ಹಲಸಿನ ಕಾಯಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿಯಲ್ಲದೇ ನಮ್ಮ ದೇಹದಲ್ಲಿರುವ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ. ಮಧುಮೇಹಿಗಳ ಅತ್ಯುತ್ತಮ ಆಹಾರ ಇದಾಗಿದೆ ಎಂದು ತಜ್ಞರು ಹೇಳುತ್ತಾರೆ.
ಹಲಸಿನ ಹಣ್ಣನ್ನು ದೋಸೆ, ಇಡ್ಲಿ ಮೊದಲಾದ ರೂಪದಲ್ಲಿ ಸೇವಿಸುತ್ತೇವೆ. ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ಅನ್ನ, ಗೋಧಿ ಬದಲಿಗೆ ಹಲಸಿನ ಕಾಯಿಯನ್ನು ಸೇವಿಸಬಹುದು ಎನ್ನಲಾಗಿದೆ.
ಹಲಸಿನ ಹಣ್ಣನ್ನು ಹಿಟ್ಟಿನ ರೂಪದಲ್ಲಿ ಬಳಕೆ ಮಾಡುವುದರಿಂದ ಕಾರ್ಬೋಹೈಡ್ರೇಟ್ ಗಳು ಕಡಿಮೆ ಆಗುತ್ತವೆ. ಕ್ಯಾಲರಿಗಳನ್ನು ಕಡಿಮೆ ಮಾಡಿ ತೂಕ ಇಳಿಸಲು ನೆರವಾಗುತ್ತವೆ.
ಇದೊಂದು ಸ್ಥಳೀಯ ಆಹಾರವೂ ಆಗಿರುವುದರಿಂದ ಇದರಲ್ಲಿರುವ ಪೌಷ್ಟಿಕಾಂಶಗಳು ದೇಹಕ್ಕೆ ಹೆಚ್ಚು ಉಪಕಾರಿಯಾದವು ಎಂಬುದನ್ನು ಸಂಶೋಧನೆ ದೃಢಪಡಿಸಿದೆ. ಹಲಸಿನಲ್ಲಿ ವಿಟಮಿನ್ ಸಿ ಹೇರಳವಾಗಿದ್ದು ದೇಹದಲ್ಲಿ ಶಕ್ತಿ ಬಲವರ್ಧನೆ ಆಗುವುದರ ಜೊತೆ ಕ್ಯಾನ್ಸರ್ ಗುಣಕಾರಿಯಾಗಿಯೂ ಬಳಕೆಯಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz