nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ
    ಪಾವಗಡ May 9, 2025

    ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ

    By adminMay 9, 2025No Comments2 Mins Read
    lambani

    ತುಮಕೂರು: ಒಳಮೀಸಲಾತಿ ಕಲ್ಪಿಸುವುದಕ್ಕಾಗಿ ರಾಜ್ಯದಲ್ಲಿ ನಡೆದಿರುವ ಸಮೀಕ್ಷೆಯಲ್ಲಿ ಮನೆಗೆ ಬರುವ ಸಮೀಕ್ಷೆ ಅಧಿಕಾರಿಗಳಿಗೆ ಜಿಲ್ಲೆಯ ಲಂಬಾಣಿ ಸಮುದಾಯದವರು ತಪ್ಪದೇ ಬಂಜಾರ (ಲಂಬಾಣಿ) ಎಂದು ನಮೂದಿಸಬೇಕು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ ಎನ್.ಜಯದೇವನಾಯ್ಕ ಮನವಿ ಮಾಡಿದರು.

    ಬಂಜಾರ ಭವನದಲ್ಲಿ ಗುರುವಾರ ನಡೆದ ಮುಖಂಡರ ಸಭೆಯಲ್ಲಿ ಸೇವಾಲಾಲ್ ಹಾಗೂ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಬಂಜಾರ ಸಮುದಾಯದವರು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದಾರೆ. ನಮಗೆ ನಿರ್ದಿಷ್ಟ ಕುಲಕಸುಬು ಇಲ್ಲ, ಕೂಲಿನಾಲಿ ನಂಬಿ ಬದುಕುತ್ತಿರುವವರು. ಈ ಪರಿಸ್ಥಿತಿಯಲ್ಲಿ ಸರ್ಕಾರದ ಮೀಸಲಾತಿ ಸೌಲಭ್ಯ ಪಡೆಯಲು ಸಮುದಾಯದವರು ತಮ್ಮದೇ ಸಮೀಕ್ಷೆಯಲ್ಲಿ ಭಾಗವಹಿಸಿ ನಿಖರವಾದ ಮಾಹಿತಿಯನ್ನು ನೋಂದಾಯಿಸುವಂತೆ ಕೋರಿದರು.


    Provided by
    Provided by

    ಹಿರಿಯ ನ್ಯಾಯವಾದಿ ಅನಂತ ನಾಯ್ಕ ಮಾತನಾಡಿ, ಈ ತಿಂಗಳ 5ರಿಂದ 17ರವರೆಗೆ ಮನೆಮನೆಗೆ ಬಂದು ಸಮೀಕ್ಷೆ ನಡೆಸಲಾಗುತ್ತದೆ. ಇದಕ್ಕಾಗಿ ಸುಮಾರು 58 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇವರಲ್ಲಿ ಶೇಕಡ 50 ರಷ್ಟು ಮಂದಿ ಇನ್ನೂ ಕೆಲಸ ಆರಂಭಿಸಿಲ್ಲ ಎಂದು ತಿಳಿದು ಬಂದಿದೆ. ಜೊತೆಗೆ ತಾಂತ್ರಿಕ ಸಮಸ್ಯೆಗಳೂ ಎದುರಾಗಿವೆ. ಹೀಗಾಗಿ ಸಮೀಕ್ಷೆ ಅವಧಿಯನ್ನು ವಿಸ್ತರಿಸಬೇಕು ಎಂದು ಸರ್ಕಾರವನ್ನು ಕೋರಿದರು.

    ಕೆಲ ಲಂಬಾಣಿ ತಾಂಡಾಗಳಲ್ಲಿ ಸಮೀಕ್ಷೆಗೆ ಬಂದ ಅಧಿಕಾರಿಗಳು ಲಂಬಾಣಿ ಬದಲು ತಮ್ಮ ಜಾತಿ ಹೆಸರು ನೋಂದಣಿ ಮಾಡಿಕೊಂಡಿರುವ ದೂರುಗಳು ಬಂದಿವೆ. ಅಂತಹಅಧಿಕಾರಿ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು.  ಇಂತಹ ಪ್ರಕರಣಗಳು ನಡೆಯದಂತೆ ವಿದ್ಯಾವಂತರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

    ಜಿಲ್ಲಾ ಬಂಜಾರ ಸಂಘದ ಮುಖಂಡ ಶೇಷಾ ನಾಯ್ಕ ಮಾತನಾಡಿ, ನಗರದ ಬಂಜಾರ ಭವನ ನಿರ್ಮಾಣಕ್ಕೆ ತಾಂಡಾಅಭಿವೃದ್ಧಿ ನಿಗಮದಿಂದ 21 ಲಕ್ಷ ರೂ. ಮಂಜೂರು ಮಾಡಿ ನೆರವಾಗಿರುವ ನಿಗಮದ ಅಧ್ಯಕ್ಷ ಜಯದೇವನಾಯ್ಕ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದರು.

    ಜಿಲ್ಲಾ ಬಂಜಾರ ಸಂಘದಅಧ್ಯಕ್ಷ ನಾರಾಯಣ ನಾಯ್ಕ, ಪ್ರಧಾನ ಕಾರ್ಯದರ್ಶಿ ಬಿ.ಶಂಕರ್, ಮುಖಂಡರಾದ ದೇನಾ ನಾಯ್ಕ, ಚಂದ್ರಾ ನಾಯ್ಕ, ಕುಬೇಂದ್ರ ನಾಯ್ಕ, ಮಹಿಳಾ ಘಟಕ ಅಧ್ಯಕ್ಷ ಶಾಂತಮ್ಮ, ಡಿಪೋರಮೇಶ್ ಮೊದಲಾದವರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಚಿಕ್ಕನಾಯಕನಹಳ್ಳಿ: ತನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯರ ಏಳಿಗೆಗಾಗಿ ಶ್ರಮಿಸಿ, ಅವರನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವುದೇ ಒಬ್ಬ ಮಹಿಳೆಯ ಜೀವನದ ದೊಡ್ಡ…

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.