ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ ಇಂದು ಕೊರಟಗೆರೆ ತಾಲ್ಲೂಕಿನ ಮಲ್ಲೇಶ್ವರ ಗ್ರಾಮದಲ್ಲಿ ‘ಮುಂಗಾರು ಬಿತ್ತನೆಗೆ ಚಾಲನೆ’ ನೀಡಿದರು.
ಹಂಚಿಹಳ್ಳಿ ಗ್ರಾಮ ಪಂಚಾಯಿತಿಯ ಗೊಲ್ಲದೇವನಹಳ್ಳಿಯಲ್ಲಿ ಮಲ್ಲೇಶ್ವರ ರೈತ ಚನ್ನಪ್ಪ ಅವರ ಜಮೀನಿನಲ್ಲಿ ತೊಗರಿ, ಬಿಆರ್ ಜಿ 05 ಸೊರಗು ನಿರೋದಕ ಬೀಜವನ್ನು ಬಿತ್ತನೆ ಮಾಡಿದರು. ಅಲ್ಲದೆ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಪರಮೇಶ್ವರ ಅವರು ಗಮನಸೆಳೆದರು.
ಈ ವೇಳೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಭು, ತಹಶೀಲ್ದಾರ್ ಮಂಜುನಾಥ್ ಅವರು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296