ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಒಡೆತನದ ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿರುವ ಶಿಥಿಲಗೊಂಡಿರುವ ಹೆದ್ದಾರಿ ಫಲಕಗಳನ್ನು ತೆರವುಗೊಳಿಸಬೇಕಾಗಿರುವ ಕಾರಣ ಈ ಫಲಕಗಳನ್ನು ವಿಲೇವಾರಿ ಮಾಡಲು ವಿವಿಧ ಸಂಘ ಸಂಸ್ಥೆಗಳಿಂದ ದರಪಟ್ಟಿ ಆಹ್ವಾನಿಸಲಾಗಿದೆ.
ಶಿಥಿಲಗೊಂಡಿರುವ ಹೆದ್ದಾರಿ ಫಲಕಗಳನ್ನು ಯಥಾಸ್ಥಿತಿಯಲ್ಲಿ ಪಡೆಯಲು ಇಚ್ಚಿಸುವವರು ಸೆಪ್ಟೆಂಬರ್ 13ರೊಳಗೆ ಸಂಸ್ಥೆಯ ಪೂರ್ಣ ವಿಳಾಸದ ವಿವರಗಳೊಂದಿಗೆ ದರಪಟ್ಟಿಯನ್ನು ಸಿದ್ದಪಡಿಸಿ ಮುಚ್ಚಿದ ಲಕೋಟೆಯಲ್ಲಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಾಳನಕಟ್ಟೆ, ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಹತ್ತಿರ, ತುಮಕೂರು–572101 ಇವರಿಗೆ ಸಲ್ಲಿಸುವುದು. ಅವಧಿ ಮೀರಿದ ನಂತರ ಲಕೋಟೆಗಳನ್ನು ಸ್ವೀಕರಿಸುವುದಿಲ್ಲ.
ಹೆಚ್ಚಿನ ಮಾಹಿತಿ ಹಾಗೂ ಶಿಥಿಲಗೊಂಡ ಪ್ರಚಾರ ಫಲಕಗಳ ವಿವರಗಳಿಗಾಗಿ ಮೊ.ಸಂ.9964525155ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296