ರಾಜ್ಯಾದ್ಯಂತ ಜೇಮ್ಸ್ ಚಿತ್ರವನ್ನು ತೆಗೆದು ರಾಜ್ಯಾದ್ಯಂತ ಬೇರೆ ಚಿತ್ರ ಹಾಕುವ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದು ಪ್ರತಿಭನೆ ನಡೆಸಿ ಯಾವುದೇ ಕಾರಣಕ್ಕೂ ಈ ಚಿತ್ರವನ್ನು ತೆಗೆಯಬಾರದು ಎಂದು ಆಗ್ರಹಿಸಿದರು.
ಪರಭಾಷಾ ಚಿತ್ರಗಳ ಹಾವಳಿಯಿಂದ ಕನ್ನಡ ಚಿತ್ರಗಳಿಗೆ ಧಕ್ಕೆಯಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡ ಚಿತ್ರಗಳಿಗೆ ಅಗ್ರಸ್ಥಾನ. ಉತ್ತಮ ಚಿತ್ರವಾಗಿ ಮೂಡಿ ಬಂದಿರುವ ಪುನೀತ್ ರಾಜ್ಕುಮರ್ ಅಭಿನಯದ ಜೇಮ್ಸ್ ಎಲ್ಲೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಅದನ್ನು ಬಲವಂತವಾಗಿ ತೆಗೆದು ಹಾಕುವ ಪಿತೂರಿ ಮಾಡುತ್ತಿರುವ ಕ್ರಮ ಖಂಡನೀಯ ಎಂದು ಹೇಳಿದರು.ಕಳೆದ ಐದು ದಶಕಗಳ ಹಿಂದೆ ಡಾ.ರಾಜ್ಕುಮಾರ್ ಅಭಿನಯಿಸಿದ್ದ ರಣೀರ ಕಂಠೀರವ ಚಿತ್ರಕ್ಕೂ ಹೋರಾಟ ಮಾಡಿ ಚಿತ್ರಮಂದಿರ ಕೊಡಿಸಬೇಕಾಯಿತು.
ಬಂಗಾರದ ಮನುಷ್ಯ ಚಿತ್ರವನ್ನು ತೆಗೆಯದಂತೆಯೂ ಕೂಡ ನಾವು ಹೋರಾಟ ಮಾಡಿದ್ದೆವು ಎಂದು ಹೇಳಿದರು.ನಮ್ಮ ರಾಜ್ಯದಲ್ಲಿ ನಿರಂತರವಾಗಿ ಪರಭಾಷಿಗರ ದೌರ್ಜನ್ಯ ನಡೆಯುತ್ತಲೇ ಇದೆ. ಯಾವುದೋ ಕಾರಣಕ್ಕೆ ನಮ್ಮ ಚಿತ್ರರಂಗ ಸೊರಗುತ್ತಿದೆ. ಉತ್ತಮ ಪ್ರದರ್ಶನ ಕಾಣುತ್ತಿದ್ದರೂ ಕೂಡ ಅದನ್ನು ತೆಗೆದು ಹಾಕುವ ಹುನ್ನಾರ ಮಾಡಲಾಗುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ ಎಂದು ಅವರು ಹೇಳಿದರು.
ವರದಿ ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB