ತಿಪಟೂರು: ಸಮಾಜ ಸೇವಕ, ಕಾಂಗ್ರೆಸ್ ಪಕ್ಷದ ತಾಲೂಕು ಮುಖಂಡರಾಗಿರುವ, ಕೆ.ಟಿ.ಶಾಂತಕುಮಾರ್ ಅವರಿಗೆ ಜೆಡಿಎಸ್ ಪ್ರಾದೇಶಿಕ ಪಕ್ಷ ಸೇರುವಂತೆ ಜೆಡಿಎಸ್ ಪಕ್ಷದ ಮುಖಂಡರು, ನೂರಾರು ಸಂಖ್ಯೆಯಲ್ಲಿ ಶಾಂತಕುಮಾರ್ ಮನೆಗೆ ಆಗಮಿಸಿ, ಮನವಿ ಮಾಡಿದ್ದಾರೆ
ನಗರದ ಕೆ.ಆರ್.ಬಡಾವಣೆಯಲ್ಲಿರುವ ಕೆ.ಟಿ.ಶಾಂತಕುಮಾರ್ ನಿವಾಸಕ್ಕೆ ಆಗಮಿಸಿದ, ಜೆಡಿಎಸ್ ತಾಲೂಕು ಕಾರ್ಯಾಧ್ಯಕ್ಷ ಶಿವಸ್ವಾಮಿ ಈ ವೇಳೆ ಮಾತನಾಡಿ, ತಾಲೂಕಿನ ಕೊನೆಹಳ್ಳಿ ಗ್ರಾಮದಲ್ಲಿ ಹುಟ್ಟಿ ಬೆಳೆದಿರುವ ಕೆ.ಟಿ.ಶಾಂತಕುಮಾರ್ ಅವರು, ಸಮಾಜ ಸೇವಕರಾಗಿ ತಾಲೂಕಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.
ತಮ್ಮ ಸಮಾಜ ಸೇವೆಗೆ ತಮ್ಮ ಸ್ವಂತ ಹಣ ಬಳಕೆ ಮಾಡಿ ಒಬ್ಬ ಸದೃಢ ನಾಯಕರಾಗಿ ತಾಲೂಕಿನಲ್ಲಿ ಸೇವೆಯ ಮೂಲಕ ಗುರುತಿಸಿಕೊಂಡಿದ್ದಾರೆ, ಕಾಂಗ್ರೆಸ್ ಪಕ್ಷದ ಮುಖಂಡರಾಗಿರುವ ಕೆ.ಟಿ.ಶಾಂತಕುಮಾರ್ ರವರು, ಜೆಡಿಎಸ್ ಪಕ್ಷಕ್ಕೆ ಬಂದರೆ ನೂರು ಆನೆ ಬಲ ಜೆಡಿಎಸ್ ಪಕ್ಷಕ್ಕೆ ಬರಲಿದೆ ಎಂದರು.
ತಾಲೂಕಿನ ಪ್ರತಿ ಸಮುದಾಯದವರೊಂದಿಗೆ ಉತ್ತಮಒಡನಾಟ ಹೊಂದಿರುವ ಕೆ.ಟಿ.ಶಾಂತಕುಮಾರ್, ಜೆಡಿಎಸ್ ಪಕ್ಷ ಸೇರಬೇಕೆಂದು ಗ್ರಾಮೀಣ ಭಾಗದ ಕಾರ್ಯಕರ್ತರ ಒತ್ತಡ ಪಕ್ಷದ ಹೈಕಮಾಂಡ್ ಮೇಲಿದೆ, ಆದ ಕಾರಣ ಕೆ.ಟಿ.ಶಾಂತಕುಮಾರ್ ಅವರಿಗೆ ಜೆಡಿಎಸ್ ಗೆ ಬರುವಂತೆ ತಾಲೂಕು ಘಟಕ ದಿಂದ ಮನವಿ ಮಾಡುತ್ತಿದ್ದೇವೆ ಎಂದರು.
