ಮಧುಗಿರಿ: ಮಳೆ ಹಾನಿ ಪೀಡಿತ ಸ್ಥಳಗಳಿಗೆ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಹಾಗೂ ತಹಸೀಲ್ದಾರ್ ಸುರೇಶ್ ಆಚಾರ್ ತೆರಳಿ ಗ್ರಾಮವಾಸಿಗಳ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ,.
ಮಳೆಯಿಂದಾಗಿ ಹಾನಿಗೊಳಗಾದ ಮನೆಗಳ ಬಗ್ಗೆ ಮತ್ತು ಕಡಿತಗೊಂಡ ರಸ್ತೆಗಳ ಸಂಪರ್ಕದ ಬಗ್ಗೆ ಪರಿಶೀಲನೆ ನಡೆಸಿ, ಜಲಾವೃತಗೊಂಡ ಮನೆಗಳಲ್ಲಿ ಸಿಲುಕಿದ ಗ್ರಾಮ ವಾಸಿಗಳನ್ನು ರಕ್ಷಿಸಿದರು.
ಈ ಬಗ್ಗೆ ಅಧಿಕಾರಿಗಳು ಮಾಧ್ಯಮದೊಂದಿಗೆ ಮಾತನಾಡಿ , ಸಾರ್ವಜನಿಕರು ಹಳ್ಳ-ಕೊಳ್ಳ ಕೆರೆ-ಕಟ್ಟೆ ಹರಿಯುತ್ತಿರುವ ನದಿಯ ದಡಕ್ಕೆ ಯಾರು ಸಹ ಇಳಿಯಬಾರದು. ಮುಖ್ಯವಾಗಿ ಮಕ್ಕಳನ್ನು ಈ ಸಮಯದಲ್ಲಿ ಹರಿಯುತ್ತಿರುವ ನೀರಿನ ಹತ್ತಿರ ಹೋಗದಂತೆ ತಡೆಯಬೇಕು ಎಂದು ಎಚ್ಚರಿಸಿದರು.
ಸತತವಾಗಿ ಭಾರಿ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ ಕಟ್ಟೆಗಳು ತುಂಬಿದ್ದು , ಜಯಮಂಗಲಿ ನದಿ ಮೈದುಂಬಿ ಹರಿಯುತ್ತಿದ್ದು , ಇದರಿಂದ ತಗ್ಗುಪ್ರದೇಶದ ಗ್ರಾಮಗಳಿಗೆ ನೀರು ನುಗ್ಗಿ ಜಲವೃತವಾಗಿದೆ. ಇದರಿಂದ ಅಪಾರ ಹಾನಿಯಾಗಿದೆ ಎಂದು ತಿಳಿಸಿದರು.
ಮಳೆಯಿಂದಾಗಿ ಗ್ರಾಮಗಳಿಗೆ ನೀರು ನುಗ್ಗಿ ಜಲಾವೃತಗೊಂಡರೆ ಗ್ರಾಮವಾಸಿಗಳು ತಕ್ಷಣ ತಾಲೂಕು ಅಧಿಕಾರಿಗಳಾದ ತಹಸೀಲ್ದಾರ್, ತಾಲೂಕು ಪಂಚಾಯಿತಿ ಇ ಒ. ಸಂಬಂಧಪಟ್ಟ ಗ್ರಾಮಗಳ ಪಿಡಿಒಗಳಿಗೆ ಮಾಹಿತಿ ತಿಳಿಸಬೇಕು ಎಂದು ತಿಳಿಸಿದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz