ವೈ.ಎನ್.ಹೊಸಕೋಟೆ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವು ಜನವರಿ 13ರಂದು ರಂಗಸಮುದ್ರ ಗ್ರಾಮದಲ್ಲಿ ನಡೆಯಲಿದೆ ಎಂದು ಪಾವಗಡ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ಕಟ್ಟ ನರಸಿಂಹಮೂರ್ತಿ ತಿಳಿಸಿದರು.
ತಾಲ್ಲೂಕಿನ ವೈ ಎನ್ ಹೊಸಕೋಟೆ ಗ್ರಾಮದಲ್ಲಿ ಇರುವ ಶತಮಾನ ಶತಮಾನ ಕಂಡ ಸರ್ಕಾರಿ ಹಿರಿಯ ಬಾಲಕರ ಪಾಠ ಶಾಲೆಯಲ್ಲಿ ಸೋಮವಾರದಂದು ವೈ.ಎನ್. ಹೊಸಕೋಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಸಮ್ಮೇಳನದ ಪೂರ್ವಭಾವಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವೈ ಎನ್ ಹೊಸಕೋಟೆ ಹೋಬಳಿ ಘಟಕದ ಅಧ್ಯಕ್ಷ ಹೋ.ಮ. ನಾಗರಾಜು ಮಾತನಾಡಿ, ಈ ಸಮ್ಮೇಳನದಲ್ಲಿ ಸಾಧಕರಿಗೆ ಸನ್ಮಾನ ಇರುತ್ತದೆ, ಎಲ್ಲರೂ ತಪ್ಪದೇ ಹಾಜರಾಗಬೇಕೆಂದು ಮನವಿ ಮಾಡಿಕೊಂಡರು.
ಇದೇ ಸಂದರ್ಭದಲ್ಲಿ ಐ.ಎ.ನಾರಾಯಣಪ್ಪ, ಚಂದ್ರಶೇಖರ್ ಮುದರಾಡಿ, ಫಕ್ರುದ್ದೀನ್, ದೇವರಾಜ್, ನಿರ್ಮಲ ಹಾಗೂ ಮುಂತಾದವರು ಹಾಜರಾಗಿದ್ದರು.
ವರದಿ: ನಂದೀಶ್ ನಾಯ್ಕ