ತುಮಕೂರು: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು ಭಾರತ ಸೇರಿದಂತೆ ಇತರೆ ರಾಷ್ಟ್ರಗಳಿಗೆ ನೀಡಿದ ಸಂವಿಧಾನ ಮಾದರಿಯಾಗಿದ್ದು, ದೇಶ ವಿದೇಶಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಪ್ರಜಾಪ್ರಭುತ್ವದ ಜ್ಞಾನಿಯೆಂದು ಪೂಜಿಸುತ್ತಿದ್ದಾರೆ ಇಂತಹದರ ನಡುವೆ ಭಾರತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ವಿಶೇಷ ಸ್ಥಾನಮಾನಗಳಿದ್ದು ಎಲ್ಲಾ ರಾಜ್ಯ ಸರ್ಕಾರಗಳು ರಾಷ್ಟ್ರೀಯ ದಿನಾಚರಣೆಗಳ ಸಮಯ ಸಂದರ್ಭದಲ್ಲಿ ಕಡ್ಡಾಯವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋಗಳನ್ನು ಇಟ್ಟು ಪೂಜಿಸಬೇಕು ಎಂಬ ಆದೇಶವಿದ್ದರೂ ಕೂಡಾ ಇದನ್ನು ಧಿಕ್ಕರಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಡದೆ 76ನೇ ಗಣರಾಜ್ಯೋತ್ಸವವನ್ನು ಆಚರಣೆ ಮಾಡಿರುವುದು ಖಂಡನೀಯವೆಂದು ಜೆಟ್ಟಿ ಅಗ್ರಹಾರ ನಾಗರಾಜು (ಟೈಗರ್ ನಾಗ್) ಅವರು ಆಕ್ರೋಶ ಹಾಕಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡ್ಲಾಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವದ ಆಚರಣೆ ವೇಳೆ ದೇಶ ಕಂಡ ಮಹಾನ್ ಮಾನವತವಾದಿ ತತ್ವಜ್ಞಾನಿ ಸಂವಿಧಾನ ರಚನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಈ ರಾಷ್ಟ್ರದ ಎಲ್ಲಾ ಧರ್ಮ ಎಲ್ಲಾ ಜನಾಂಗ ಮತ್ತು ಸ್ತ್ರೀಯರಿಗೆ ವಿಶೇಷವಾದ ಆದ್ಯತೆಯನ್ನು ನೀಡಿ ಇಡೀ ವಿಶ್ವದಲ್ಲಿಯೇ ಮಾದರಿಯಾದ ದೊಡ್ಡ ಸಂವಿಧಾನವನ್ನು ನೀಡಿದ ಮಹಾನ್ ಪುರುಷ ಚೇತನ ಡಾ.ಬಿ.ಆರ್.ಅಂಬೇಡ್ಕರ್ ರವರ ಫೋಟೋವನ್ನು ಇಡದೆ ಗಣರಾಜ್ಯೋತ್ಸವ ಆಚರಿಸಿರುವುದು ತುಂಬಾ ಕೇದಕರ ವಿಷಯವಾಗಿದೆ ಎಂದು ಅವರು ಘಟನೆಯನ್ನು ಖಂಡಿಸಿದ್ದಾರೆ.
ಶೋಷಿತ ಸಮಾಜ ದುರ್ಬಲರಿಗೆ ಬಡವರಿಗೆ ಎಲ್ಲಾ ವರ್ಗದವರಿಗೂ ಮೀಸಲಾತಿ ತಂದುಕೊಟ್ಟ ಮಹಾನ್ ಪುರುಷ ಡಾ.ಬಿ.ಆರ್.ಅಂಬೇಡ್ಕರ್ ಇವರನ್ನು ಈ ಗ್ರಾಮ ಪಂಚಾಯಿತಿಯ, ಪಂಚಾಯಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿ ಹಾಗೂ ಅಧ್ಯಕ್ಷ ಹಾಗೂ ಸರ್ವ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿಗಳು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋವನ್ನು ಇಡದೆ ಗಣರಾಜ್ಯೋತ್ಸವ ಆಚರಿಸಿರುವುದು ದುರಂತವೇ ಆಗಿದೆ ಎಂದು ದಲಿತ ಸಂರಕ್ಷಣಾ ಸಮಿತಿ ರಾಜ್ಯ ಸಂಚಾಲಕರು ಹಾಗೂ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಆಕ್ರೋಶ ವ್ಯಕ್ತಪಡಿಸಿ ಖಂಡಿಸಿದರು.
ಕೂಡಲೇ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಆಡಳಿತ ಈ ಅಧಿಕಾರಿಗಳನ್ನು ಅಧ್ಯಕ್ಷ ಹಾಗೂ ಸಿಬ್ಬಂದಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಅವರನ್ನು ಸೇವೆಯಿಂದ ಅಮಾನತು ಗೊಳಿಸಬೇಕು, ಇಲ್ಲವಾದರೆ ಹೋರಾಟ ರೂಪಿಸುವುದಾಗಿ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು (ಟೈಗರ್ ನಾಗ್) ರವರು ಎಚ್ಚರಿಕೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx