ನಿವೇಶನ ಕಬಳಿಸಿರುವ ವಿಚಾರವಾಗಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಕುಟುಂಬಸ್ಥರ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಹೀತಾ ನಾಜೀನ್ ಎಂಬುವರು ಶಾಸಕ ಜಮೀರ್ ಅಹಮದ್ ಹಾಗೂ ಅವರ ಸಹೋದರ ಜಮೀಲ್ ಅಹಮದ್ ತಮಗೆ ಮಾರಾಟ ಮಾಡಲಾಗಿದ್ದ ನಿವೇಶನಗಳನ್ನು ಕಬಳಿಸಲು ಯತ್ನಿಸಿದ್ದರು.ಪ್ರಶ್ನಿಸಿದರೆ ಅವರ ಕಡೆಯವರು ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.
ಇದೇ ವೇಳೆ ವಾದ-ಪ್ರತಿವಾದ ಆಲಿಸಿದ 7 ನೇ ಎಸಿಎಂಎ ನ್ಯಾಯಾಲಯ ಆರೋಪಿತರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಂಪಿಗೆಹಳ್ಳಿ ಪೊಲೀಸರಿಗೆ ನಿರ್ದೇಶನ ನೀಡಿದ ಮೇರೆಗೆ ಈಗ ಅವರು ಶಾಸಕ ಜಮೀರ್ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.2015 ರಲ್ಲಿ ಚೊಕ್ಕನಹಳ್ಳಿ ಬಡಾವಣೆಯಲ್ಲಿರುವ ನಿವೇಶನವನ್ನ ಜೆ.ಸಿ.ನಗರ ನಿವಾಸಿ ಶಾಹೀತಾ ನಾಜೀನ್ ಎಂಬುವರು ಜಮೀರ್ ಕುಟುಂಬಸ್ಥರಿಂದ ಖರೀದಿ ಮಾಡಿದ್ದರು. 2018 ರಲ್ಲಿ ಜಮೀರ್ ಕುಟುಂಬಸ್ಥರಿಂದಲೇ ಮತ್ತೊಂದು ಸೈಟ್ ಖರೀದಿಸಿದ್ದರು.ನಿವೇಶನ ಖರೀದಿಸಿ ಕೆಲವರ್ಷಗಳಾದರೂ ಸೈಟ್ ಗಳ ಕಡೆ ಗಮನ ಹರಿಸಿರಲಿಲ್ಲ.ಈ ಮಧ್ಯೆ ಮಾರಾಟ ಮಾಡಿದ್ದ ಜಮೀರ್ ಕುಟುಂಬದಿಂದಲೇ ಸೈಟ್ ಗಳನ್ನು ಕಬಳಿಸಲು ಯತ್ನಿಸಿದ್ದಾರೆ.ಇದನ್ನು ಪ್ರಶ್ನಿಸಿದ್ದ ಶಾಹೀತಾ ನಾಜೀನ್ ಕುಟುಂಬಕ್ಕೆ ಶಾಸಕರ ಬೆಂಬಲಿಗರಿಂದ ಜೀವಬೆದರಿಕೆ ಹಾಕಿದ್ದರು ಎಂದು ಶಾಹೀತಾ ಆರೋಪಿಸಿದ್ದರು.ಸದ್ಯ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಆಂಟೋನಿ, ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB