ಪಾವಗಡ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲ್ಲೂಕಿನ ವೈ.ಎನ್.ಹೊಸಕೋಟೆಯ ವಾಸವಿ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಧಾ–ಕೃಷ್ಣ ವೇಷ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.
ಸುಮಾರು150 ಮಕ್ಕಳು ರಾಧಾ ಮತ್ತು ಶ್ರೀಕೃಷ್ಣವೇಷವನ್ನು ಧರಿಸಿಕೊಂಡು ಬಂದಿದ್ದು ಈ ದೃಶ್ಯ ಗಳು ತುಂಬಾ ಆಕರ್ಷಣೀಯ ವಾಗಿದ್ದವು. ಬಾಲಕರು ಕೃಷ್ಣ ನಾಗಿ, ಬಾಲಕಿಯರು ರಾಧೆಯಾಗಿ ವೇಷಧರಿಸುವ ಮೂಲಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬ ಕ್ಕೆ ಮೆರುಗನ್ನು ನೀಡಿದರು.
ಶಾಲೆಯಲ್ಲಿ ಮಕ್ಕಳು ಹಾಡು, ನೃತ್ಯ, ಮೊಸರು ಕುಡಿಕೆ ಹೊಡೆಯುವ ಮೂಲಕ ಸಂಭ್ರಮಿಸಿದರು.
ಆಡಳಿತ ಮಂಡಳಿಯ ನಿರ್ದೇಶಕರು ಹಾಗು ಆಡಳಿತಾಧಿಕಾರಿಗಳಾದ ಶ್ರೀನಿವಾಸ್ ರವರು ಹಾಗು ಶಿಕ್ಷಕರು ಪೋಷಕರು ಮಕ್ಕಳ ಜೊತೆ ಸಂಭ್ರಮಿಸಿ ಶುಭಾಶಯಗಳನ್ನು ಕೋರಿದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q