ತಾಲೂಕು ಜೆಡಿಎಸ್ ಮುಖಂಡ ಮಲ್ಲೇನಹಳ್ಳಿ ಜಗದೀಶ್ ಮಾತನಾಡಿ, ಕೆ.ಟಿ.ಶಾಂತಕುಮಾರ್ ಜೆಡಿಎಸ್ ಪಕ್ಷಕ್ಕೆ ಬಂದು ಪಕ್ಷದಿಂದ ಸ್ಪರ್ಧಿಸಿದರೆ, ಮಾಜಿ ಶಾಸಕ ಬಿ,ನಂಜಾವರಿಯವರು ಕೂಡ ಕೆ.ಟಿ.ಶಾಂತಕುಮಾರ್ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
ಈಗಾಗಲೇ ತಾಲೂಕಿನಲ್ಲಿ ಉತ್ತಮ ಸಮಾಜ ಸೇವಕರು ಎಂದು ಹೆಸರು ಗಳಿಸಿರುವ ಶಾಂತಕುಮಾರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡು, 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ಚುನಾವಣಾ ಕಣಕ್ಕೆ ಇಳಿದರೆ ಶಾಸಕರಾಗುವುದರಲ್ಲಿ ಯಾವುದೇ ಅನುಮಾನ ಬೇಡ ಎಂದರು.
ಜೆಡಿಎಸ್ ಪಕ್ಷದ ಮುಖಂಡರಾದ ಗೋವಿಂದಸ್ವಾಮಿ, ಬಾಳೇಕಾಯಿ ಸ್ವಾಮಿ ,ರಾಜಶೇಖರ್, ತಿಮ್ಮೇಗೌಡ, ರಾಕೇಶ್, ನಾಗರಾಜು, ಮೊದಲಾದವರು ಕೆಟಿ ಶಾಂತಕುಮಾರ್ ಜೆಡಿಎಸ್ ಪಕ್ಷ ಸೇರ್ಪಡೆಗೊಂಡರೆ ಪಕ್ಷ ಬಲಗೊಳ್ಳಲಿದೆ ಎಂದು ಸಭೆಯಲ್ಲಿ ಹೇಳಿದರು.
ಈ ವೇಳೆ ಮಾತನಾಡಿದ ಸಮಾಜ ಸೇವಕ ಕೆ.ಟಿ.ಶಾಂತಕುಮಾರ್, ಕಳೆದ ಹಲವಾರು ವರ್ಷಗಳಿಂದ ತಾಲೂಕಿನಲ್ಲಿ ಕುಡಿಯುವ ನೀರು, ಗೋವು ಗಳಿಗೆ ಮೇವು, ಕರೋನಾ ಸಂದರ್ಭದಲ್ಲಿ ಸೇವೆ ಹೀಗೆ ಹತ್ತಾರು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ನಾನು ತೊಡಗಿಸಿಕೊಂಡಿದ್ದೇನೆ, ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿದ್ದು, ಕಾಂಗ್ರೆಸ್ ಪಕ್ಷದ ವತಿಯಿಂದ ವಿಧಾನಸಭೆಗೆ ಟಿಕೆಟ್ ನೀಡುವಂತೆ ವರಿಷ್ಠರಲ್ಲಿ ಮನವಿ ಮಾಡಿದ್ದೇನೆ, ಪಕ್ಷದ ಮುಖಂಡರ ಅಭಿಪ್ರಾಯ ಹಾಗೂ ನನ್ನ ಬೆಂಬಲಿಗರ ಜೊತೆ ಮಾತನಾಡಿದ ನಂತರ, ಮುಂದಿನ ನಿರ್ಧಾರ ಇನ್ನೊಂದು ವಾರದಲ್ಲಿ ಕೈಗೊಳ್ಳುತ್ತೇನೆ ಎಂದು ಜೆಡಿಎಸ್ ಮುಖಂಡರಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ರಾಧಮ್ಮನಾರಾಯಣಗೌಡ, ಯುವ ಮುಖಂಡರಾದ ರೋಹಿತ್, ಜ ಮೃದ್ ಪಾಷಾ, ಮಂಜು, ಕುಮಾರ್ ಯೋಗಾನಂದ ಮೊದಲಾದವರು ಇದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy