ಬೆಂಗಳೂರು: RCB ಮತ್ತು ಪಂಜಾಬ್ ನಡುವೆ ಇಂದು IPL ಫೈನಲ್ ಮ್ಯಾಚ್ ನಡೆಯಲಿದ್ದು, ಇದೇ ವೇಳೆ ಪಂದ್ಯದ ಬಳಿಕ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ಕ್ರಮಕೈಗೊಂಡಿದ್ದು, ಸಾರ್ವಜನಿಕರಿಗೆ ತೊಂದರೆ ನೀಡದಂತೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಖಡಕ್ ಸೂಚನೆ ನೀಡಿದ್ದಾರೆ.
ನಗರದ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಇನ್ನೂ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಇಡಿ ಸ್ಕ್ರೀನ್ ಅಳವಡಿಸಿದ್ರೆ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ.
ಇನ್ನೂ ಪೊಲೀಸರಿಗೆ ಮಾಹಿತಿ ಇಲ್ಲದೇ ಎಲ್ ಇಡಿ ಸ್ಕ್ರೀನ್ ಅಳವಡಿಸಿದ್ರೆ ಹಾಗೂ ಪಂದ್ಯದ ಬಳಿಕ ಸಂಭ್ರಮಾಚರಣೆ ಮಾಡಿ, ಇತರರಿಗೆ ತೊಂದರೆಕೊಟ್ಟರೆ ಅಂತವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಸೂಚನೆ ನೀಡಿದ್ದಾರೆ.
ಇಂದು ಸಂಜೆ 7:30ಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯದಲ್ಲಿ ಆರ್ ಸಿಬಿ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW