ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಗರಸಭೆಯಲ್ಲಿ ಶುಕ್ರವಾರ ನಡೆದ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಯಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಿ.ಸುಧಾಕರ್ ರವರ ನೇತೃತ್ವದಲ್ಲಿ ಜೆ.ಆರ್. ಅಜಯ್ ಕುಮಾರ್ ರವರು ಅವಿರೋಧವಾಗಿ ಆಯ್ಕೆಯಾದರು .
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ನೂತನವಾಗಿ ಆಯ್ಕೆಯಾಗಿರುವ ಅಜಯ್ ಕುಮಾರ್ ರವರಿಗೆ ಶುಭಾಶಯ ತಿಳಿಸಿದರು . ಬಳಿಕ ನಡೆದ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಎಲ್ಲಾರಿಗೂ ಸಿಹಿ ಹಂಚಿ ನಗರಸಭೆ ಮುಂದೆ ಪಟಾಕಿ ಸಿಡಿಸಿ, ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ಗೆ ಪೂಜೆ ಸಲ್ಲಿಸಿದರು .
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯೂರು ತಾಲ್ಲೂಕಿನ ನಗರಸಭೆ ಪೌರಯುಕ್ತ ಡಿ. ಉಮೇಶ್, ಸ್ಥಾಯಿ ಸಮಿತಿ ಚುನಾವಣೆ ಪ್ರಕ್ರಿಯೆ ಗೊಂಡು, ಈ ಚುನಾವಣೆ ಪ್ರಕ್ರಿಯೆ ಯಲ್ಲಿ ಹಿರಿಯೂರು ನಗರಸಭೆ ಯಲ್ಲಿ ಒಟ್ಟು 33 ಜನ ಸದಸ್ಯರುಗಳಲ್ಲಿ 30 ಜನ ಭಾಗವಹಿಸಿದರು. ಇದರಲ್ಲಿ ಒಬ್ಬರು ಸೂಚಕರು , ಒಬ್ಬರು ಅನುಮೋಧಕರಾಗಿದ್ದು, ಒಟ್ಟು 10 ಜನ ಸ್ಥಾಯಿ ಸಮಿತಿಯ ಚುನಾವಣೆಯಲ್ಲಿ ಆಯ್ಜೆಯಾಗಿದ್ದು , ಆ ಹತ್ತು ಜನರಲ್ಲಿ ಹಿರಿಯೂರು ನಗರಸಭೆ ಸದಸ್ಯರಾದ ಜೆ .ಆರ್. ಅಜಯ್ ಕುಮಾರ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್, ನಗರಸಭೆ ಮಾಜಿ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಚಿತ್ರಜಿತ್ ಯಾದವ್, ನಗರಸಭೆ ಸದಸ್ಯರಾದ ಮಂಜಣ್ಣ , ಶಿವರಂಜನಿ , ಮಮತಾ, ಜಗದೀಶ್, ಐಮಂಗಲ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಕಲ್ಲಹಟ್ಟಿ ಹರೀಶ್ , ಬ್ಯಾಡರಹಳ್ಳಿ ಶಕುಂತಲ, ನಗರಸಭೆ ಅಧ್ಯಕ್ಷರಾದ ಶಂಶದ್ ಉನ್ನಿಸಾ, ಉಪಾಧ್ಯಕ್ಷರಾದ ಬಿ. ಎನ್ .ಪ್ರಕಾಶ್ , ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಸಾದತ್ ವುಲ್ಲಾ , ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ನಾಗೇಂದ್ರ ನಾಯ್ಕ , ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುರೇಖಾಮಣಿ, ವಿ ಶಿವಕುಮಾರ್ , ಜ್ಞಾನೇಶ್, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಇತರರು ಈ ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB