nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 4 ತಿಂಗಳಿನಿಂದ ವೇತನವಿಲ್ಲ:  ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಿಂದ ಧರಣಿ
    ಕೊರಟಗೆರೆ September 25, 2022

    4 ತಿಂಗಳಿನಿಂದ ವೇತನವಿಲ್ಲ:  ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಿಂದ ಧರಣಿ

    By adminSeptember 25, 2022No Comments2 Mins Read
    korategere

    ಕೊರಟಗೆರೆ:  ಪಟ್ಟಣದ ತಾಲ್ಲೂಕು ಆಡಳಿತ ಕಛೇರಿ ಪಕ್ಕದಲ್ಲಿ ಇರುವ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗೆ ಸುಮಾರು 4 ತಿಂಗಳಿನಿಂದ ವೇತನ ನೀಡಿಲ್ಲ, ಮಾತ್ರವಲ್ಲದೇ ಆಹಾರ ಸಾಮಗ್ರಿ ಕೂಡ ಸರಬರಾಜು ಮಾಡುತ್ತಿಲ್ಲವೆಂದು ಸಿಬ್ಬಂದಿ ವರ್ಗ ಕ್ಯಾಂಟೀನ್ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು.

    5 ವರ್ಷಗಳ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದಲ್ಲಿ  ಇದ್ದಾಗ ಆರಂಭವಾದ ಇಂದಿರಾ ಕ್ಯಾಂಟೀನ್ ಗಳು, ಕಡಿಮೆ ಬೆಲೆಯಲ್ಲಿ ಸಾರ್ವಜನಿಕರ ಹಸಿವು ನೀಗಿಸುತ್ತಿತ್ತು. ಕ್ಯಾಂಟೀನ್ ಮುಂದೆ ಜನರ ಉದ್ದುದ್ದ ಸಾಲುಗಳಿದ್ದವು. ಅಪಾರ ಸಂಖ್ಯೆಯಲ್ಲಿ ಜನರು ಇದರ ಸದುಪಯೋಗ ಪಡೆಯುತ್ತಿದ್ದರು. ರೈತರು, ಶಾಲಾ ಮಕ್ಕಳು, ಆಟೋ ಚಾಲಕರು ಸೇರಿದಂತೆ ಸಾರ್ವಜನಿಕರಿಗೆ ಕ್ಯಾಂಟಿನ್ ಸಹಕಾರಿಯಾಗಿತ್ತು. ಆದರೆ ಇತ್ತೀಚೆಗೆ ಇಂದಿರಾ ಕ್ಯಾಂಟೀನ್ ಚಿತ್ರಣ ಬದಲಾಗಿದೆ ಎಂದು ಧರಣಿ ನಿರತರು ಬೇಸರ ವ್ಯಕ್ತಪಡಿಸಿದರು.


    Provided by
    Provided by

    ಕೊರಟಗೆರೆ ಪಟ್ಟಣದ ತಾಲೂಕು ಕಛೇರಿಯ ಬಳಿಯಲ್ಲಿರುವ ಇಂದಿರಾ ಕ್ಯಾಂಟೀನ್ ನಡೆಸಲು ಗುತ್ತಿಗೆ ಪಡೆದ ಬೆಂಗಳೂರು ಮೂಲಕ ಗುತ್ತಿಗೆದಾರ ಇಂದಿರಾ ಕೊರಟಗೆರೆ ಪಟ್ಟಣದ ಕ್ಯಾಂಟೀನ್ ಗೆ ಕಳೆದ 8 ತಿಂಗಳಿನಿಂದ ಸಮರ್ಪಕವಾಗಿ ಆಹಾರ ಸಾಮಗ್ರಿಗಳನ್ನು, ತರಕಾರಿಗಳನ್ನು ಸರಬರಾಜು ಮಾಡದೆ ಸಿಬ್ಬಂದಿಗಳಿಗೆ 4 ತಿಂಗಳಿನಿಂದ ವೇತನ ನೀಡದೆ,  ಸಿಬ್ಬಂದಿ ಸ್ಥಳೀಯ ಅಂಗಡಿ ಮಾಲೀಕರಿಂದ ಖರೀದಿಸಿದ ಸಾಮಗ್ರಿಗಳ ಹಣ ನೀಡದೆ ಕಣ್ಮರೆಯಾಗಿದ್ದಾರೆಂದು ಧರಣಿ ನಿರತ ಸಿಬ್ಬಂದಿ ದೂರಿದರು.

    ವೇತನವಿಲ್ಲದೆ ನಾವು ಕಷ್ಟಕ್ಕೆ ಸಿಲುಕಿದ್ದು, ವೇತನಕ್ಕಾಗಿ ಗುತ್ತಿಗೆದಾರರಿಗೆ ಕರೆ ಮಾಡಿದರೆ ಗುತ್ತಿಗೆದಾರರ ಕರೆ ಸ್ಥಗಿತಗೊಳಿಸಿಕೊಳ್ಳುತ್ತಾರೆ ಎಂದು ಥರಣಿ ನಿರತ ಸಿಬ್ಬಂದಿ ದೂರಿದ್ದು ,ಬಾಕಿ ವೇತನ ನೀಡುವವರೆಗೂ ಧರಣಿ ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

