nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

    August 17, 2026

    ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!

    August 17, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    • ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ
    ಗುಬ್ಬಿ December 30, 2025

    ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ

    By adminDecember 30, 2025No Comments2 Mins Read
    muralidhar halappa

    ಗುಬ್ಬಿ: ಎಂಟು ಜಿಲ್ಲೆಯ ರೈತರ ಕೆರೆಗಳಿಗೆ ನೀರು ತುಂಬಿಸಿ ರೈತರ ಜೀವಜಲವಾಗಲು ಹೊರಟಿರುವ ಎತ್ತಿನಹೊಳೆ ಯೋಜನೆ ಮುಗಿಯುವ ಹಂತದಲ್ಲಿರುವಾಗ ಅಸೂಯೆಯಿಂದ ಕೇಂದ್ರ ಸರ್ಕಾರ ಇಲ್ಲಸಲ್ಲದ ಕ್ಯಾತೆ ತೆಗೆದು ಯೋಜನೆ ಪೂರ್ಣಗೊಳಿಸಲು ಅಡ್ಡಿಪಡಿಸುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಕಿಡಿಕಾರಿದರು. ಅವರು ಪ್ರವಾಸಿ ಮಂದಿರದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

    ರಾಜ್ಯದ ದೊಡ್ಡ ನೀರಾವರಿ ಯೋಜನೆ ಎನಿಸಿದ್ದ ಎತ್ತಿನಹೊಳೆ ಯೋಜನೆ ಹಾಸನ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಜಿಲ್ಲೆಯ 76 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸುವ ಮಹತ್ತರ ಕಾರ್ಯ ನಡೆದಿದೆ. 29 ತಾಲ್ಲೂಕಿನ 6657 ಗ್ರಾಮಗಳಿಗೆ, 527 ಕೆರೆಗಳಿಗೆ ಒಟ್ಟು 14 ಟಿಎಂಸಿ ನೀರು ಹರಿಯಲಿದೆ. ಈ ಯೋಜನೆಯಿಂದ ಎಂಟು ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಯಾಗಲಿದೆ. ಒಟ್ಟು 252.69 ಕಿಮೀ ಉದ್ದದ ಕಾಲುವೆಯಲ್ಲಿ 208 ಕಿಮೀ ಕಾಮಗಾರಿ ಪೂರ್ಣವಾಗಿದೆ ಎಂದರು.

    ಕೇಂದ್ರ ಸರ್ಕಾರ ಈ ಮಟ್ಟದ ಕಾಮಗಾರಿ ಆಗುವವರೆಗೆ ಸುಮ್ಮನಿದ್ದು ಈಗ ನಾಲ್ಕು ತಿಂಗಳಿಂದ ಏಕಾಏಕಿ ಮೂರು ಸಮಿತಿ ರಚಿಸಿ ಪರಿಸರ ಹೆಸರಿನಿಂದ ಅಡ್ಡಿಗಾಲು ಹಾಕಿದೆ. ಈ ಯೋಜನೆ ಬಗ್ಗೆ ಮನವರಿಕೆ ಮಾಡಲು ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ದೆಹಲಿ ಹಾಗೂ ಡೆಹ್ರಾಡೂನ್ ತೆರಳಿ 111 ಹೆಕ್ಟೇರ್ ಅರಣ್ಯ ಪ್ರದೇಶದ ಅರಣ್ಯಿಕರಣ ಬಗ್ಗೆ ಸವಿವರವಾಗಿ ಚರ್ಚಿಸಿದ್ದರೂ ಅನುಮತಿ ನೀಡುತ್ತಿಲ್ಲ. ದುರುದ್ದೇಶ ಎದ್ದು ಕಾಣುವ ಹಿನ್ನೆಲೆ ರೈತರಿಗೆ ಅವಶ್ಯ ಎತ್ತಿನಹೊಳೆ ಯೋಜನೆ ಉಳಿಸಲು ಜನವರಿ 4 ರಂದು ಕೆ.ಬಿ.ಕ್ರಾಸ್ ಬಳಿ ಜನಧ್ವನಿ ಕಾರ್ಯಕ್ರಮದ ಮೂಲಕ ಗುಬ್ಬಿ, ತಿಪಟೂರು, ಚಿಕ್ಕನಾಯಕನಹಳ್ಳಿ ಹಾಗೂ ತುರುವೇಕೆರೆ ತಾಲ್ಲೂಕಿನ ಜನರಿಗೆ ಅರಿವು ಮೂಡಿಸಿ ಕೇಂದ್ರ ಸರ್ಕಾರದ ಜನವಿರೋಧಿತನ ಬಯಲಿಗೆ ಎಳೆಯಲಾಗುವುದು ಎಂದರು.

