ಇವತ್ತಿನ ದಿನದಲ್ಲಿ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಒಳ್ಳೇದು ಎಂದು ಹುಬ್ಬಳ್ಳಿಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಇವತ್ತಿನ ದಿನ ಮಾನದಲ್ಲಿ ರಾಜಕೀಯ ಬಗ್ಗೆ ಕಡಿಮೆ ಮಾತಾಡಿದ್ರೆ ಒಳ್ಳೇದು.
ಬರ, ಅತಿವೃಷ್ಟಿ ಇದ್ದಾಗ ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಬೇಕು. ದಿನೇದಿನೆ ಅವರನ್ನು ಬೈಯ್ಯೋದು, ಇವರನ್ನು ಬೈಯ್ಯೋದೇ ಆಗಿದೆ. ನಾವು ಕಠಿಣ ಸಂದರ್ಭದಲ್ಲಿ ಇದ್ದೇವೆ, ರಾಜಕೀಯ ಕಲುಷಿತವಾಗಿದೆ. ಚುನಾವಣೆಯಲ್ಲಿ ಗೆದ್ದ ಮೇಲೆ ಎಲ್ಲರ ಯೋಗಕ್ಷೇಮ ನೋಡಬೇಕು. ಬೆಳಗಾವಿಯಲ್ಲಿ ಅಧಿವೇಶನ ಮಾಡಲು ನಾನು ಪತ್ರ ಬರೆದಿದ್ದೇನೆ ಎಂದರು.


