nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
    • ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
    • ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
    • ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
    • ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಅನ್ನದ ಭಾಷೆಯಲ್ಲ ಎಂಬುದು ಕೇವಲ ಭ್ರಮೆ : ಎಲ್.ಎನ್.ಮುಕುಂದರಾಜ್
    ತುಮಕೂರು March 2, 2025

    ಕನ್ನಡ ಅನ್ನದ ಭಾಷೆಯಲ್ಲ ಎಂಬುದು ಕೇವಲ ಭ್ರಮೆ : ಎಲ್.ಎನ್.ಮುಕುಂದರಾಜ್

    By adminMarch 2, 2025No Comments2 Mins Read
    l n mukunda raj

    ತುಮಕೂರು: ಕನ್ನಡ ಮಧ್ಯಮದಲ್ಲಿ ಓದಿದವರಿಗೆ ಉದ್ಯೋಗ ದೊರಕುವುದಿಲ್ಲ ಎಂಬ ಭ್ರಮೆಯಲ್ಲಿ ನಾವಿಂದು ಇದ್ದೇವೆ. ಸಾವಿರಾರು ವರ್ಷಗಳಿಂದಲೂ ಕನ್ನಡ ಭಾಷಿಕರು ಉದ್ಯೋಗ ಮಾಡುತ್ತಲೇ ಬರುತ್ತಿದ್ದಾರೆ. ಕನ್ನಡ ಭಾಷೆ ಬರುವವನಿಗೆ ಅದು ಒಂದಲ್ಲಾ ಒಂದು ರೀತಿ ಶಕ್ತಿಯನ್ನು ತುಂಬುತ್ತಲೇ ಇದೆ. ನಮ್ಮ ಜನ ಯಾಕೆ ಈ ರೀತಿ ಚಿಂತಿಸುತ್ತಾರೋ. ಇಂತಹ ಮನೋಭಾವನೆಯನ್ನು ಕನ್ನಡಿಗರೆಲ್ಲ ಬಿಟ್ಟುಬಿಡಬೇಕು. 20ನೇ ಶತಮಾನದಲ್ಲಿ ಬದುಕಿ ಕನ್ನಡದಲ್ಲಿ ಸಾಹಿತ್ಯ ರಚನೆ ಮಾಡಿದ ವಿದ್ವಾಂಸರೆಲ್ಲ ಕನ್ನಡ ಮಾಧ್ಯಮದಲ್ಲಿಯೇ ಓದಿ ಬಂದವರು ಎಂಬುದನ್ನು ನಾವೆಲ್ಲಾ ನೆನಪಿನಲ್ಲಿಟ್ಟುಕೊಳ್ಳಬೇಕು. ಇಂತಹ ಕೀಳರಿಮೆಯ ಮನೊಭಾವವನ್ನು ಕನ್ನಡಿಗರು ಬಿಡಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್.ಮುಕುಂದರಾಜ್ ಅಭಿಪ್ರಾಯಪಟ್ಟರು.

    ಅವರು ತುಮಕೂರು ಬಳಿಯ ಕೋರಾ ಗ್ರಾಮದಲ್ಲಿ ಏರ್ಪಡಿಸಿದ್ದ ತುಮಕೂರು ತಾಲ್ಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಇಂದಿನ ಬದಲಾದ ಪರಿಸ್ಥಿತಿಯಲ್ಲಿ ಲೇಖಕರು ಮುಕ್ತವಾಗಿ ಬರೆಯಲೂ, ಮಾತನಾಡಲೂ ಆಗದ ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ. ಇಂದು ತರುಣ ಬರಹಗಾರರಿಗೆ ನೈತಿಕ ಸ್ಥೈರ್ಯವನ್ನು ತುಂಬುವಂತಹ ಸಾಹಿತಿಗಳ ಕೊರತೆ ಕಂಡುಬರುತ್ತಿದೆ. ಆದ್ದರಿಂದಲೇ ತರುಣ ಬರಹಗಾರರು ಆತ್ಮವಿಶ್ವಾಸದಿಂದ ಸುರಕ್ಷಿತವಾಗಿ ಬರೆಯಲು ಸಾಧ್ಯವಾಗುತ್ತಿಲ್ಲ. ಸಾಹಿತಿಯಾದವನು ಯಾವುದಕ್ಕೂ ಅಂಜದೆ ಅಳುಕದೆ ತನ್ನ ಚಿಂತನೆಗಳನ್ನು ಮುಕ್ತವಾಗಿ ಅಕ್ಷರ ರೂಪದಲ್ಲಿ ದಾಖಲಿಸಿ ಎಂದು ಕರೆ ನೀಡಿದರು.

