ತುರುವೇಕೆರೆ : ತಾಲೂಕಿನ ಮಾಯಸಂದ್ರ ಟಿ ಬಿ ಕ್ರಾಸ್ ನಲ್ಲಿರುವ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್( ರಿ ) ನ SBG ಪ್ರಥಮ ದರ್ಜೆ ಕಾಲೇಜಿನಲ್ಲಿ ಜುಲೈ 2ರಂದು SBG ಕ್ರೀಡಾಂಗಣದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಹ್ಯಾಂಡ್ ಬಾಲ್ ಕ್ರೀಡಾಕೂಟವು ಯೋಜನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ರವರು ಪ್ರಧಾನ ಕಾರ್ಯದರ್ಶಿಗಳು ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ತುಮಕೂರು ವಿಶ್ವವಿದ್ಯಾನಿಲಯದ ಕುಲ ಸಚಿವರು(ಪರೀಕ್ಷಾಂಗ) ಪ್ರಸನ್ನ ಕುಮಾರ್, ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕರು ಡಾ.ಮಂಜುನಾಥ್, ಪ್ರೊ, ಪುಟ್ಟರಂಗಪ್ಪ , ಮಂಡ್ಯ ಜಿಲ್ಲೆಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ MN ಪರಮಶಿವಯ್ಯ ಕ್ರೀಡಾಪಟುಗಳಿಗೆ ಶುಭ ಕೋರಿದರು .
ಈ ಕ್ರೀಡಾಕೂಟದಲ್ಲಿSBG ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಪಟುಗಳು ಪ್ರಥಮ ಸ್ಥಾನವನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ವಿಜಯಶಾಲಿ ಕ್ರೀಡಾಪಟುಗಳಿಗೆ ಬ್ರಹ್ಮಚಾರಿ ಶ್ರೀ ರಾಜಶೇಖರನಾಥ ಜಿ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು AB ಚಂದ್ರಶೇಖರ್, ಉಪ ಪ್ರಾಂಶುಪಾಲರು ಸೈಯದ್,
SBG ವಿದ್ಯಾಲಯದ ಪ್ರಾಂಶುಪಾಲರು ಗಿರೀಶ್ S, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ರಾಜು, ತರಬೇತಿದಾರ ಉದಯಕುಮಾರ್, ಶಂಕರ್, ಗಿರಿಧರ್, ಮಹದೇವಸ್ವಾಮಿ, ಎಲ್ಲಾ ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA