ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಸ್ಯಕಾಶಿ ಸಿದ್ದರ ತಪೋ ಭೂಮಿ ಆಯುರ್ವೇದಿಕ್ ದಿವ್ಯ ಔಷಧಿಗಳ ತಾಣವೆಂದು ಹೆಸರುವಾಸಿಯಾದ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ದೇವಾಲಯದ ಆವರಣದಲ್ಲಿ ಮತ್ತು ಬೆಟ್ಟದ ಮೇಲಿನ ಸಿದ್ದೇಶ್ವರ ಸ್ವಾಮಿಯ ಗುಹಾಲಯಗಳಲ್ಲಿ ಕಸದ ಬುಟ್ಟಿಗಳನ್ನು ಸ್ಪಿರೀಟ್ ಆಫ್ ಗಿವಿಂಗ್ ತಂಡದವರು ಅಳವಡಿಸಿದ್ದಾರೆ.
ದೇವಾಲಯದ ಆವರಣದಲ್ಲಿ ಬಿದ್ದಿದಂತಹ ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ಬಾಟಲ್, ಕಸ ಕಡ್ಡಿ ಇತ್ಯಾದಿಗಳನ್ನು ಸ್ವಚ್ಛಪಡಿಸಿ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ಪ್ಲಾಸ್ಟಿಕ್ ಮುಕ್ತ ಪುಣ್ಯಕ್ಷೇತ್ರ ವಾಗುವಂತೆ ಜಾಗೃತಿ ಮೂಡಿಸಿದರು.
ಸ್ಪಿರೀಟ್ ಆಫ್ ಗಿವಿಂಗ್ ತಂಡ ವತಿಯಿಂದ ಮಾತನಾಡಿದ ಭವ್ಯ ಪುಣ್ಯಕ್ಷೇತ್ರಗಳು ಮತ್ತು ಪ್ರವಾಸಿ ತಾಣಗಳಲ್ಲಿ ಪರಿಸರವನ್ನು ಅತ್ಯಂತ ಸ್ವಚ್ಛವಾಗಿ ಇಡಬೇಕಾಗಿರೋದು ಎಲ್ಲರ ಕರ್ತವ್ಯವಾಗಿರುತ್ತದೆ. ಪ್ಲಾಸ್ಟಿಕ್ ಕವರ್ ಮತ್ತು ಪ್ಲಾಸ್ಟಿಕ್ ಬಾಟಲ್ ಗಳು ಮಣ್ಣಿನಲ್ಲಿ ಕೊಳೆಯುವ ವಸ್ತುಗಳಲ್ಲಿ ಅದರಿಂದ ಪಶು ಪ್ರಾಣಿ ಪಕ್ಷಿಗಳ ಜೀವ ಹಾನಿ ಆಗುವುದು ಹೆಚ್ಚಾಗುತ್ತಿದ್ದು ಬುದ್ದುವಂತರಾದ ನಾವುಗಳು ತುಂಬಾ ಎಚ್ಚರವಹಿಸಬೇಕಿದೆ ಎಂದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