    ಸಮ್ಮೇಳನಾಧ್ಯಕ್ಷರಾದ ಎಂ.ನಂಜಯ್ಯನವರು ಮಾತನಾಡಿ, ತುಮಕೂರು ತಾಲ್ಲೂಕು ಸಾಹಿತ್ಯ ಮತ್ತು ಕಲೆಗಳ ತವರೂರಾಗಿದ್ದು ಇಲ್ಲಿನ ಪ್ರಾಚೀನ ಕಲೆಗಳೆಲ್ಲಾ ನಗರೀಕರಣದ ಪ್ರಭಾವಕ್ಕೆ ಒಳಗಾಗಿ ಆಧುನಿಕತೆಯ ಮೆರುಗನ್ನು ಪಡೆದುಕೊಂಡಿವೆ. ಈ ಭಾಗದ ಚಿಟ್ಟಿಮೇಳ, ವೀರಗಾಸೆ, ಮೆಳೇಹಳ್ಳಿಯ ನಾಟಕ ತಂಡಗಳು ಇನ್ನೂ ನಮ್ಮಲ್ಲಿ ಕಲೆಗಳು ಜೀವಂತವಾಗಿರುವುದನ್ನು ತೋರಿಸುತ್ತವೆ. ಕೋರಾ ಮಹಾನಾಡಪ್ರಭುಗಳ ಕೇಂದ್ರವಾಗಿ ಇತಿಹಾಸಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿದ್ದು, ಇಂದು ಈ ಊರಿನಲ್ಲಿ ಐತಿಹಾಸಿಕ ಕುರುಹುಗಳು ಒಂದೂ ಕಾಣುತ್ತಿಲ್ಲ. ಐತಿಹಾಸಿಕ ಕುರುಹುಗಳನ್ನು ಸಂಗ್ರಹಿಸಿ ಅದಕ್ಕೆ ಒಂದು ವಸ್ತುಸಂಗ್ರಹಾಲಯವನ್ನು ನಿರ್ಮಿಸಿದರೆ ಭವಿಷ್ಯದ ಜನಾಂಗಕ್ಕೆ ನಮ್ಮ ಕಲಾ ಪರಂಪರೆಯನ್ನು ಕೊಂಡೊಯ್ಯಬಹುದು ಎಂದರು.

    ತುಮಕೂರು ನಗರದ ಗಡಿಭಾಗದಲ್ಲಿ ಹಿಂದೆ ಗ್ರಾಮೀಣ ಜನ ಕನ್ನಡ ಮಾಧ್ಯಮ ಶಾಲೆಗಳಿಗೆ ವಿದ್ಯಾರ್ಥಿಗಳ ಕೊರತೆ ಉಂಟಾಗಿದ್ದು, ಗ್ರಾಮಾಂತರ ಪ್ರದೇಶದ ಮಕ್ಕಳೆಲ್ಲಾ ನಗರದ ಇಂಗ್ಲೀಷ್ ಮಾಧ್ಯಮ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಅವರು ಹಳ್ಳಿಗಾಡಿನ ಕನ್ನಡ ಶಾಲೆಗಳನ್ನು ಸದೃಢಗೊಳಿಸಬೇಕಾಗಿದೆ. ಮೂಕ ಪ್ರಾಣಿಗಳಂತೆ ದೇಹ ದಂಡಿಸುತ್ತಾ ಬಂದಿರುವ ಕೃಷಿಕನ ಬೆವರಿಗೆ ಬೆಲೆಯೇ ಇಲ್ಲದಂತಾಗಿದೆ. ತೋಟಗಾರಿಕೆ ಬೆಳೆಗಳು ರೋಗಪೀಡಿತವಾಗಿವೆ. ಇದಕ್ಕಿಂತಲೂ ತಾನು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತ ಕಂಗಲಾಗಿದ್ದಾನೆ ಎಂದರು.