    ಕೆಪಿಸಿಸಿ ಮಾಜಿ ಸದಸ್ಯ ಕೆ.ಆರ್.ತಾತಯ್ಯ ಮಾತನಾಡಿ, ಬೃಹತ್ ಯೋಜನೆಗೆ ಭೂ ಸ್ವಾಧೀನ ವಿಚಾರದಲ್ಲಿ ಅಡೆತಡೆ ಎದುರಾದಾಗ ಡಿ.ಕೆ.ಶಿವಕುಮಾರ್ ಅವರು ಮುನ್ನು ನಿಂತು ಎಲ್ಲಾ ಸಮಸ್ಯೆ ಬಗೆಹರಿಸಿ ಹತ್ತು ವರ್ಷದಲ್ಲಿ ಅಂತಿಮ ರೂಪಕ್ಕೆ ತಂದಿದ್ದಾರೆ. ಪ್ರಾಯೋಗಿಕವಾಗಿ ನೀರು ಹರಿಸಲಾಗಿದೆ. ಕೇಂದ್ರ ಕುತಂತ್ರದ ಬಗ್ಗೆ ತುಮಕೂರು ಜಿಲ್ಲೆಯ ಫಲಾನುಭವಿ ತಾಲ್ಲೂಕಿನ ಜನರಿಗೆ ಅರಿವು ಮೂಡಿಸಲು ಜನಧ್ವನಿ ಕಾರ್ಯಕ್ರಮ ಕೆ.ಬಿ.ಕ್ರಾಸ್ ಬಳಿ ಆಯೋಜಿಸಲಾಗಿದೆ ಎಂದರು.

    ಗುಬ್ಬಿ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ವೆಂಕಟೇಶ್ ಮಾತನಾಡಿ, ಎತ್ತಿನಹೊಳೆ ಯೋಜನೆ ಮುಗಿಯುವ ಹಂತದಲ್ಲಿ ಐಎ ಇಲಾಖೆಗಳನ್ನು ಧೂ ಬಿಟ್ಟು ತಕರಾರು ಸೃಷ್ಟಿಸಿದ ಕೇಂದ್ರ ಸರ್ಕಾರದ ದುರುದ್ದೇಶ ಬಗ್ಗೆ ಜನರಿಗೆ ತಿಳಿಸಬೇಕಿದೆ. ಈ ಬಗ್ಗೆ ಜಿಲ್ಲೆಯ ರೈತರಿಗೆ, ಮಹಿಳೆಯರಿಗೆ, ಯುವ ಜನಾಂಗಕ್ಕೆ ತಿಳಿಸಿ ಎತ್ತಿನಹೊಳೆ ಯೋಜನೆ ಉಳಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಮುಂದಿನ ಭಾನುವಾರ ತಾಲ್ಲೂಕಿನ ರೈತ ಬಾಂಧವರು ಕೆ.ಬಿ.ಕ್ರಾಸ್ ಹೋರಾಟಕ್ಕೆ ಭಾಗಿಯಾಗುವಂತೆ ಕರೆ ನೀಡಿದರು.

    ಜಿಪಂ ಮಾಜಿ ಸದಸ್ಯ ಜಿ. ಎಚ್.ಜಗನ್ನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ಯತೀಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಭಾಗ್ಯಮ್ಮ, ಮುಖಂಡರಾದ ಗುರು ರೇಣುಕಾರಾಧ್ಯ, ಎ.ನರಸಿಂಹಮೂರ್ತಿ, ವಾಸುಗೌಡ, ಈಶ್ವರಯ್ಯ, ಕಿಟ್ಟದಕುಪ್ಪೆ ನಾಗರಾಜ್, ತಿಮ್ಮಪ್ಪಾಳ್ಳ ಶಶಿ ಇನ್ನಿತರರು ಇದ್ದರು.

    “2014 ರಲ್ಲಿ ಸಿದ್ದರಾಮಯ್ಯ ಅವರೇ ಚಾಲನೆ ನೀಡಿದ್ದ ಎತ್ತಿನಹೊಳೆ ಯೋಜನೆಗೆ ಈಗಾಗಲೇ ರಾಜ್ಯ ಸರ್ಕಾರ 23 ಸಾವಿರ ಕೋಟಿ ರೂ. ವಿನಿಯೋಗಿಸಿ, ಶೇಕಡಾ 90 ರಷ್ಟು ಕೆಲಸ ಪೂರ್ಣವಾಗಿದೆ. ಈ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ಹೆಸರು ಬರುತ್ತದೆ ಎಂಬ ಅಸೂಯೆಯಲ್ಲಿ ಅರಣ್ಯ, ಪರಿಸರ ಹೆಸರಿನಿಂದ ಕೇಂದ್ರ ಸರ್ಕಾರ ಯೋಜನೆಗೆ ಅಡ್ಡಿಗಾಲು ಹಾಕುತ್ತಿದೆ.”

    – ಮುರಳೀಧರ ಹಾಲಪ್ಪ ಉಪಾಧ್ಯಕ್ಷರು, ಕೆಪಿಸಿಸಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

    August 17, 2026

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಸಾರ್ವಜನಿಕರು ಮೃತಪಟ್ಟ ಘಟನೆಯನ್ನು ಕೇಂದ್ರ…

    ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!

    August 17, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.