nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026
    Facebook Twitter Instagram
    ಟ್ರೆಂಡಿಂಗ್
    • ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
    • ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    • ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    • ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!
    • 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂತಹ ಘಟನೆ ನಡೆಯಬಾರದಿತ್ತು | ಪಾವಗಡ ಬಸ್ ದುರಂತದ ಬಗ್ಗೆ ಡಾ.ಸುಧಾಕರ್ ಬೇಸರ
    ತುಮಕೂರು March 21, 2022

    ಇಂತಹ ಘಟನೆ ನಡೆಯಬಾರದಿತ್ತು | ಪಾವಗಡ ಬಸ್ ದುರಂತದ ಬಗ್ಗೆ ಡಾ.ಸುಧಾಕರ್ ಬೇಸರ

    By adminMarch 21, 2022No Comments2 Mins Read
    dr sudhakar

    ತುಮಕೂರು: ಶನಿವಾರ ಪಾವಗಡದಲ್ಲಿ ಸಂಭವಿಸಿದ ಬಸ್ ದುರಂತ ಬಹಳ ದುರದೃಷ್ಟಕರ ಇಂತಹ ಘಟನೆ ನಡೆಯಬಾರದಿತ್ತು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಬೇಸರ ವ್ಯಕ್ತಪಡಿಸಿದ್ದಾರೆ.

    ಸೋಮವಾರ ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವರು, ಪಾವಗಡ ಬಸ್ ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಆರೋಗ್ಯ ಸಚಿವರು,  ಪಾವಗಡ ಬಸ್ ದುರಂತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಬೇಸರದ ಸಂಗತಿ ಎಂದರು.


    Provided by
    Provided by

    ಇನ್ನು ಅಪಘಾತಕ್ಕೀಡಾಗಿರುವ ಬಸ್ ನಲ್ಲಿ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಕರೆದೊಯ್ದಿರುವುದು ದುರಂತಕ್ಕೆ ಕಾರಣವಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ಮಾಹಿತಿ ಲಭ್ಯವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.

    ತುಮಕೂರು ಜಿಲ್ಲಾಸ್ಪತ್ರೆಯಲ್ಲಿ 18 ಜನ ರೋಗಿಗಳು ದಾಖಲಾಗಿದ್ದು, ಎಲ್ಲರೂ  ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಕೆಲವರಿಗೆ ಮೂಳೆಮುರಿತಗಳು ಕಂಡುಬಂದಿದ್ದು ಇದಕ್ಕೆ ಸಂಬಂಧಿಸಿದಂತೆ ನಮ್ಮ ಆರೋಗ್ಯ ಸಿಬ್ಬಂದಿಗಳು ಚಿಕಿತ್ಸೆ ನೀಡಲಿದ್ದಾರೆ.

    ಆ ಭಾಗದಲ್ಲಿ ಬಸ್ ನ ಸಮಸ್ಯೆ ಕೂಡ ಇತ್ತು ಎಂದು ಗಮನಕ್ಕೆ ಬಂದಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವರನ್ನು ಭೇಟಿಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವರು ಕ್ರಮ ಕೈಗೊಳ್ಳಲಿದ್ದಾರೆ.

    ಇಂತಹ ತುರ್ತು ಸಂದರ್ಭದಲ್ಲಿ ಆರೋಗ್ಯ ಸಿಬ್ಬಂದಿಗಳು, ಅಧಿಕಾರಿಗಳು ಶ್ರಮ ಹಾಕಿದ್ದು ಅವರಿಗೆ ಅಭಿನಂದನೆ ಸಲ್ಲಿಸಿದರು. ಇನ್ನು ಬೆಂಗಳೂರಿನ ವಿಕ್ಟೋರಿಯಾ, ನಿಮಾನ್ಸ್ ಹಾಗೂ ಸಂಜಯ್ ಗಾಂಧಿ ಆಸ್ಪತ್ರೆಯಲ್ಲೂ ಸಹ ಉತ್ತಮ ವೈದ್ಯಕೀಯ ಚಿಕಿತ್ಸೆಯನ್ನು ಪಾವಗಡದ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವೈದ್ಯರು ಸೇರಿದಂತೆ ಎಲ್ಲ ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಿ ಸಮರೋಪಾದಿಯಲ್ಲಿ ಚಿಕಿತ್ಸೆ ನೀಡಿದ್ದಾರೆ ಎಂದರು.

    ಇನ್ನು ಅಪಘಾತ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿ ಐದು ಜನ ಮೃತಪಟ್ಟಿದ್ದು ಬೆಂಗಳೂರಿಗೆ ಮತ್ತೊಂದು ರೋಗಿಯನ್ನು ಸಾಗಿಸುವ ಸಂದರ್ಭದಲ್ಲಿ ಮತ್ತೊಬ್ಬ ರೋಗಿ ಮೃತಪಟ್ಟಿದ್ದಾರೆ. ಮುಂದೆ ಈ ರೀತಿ ಸಮಸ್ಯೆ ಆಗದಂತೆ ಹೆಚ್ಚಿನ ಸಂಖ್ಯೆಯ ಬಸ್ ಗಳನ್ನು ನೀಡುವ ಸಂಬಂಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಇನ್ನು ವಿದ್ಯಾಭ್ಯಾಸಕ್ಕಾಗಿ ತೆರಳುತ್ತಿದ್ದ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಈ ರೀತಿ ಆಗಿರುವುದು ನಿಜಕ್ಕೂ ಎಲ್ಲರಿಗೂ ನೋವಿನ ಸಂಗತಿ ಇಂತಹ ಘಟನೆಗಳಿಂದ ವಿದ್ಯಾರ್ಥಿಗಳನ್ನು ಕಳೆದುಕೊಳ್ಳುವುದು ಸರ್ಕಾರ ಹಾಗೂ ಪೋಷಕರಿಗೂ ನೋವು ತಂದಿದೆ .ಇಂತಹ ಘಟನೆಗಳನ್ನು ನಡೆಯುವುದು ಯಾವುದೇ ಸರ್ಕಾರ ನಿರೀಕ್ಷೆ ಮಾಡುವುದಿಲ್ಲ ಇದಕ್ಕೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದಿದ್ದಾರೆ.

    ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ವೀರಭದ್ರಯ್ಯ, ಡಾ.ಚಂದನ್ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

    ವರದಿ: ಮಾರುತಿ ಪ್ರಸಾದ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ

    January 1, 2026

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಕೊರಟಗೆರೆ : ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ರವರು ಮುಖ್ಯಮಂತ್ರಿಯಾಗಲಿ ಎಂದು ಹೊಸ ವರ್ಷದ ಮೊದಲ ದಿನವೇ ಕ್ಯಾಮೇನಹಳ್ಳಿ ಆಂಜಿನೇಯ ಸ್ವಾಮಿ…

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.