    ನಿಕಟಪೂರ್ವ 6ನೇ ಸಮ್ಮೇಳನಾಧ್ಯಕ್ಷರಾದ ಪ್ರೊ.ಕೋ.ರಂ.ಬಸವರಾಜು ಧ್ವಜ ಹಸ್ತಾಂತರಿಸಿದರು. ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಆಶಯ ನುಡಿಗಳನ್ನಾಡಿದರು. ಬೆಳ್ಳಾವಿ ಕಾರದ ಮಠದ ಕಾರದ ವೀರಬಸವ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು. ವೇದಿಕೆಯಲ್ಲಿ ನಾಟಕ ಅಕಾಡೆಮಿ ಸದಸ್ಯ ರವೀಂದ್ರ ಸಿರಿವರ, ಅಪ್ಪಗೆರೆ ತಿಮ್ಮರಾಜು, ಕಾರ್ಯದರ್ಶಿ ಡಾ. ಡಿ.ಎನ್.ಯೋಗೀಶ್ವರಪ್ಪ, ಸ್ವಾಗತ ಸಮಿತಿ ಅಧ್ಯಕ್ಷರಾದ ಕೆ.ಸಿ.ನರಸಿಂಹಮೂರ್ತಿ, ಚಿಕ್ಕಬೆಳ್ಳಾವಿ ಶಿವಕುಮಾರ್ ಹಾಜರಿದ್ದರು.

    ಮಧ್ಯಾಹ್ನ ನಡೆದ ಗೋಷ್ಠಿಯಲ್ಲಿ ಕೋ.ರಂ.ಬಸವರಾಜು ಸಮ್ಮೇಳನಾಧ್ಯಕ್ಷರ ಸಾಹಿತ್ಯಾವಲೋಕನ, ಡಾ. ಬಿ.ನಂಜುಂಡಸ್ವಾಮಿ ಯವರು ಕೋರಾದ ಸ್ಥಳೀಯ ಸಂಸ್ಕೃತಿ, ಶ್ವೇತಾರಾಣಿ ಶಿಕ್ಷಣ ನಗರದಿಂದ ಕೈಗಾರಿಕಾ ನಗರದತ್ತ ತುಮಕೂರು. ಡಾ.ಶಿವಣ್ಣ ಬೆಳವಾಡಿ ಜಾನಪದ ಕಲೆ ಮತ್ತು ಸಾಹಿತ್ಯದ ಮೇಲೆ ನಗರದ ಪ್ರಭಾವ ಕುರಿತು ಪ್ರಬಂಧಗಳನ್ನು ಮಂಡಿಸಿದರು. ಡಾ. ಸಿದ್ಧಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಆನಂತರ ಡಾ. ಲಕ್ಷ್ಮಮಣದಾಸ್ ಅಧ್ಯಕ್ಷತೆಯಲ್ಲಿ ರಂಗಭೂಮಿ ಕುರಿತ ಗೋಷ್ಠಿ ನಡೆಯಿತು. ಎಂ.ವಿ.ನಾಗಣ್ಣ ಪ್ರಬಂಧ ಮಂಡಿಸಿದರು. ಸುಗುಣಾದೇವಿ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ಕಮಲಾ ರಾಜೇಶ್ ಉದ್ಘಾಟಿಸಿದರು. 15 ಜನ ಕವಿಗಳು ಕವಿತೆ ವಾಚಿಸಿದರು. ಎಂ.ಜಿ.ಸಿದ್ಧರಾಮಯ್ಯನವರ ಗಮಕ ವ್ಯಾಖ್ಯಾನ ಕಾರ್ಯಕ್ರತಮ ನಡೆಸಿಕೊಟ್ಟರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

    May 11, 2026

    ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್

    May 11, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಪಾವಗಡ: ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಮ್ ಯುವಕ ಸಂಘದ ಕರೆಕ್ಯಾತನಹಳ್ಳಿ ವತಿಯಿಂದ ಅಂಬೇಡ್ಕರ್ ಅವರ 135ನೇ…

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026

    ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ

    May 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.