ಬೆಂಗಳೂರು: ಇಂದು ಕೊಪ್ಪಳದ ಬಿಜೆಪಿಯ ಮಾಜಿ ಸಂಸದ ಕರಡಿ ಸಂಗಣ್ಣ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಸೋಲಿನ ಭಯದಿಂದಲೇ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕರಡಿ ಸಂಗಣ್ಣ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಕಾರ್ಯಕ್ರಮ ಬಿಜೆಪಿಯನ್ನು ತೊಳೆಯುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಗ್ಯಾರಂಟಿಯ ದೊಡ್ಡ ಅಲೆ ಇದೆ ಬಿಜೆಪಿಯಲ್ಲಿ ಸುಮಾರು ನೂರು ಸಂಸದರಿಗೆ ಟಿಕೆಟ್ ಕೊಟ್ಟಿಲ್ಲ ಸರ್ವೆಯಲ್ಲಿ ಗೆಲ್ಲಲ್ಲ ಅಂತ ಸಂಸದರಿಗೆ ಟಿಕೆಟ್ ನಿರಾಕರಿಸಿದ್ದಾರೆ ಎಂದರು.
ಎನ್ ಡಿ ಎ ಪರಿಸ್ಥಿತಿ ಏನು ಅಂತ ಇದರಲ್ಲೇ ಗೊತ್ತಾಗುತ್ತದೆ. ಸಂವಿಧಾನ ಬದಲಾವಣೆ ಸಾಧ್ಯವಿಲ್ಲ ಅಂತ ಮೋದಿ ಹೇಳುತ್ತಾರೆ. ಆದರೆ ಅವರ ಪಕ್ಷಕರು ಸಂವಿಧಾನ ಬದಲಿಸುತ್ತೇವೆ ಎಂದಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296