    ಕೊರಟಗೆರೆ ಇಂದಿರಾ ಕ್ಯಾಂಟೀನ್ ನಲ್ಲಿ 8 ಮಂದಿ ಸಿಬ್ಬಂದಿ ಕೆಲಸ ಮಾಡ ಬೇಕಾಗಿದ್ದು, ಆದರೆ ಗುತಿಗೆದಾರರು ಕೇವಲ 4 ಮಂದಿಯನ್ನು ನೇಮಕ ಮಾಡಿಕೊಂಡಿದ್ದಾರೆ. 8 ಮಂದಿ ಸಿಬ್ಬಂದಿಗಳ ಕೆಲಸ ಕೇವಲ 8ಮಂದಿ ಮಾಡುತ್ತಿದ್ದು ಕಳೆದ 5  ವರ್ಷಗಳಿಂದ  ಇದೇ ರೀತಿ ನಡೆಯುತ್ತಿದೆ. ಪ್ರತಿ ತಿಂಗಳು ಸರ್ಕಾರದಿಂದ 8 ಮಂದಿ ಸಿಬ್ಬಂದಿಗೆ ವೇತನ ಬಿಲ್ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದು ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

    ತಹಶೀಲ್ದಾರ್ ನಹೀದ ಜಂ ಜಂ ಮಾತನಾಡಿ,  ವಿಷಯ ತಿಳಿದ ತಕ್ಷಣ ನಾನು ಖುದ್ದು ಭೇಟಿ ನೀಡಿ ಎಲ್ಲವನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದು, ಕಾಂಟ್ರಾಕ್ಟರ್ ನಿಖಿಲ್ ರವರಿಗೆ ದೂರವಾಣಿ ಮೂಲಕ ಕರೆ ಮಾಡಿ ಒಂದು ವಾರದೊಳಗೆ ಸಿಬ್ಬಂದಿಗಳಿಗೆ ವೇತನವನ್ನು ನೀಡಬೇಕೆಂದು ತಿಳಿಸಿದ್ದೇನೆ. ಇನ್ನು ಮುಂದೆ ಇಂದಿರಾ ಕ್ಯಾಂಟೀನ್ ಗೆ ಬರುವ ಪ್ರತಿಯೊಬ್ಬರಿಗೂ ಗುಣಮಟ್ಟದ ಆಹಾರವನ್ನು ನೀಡಬೇಕೆಂದು ತಿಳಿಸಿದ್ದೇನೆ ಮತ್ತು ಕಂಟ್ರಾಕ್ಟರ್ ನಿಖಿಲ್ ಗೆ  ನೋಟಿಸ್ ನೀಡುವಂತೆ ಈಗಾಗಲೇ ಆದೇಶಿಸಿದ್ದೇನೆ ಎಂದು ತಿಳಿಸಿದರು.

    ದಲಿತ ಮುಖಂಡ ಜೆಟ್ಟಿ ಅಗ್ರಹಾರ ನಾಗರಾಜು ಮಾತನಾಡಿ, ತಾಲೂಕಿನ ಬಡ ಜನತೆಯ ಹಸಿವು ನೀಗಿಸುತ್ತಿದ್ದ ಇಂಧಿರಾ ಕ್ಯಾಂಟೀನ್ ಗೆ ಗುತ್ತಿಗೆದಾರ ಸಮರ್ಪಕವಾಗಿ ಆಹಾರ ಸಾಮಗ್ರಿಗಳನ್ನು ಸರಬರಾಜು ಮಾಡದೆ ಹಾಗೂ ಸಿಬ್ಬಂದಿಗೆ ವೇತನ ನೀಡದೆ ಪ.ಪಂ.ಯಿಂದ ಸಂಪೂರ್ಣ ಬಿಲ್ ಪಡೆದಿದ್ದು, ಸಂಬಂದಿಸಿದ ಅಧಿಕಾರಿಗಳು ತಕ್ಷಣ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಂಡು ಸಿಬ್ಬಂದಿಗೆ ವೇತನ ಕೊಡಿಸಬೇಕು. ಮತ್ತು ಕ್ಯಾಂಟೀನ್ ಪ್ರಾರಂಭಿಸುವಂತೆ ಅವರು ಆಗ್ರಹಿಸಿದರಲ್ಲದೇ ಗುತ್ತಿಗೆದಾರ ಮಾತಿಗೆ ತಪ್ಪಿದರೆ ಸಿಬ್ಬಂದಿಯೊಂದಿಗೆ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಸಿದರು.

    ಪ.ಪಂ.ಅಧ್ಯಕ್ಷೆ ಕಾವ್ಯರಮೇಶ್ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ, ಪಟ್ಟಣ ಪಂಚಾಯಿತಿ ವತಿಯಿಂದ ಗುತ್ತಿಗೆದಾರರಿಗೆ ಯಾವುದೇ ಬಿಲ್ ಬಾಕಿ ಇಲ್ಲ. ಇಂದಿರಾ ಕ್ಯಾಂಟೀನ್ ನಿಂದ ಸಾರ್ವಜನಿಕರಿಗೆ ತೋಂದರೆಯಾಗಬಾರುದು ಎಂಬ ದೃಷ್ಟಿಯಿಂದ ಕಾಲ ಕಾಲಕ್ಕೆ ಸರಿಯಾಗಿ ಬಿಲ್ ಪಾವತಿಸಲಾಗಿದೆ. ಸಿಬ್ಬಂದಿಗೆ ವೇತನ ನೀಡಿಲ್ಲ ಎಂಬ ವಿಷಯ ತಿಳಿದು ಗುತ್ತಿಗೆದಾರರಿಗೆ ದೂರವಾಣಿ ಮಾಡಿದರೆ ಗುತ್ತಿಗೆದಾರ ದೂರವಾಣಿ ಸ್ವೀಕರಿಸುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ಮಾಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ತಿಳಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.