ನು ಅಪಹರಣ ಮಾಡಿದ್ದ ಸೊಮಾಲಿ ಕಡಲ್ಗಳ್ಳರಿಗೆ ಎಚ್ಚರಿಕೆ ಸಂದೇಶ ಕಳುಹಿಸಿತ್ತು. ಕೂಡಲೇ ಹಗಡನ್ನು ಬಿಟ್ಟು ಹೋಗುವಂತೆ ಸೂಚಿಸಿತ್ತು. ನಂತರ ಕಡಲ್ಗಳ್ಳರು ಹಗಡನ್ನು ಬಿಟ್ಟು ದೋಣಿಯಲ್ಲಿ ಪರಾರಿಯಾದರು.
ಅರಬ್ಬೀ ಸಮುದ್ರದಲ್ಲಿ ಸೊಮಾಲಿ ಕಡಲ್ಗಳ್ಳರು ತಮ್ಮ ಹಡಗನ್ನು ಅಪಹರಿಸಿದ್ದಾರೆ ಎಂಬ ಸಂಕಷ್ಟದ ಕರೆ ಇರಾನ್ ಹಡಗಿನಿಂದ ಬಂದ ಹಿನ್ನೆಲೆಯಲ್ಲಿ ಕೂಡಲೇ ಕಾರ್ಯಪ್ರವೃತ್ತರಾದ ಭಾರತೀಯ ನೌಕಾಪಡೆಯು ಅಪಹರಣಕ್ಕೊಳಗಾಗಿದ್ದ ಹಡಗು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.


