ಬೀದರ್: ಡಾ.ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೆ ವಿಶೇಷ ಅನುದಾನ ಮಂಜೂರು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್. ಸಿ ಮಹಾದೇವಪ್ಪ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸಚಿವರನ್ನು ಭೇಟಿ ಮಾಡಿದ ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ಅವರ ಮನವಿಗೆ ಸ್ಪಂದಿಸಿ ಅವರು ಈ ಆಶ್ವಾಸನೆ ನೀಡಿದರು.
ಚಿಕ್ಕಪೇಟೆಯ ಸರ್ವೇ ಸಂಖ್ಯೆ 61 ರಲ್ಲಿ ಭವನ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ ಒಂದು ಎಕರೆ ಜಮೀನು ಒದಗಿಸಿದೆ. 12 ವರ್ಷ ಗಳ ಹಿಂದೆ ರೂ.50 ಲಕ್ಷ ಅನುದಾನ ಕೂಡ ಮಂಜೂರು ಮಾಡಿದೆ. ಆದರೆ ಈ ಅನುದಾನದಲ್ಲಿ ಭವನ ನಿರ್ಮಾಣ ಅಸಾಧ್ಯವಾಗಿದೆ ಎಂದು ಜಾನಸನ್ ಘೋಡೆ ಸಚಿವರ ಗಮನ ಸೆಳೆದರು.
ಭವನ ನಿರ್ಮಾಣದಿಂದ ಜಿಲ್ಲಾ ಕೇಂದ್ರದಲ್ಲಿ ವಾಸಿಸುವ ದೀನ ದಲಿತರು ಹಾಗೂ ಬಡವರಿಗೆ ಸಭೆ ಸಮಾರಂಭ ಹಾಗೂ ಇತರ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ. ಹೀಗಾಗಿ ಭವನಕ್ಕೆ ರೂ.5 ಕೋಟಿ ವಿಶೇಷ ಅನುದಾನ ಕಲ್ಪಿಸಬೇಕು ಎಂದು ಮನವಿ ಮಾಡಿದರು. ನಮ್ಮ ಮನವಿಗೆ ಸ್ಪಂದಿಸಿ ಸಚಿವರು ವಿಶೇಷ ಅನುದಾನ ಮಂಜೂರು ಮಾಡಿವ ಭರವಸೆ ನೀಡಿದ್ದಾರೆ ಎಂದು ಜಾನಸನ್ ಘೋಡೆ ತಿಳಿಸಿದರು
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC