ಚಂಡೀಗಢ: ಪಾಕಿಸ್ತಾನ ಸೇನೆ ಮತ್ತು ಐಎಸ್ ಐಗೆ ಭಾರತ ಸೇನೆಯ ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡುತ್ತಿದ್ದ ಆರೋಪದಲ್ಲಿ ಹರ್ಯಾಣದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಮಸ್ತ್ಗಢ ಚೀಕಾ ಗ್ರಾಮದ ದೇವೇಂದ್ರ ಸಿಂಗ್ (25) ಬಂಧಿತ ಆರೋಪಿಯಾಗಿದ್ದಾನೆ. ವಿಚಾರಣೆಯ ಸಂದರ್ಭದಲ್ಲಿ ದೇವೇಂದ್ರ ಸಿಂಗ್ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ ಐ ಜೊತೆ ಸಂಪರ್ಕದಲ್ಲಿರುವುದಾಗಿ ಬಹಿರಂಗಪಡಿಸಿದ್ದಾನೆ.
ದೇವೇಂದ್ರ ಸಿಂಗ್ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆಯೂ ಐಎಸ್ ಐಗೆ ಆಗಾಗ ಮಾಹಿತಿ ರವಾನಿಸಿದ್ದಾನೆ. ಗುಪ್ತಚರ ಮಾಹಿತಿ ಆಧಾರದ ಮೇಲೆ ಕೈಥಲ್ ಜಿಲ್ಲಾ ಪೊಲೀಸರು ದೇವೇಂದ್ರ ಸಿಂಗ್ನನ್ನು ಬಂಧಿಸಿದ್ದಾರೆ.
ಸೈಬರ್ ಪೊಲೀಸ್ ಠಾಣೆಯಲ್ಲಿ ದೇವೆಂದ್ರ ಸಿಂಗ್ ಬಳಿ ಪತ್ತೆಯಾದ ಸಾಧನಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. ತನಿಖೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಎಸ್ ಪಿ ಕೈಥಲ್ ವೀರಭನ್ ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW