nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ

    June 18, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
    • ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
    • ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
    • ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
    • ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ
    • ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
    • ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
    • ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್‌ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ
    ಗುಬ್ಬಿ December 30, 2025

    ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ

    By adminDecember 30, 2025No Comments2 Mins Read
    muralidhar halappa

    Provided by
    Provided by

    ಗುಬ್ಬಿ: ಎಂಟು ಜಿಲ್ಲೆಯ ರೈತರ ಕೆರೆಗಳಿಗೆ ನೀರು ತುಂಬಿಸಿ ರೈತರ ಜೀವಜಲವಾಗಲು ಹೊರಟಿರುವ ಎತ್ತಿನಹೊಳೆ ಯೋಜನೆ ಮುಗಿಯುವ ಹಂತದಲ್ಲಿರುವಾಗ ಅಸೂಯೆಯಿಂದ ಕೇಂದ್ರ ಸರ್ಕಾರ ಇಲ್ಲಸಲ್ಲದ ಕ್ಯಾತೆ ತೆಗೆದು ಯೋಜನೆ ಪೂರ್ಣಗೊಳಿಸಲು ಅಡ್ಡಿಪಡಿಸುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಕಿಡಿಕಾರಿದರು. ಅವರು ಪ್ರವಾಸಿ ಮಂದಿರದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

    ರಾಜ್ಯದ ದೊಡ್ಡ ನೀರಾವರಿ ಯೋಜನೆ ಎನಿಸಿದ್ದ ಎತ್ತಿನಹೊಳೆ ಯೋಜನೆ ಹಾಸನ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಜಿಲ್ಲೆಯ 76 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸುವ ಮಹತ್ತರ ಕಾರ್ಯ ನಡೆದಿದೆ. 29 ತಾಲ್ಲೂಕಿನ 6657 ಗ್ರಾಮಗಳಿಗೆ, 527 ಕೆರೆಗಳಿಗೆ ಒಟ್ಟು 14 ಟಿಎಂಸಿ ನೀರು ಹರಿಯಲಿದೆ. ಈ ಯೋಜನೆಯಿಂದ ಎಂಟು ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಯಾಗಲಿದೆ. ಒಟ್ಟು 252.69 ಕಿಮೀ ಉದ್ದದ ಕಾಲುವೆಯಲ್ಲಿ 208 ಕಿಮೀ ಕಾಮಗಾರಿ ಪೂರ್ಣವಾಗಿದೆ ಎಂದರು.

    ಕೇಂದ್ರ ಸರ್ಕಾರ ಈ ಮಟ್ಟದ ಕಾಮಗಾರಿ ಆಗುವವರೆಗೆ ಸುಮ್ಮನಿದ್ದು ಈಗ ನಾಲ್ಕು ತಿಂಗಳಿಂದ ಏಕಾಏಕಿ ಮೂರು ಸಮಿತಿ ರಚಿಸಿ ಪರಿಸರ ಹೆಸರಿನಿಂದ ಅಡ್ಡಿಗಾಲು ಹಾಕಿದೆ. ಈ ಯೋಜನೆ ಬಗ್ಗೆ ಮನವರಿಕೆ ಮಾಡಲು ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ದೆಹಲಿ ಹಾಗೂ ಡೆಹ್ರಾಡೂನ್ ತೆರಳಿ 111 ಹೆಕ್ಟೇರ್ ಅರಣ್ಯ ಪ್ರದೇಶದ ಅರಣ್ಯಿಕರಣ ಬಗ್ಗೆ ಸವಿವರವಾಗಿ ಚರ್ಚಿಸಿದ್ದರೂ ಅನುಮತಿ ನೀಡುತ್ತಿಲ್ಲ. ದುರುದ್ದೇಶ ಎದ್ದು ಕಾಣುವ ಹಿನ್ನೆಲೆ ರೈತರಿಗೆ ಅವಶ್ಯ ಎತ್ತಿನಹೊಳೆ ಯೋಜನೆ ಉಳಿಸಲು ಜನವರಿ 4 ರಂದು ಕೆ.ಬಿ.ಕ್ರಾಸ್ ಬಳಿ ಜನಧ್ವನಿ ಕಾರ್ಯಕ್ರಮದ ಮೂಲಕ ಗುಬ್ಬಿ, ತಿಪಟೂರು, ಚಿಕ್ಕನಾಯಕನಹಳ್ಳಿ ಹಾಗೂ ತುರುವೇಕೆರೆ ತಾಲ್ಲೂಕಿನ ಜನರಿಗೆ ಅರಿವು ಮೂಡಿಸಿ ಕೇಂದ್ರ ಸರ್ಕಾರದ ಜನವಿರೋಧಿತನ ಬಯಲಿಗೆ ಎಳೆಯಲಾಗುವುದು ಎಂದರು.

    ಕೆಪಿಸಿಸಿ ಮಾಜಿ ಸದಸ್ಯ ಕೆ.ಆರ್.ತಾತಯ್ಯ ಮಾತನಾಡಿ, ಬೃಹತ್ ಯೋಜನೆಗೆ ಭೂ ಸ್ವಾಧೀನ ವಿಚಾರದಲ್ಲಿ ಅಡೆತಡೆ ಎದುರಾದಾಗ ಡಿ.ಕೆ.ಶಿವಕುಮಾರ್ ಅವರು ಮುನ್ನು ನಿಂತು ಎಲ್ಲಾ ಸಮಸ್ಯೆ ಬಗೆಹರಿಸಿ ಹತ್ತು ವರ್ಷದಲ್ಲಿ ಅಂತಿಮ ರೂಪಕ್ಕೆ ತಂದಿದ್ದಾರೆ. ಪ್ರಾಯೋಗಿಕವಾಗಿ ನೀರು ಹರಿಸಲಾಗಿದೆ. ಕೇಂದ್ರ ಕುತಂತ್ರದ ಬಗ್ಗೆ ತುಮಕೂರು ಜಿಲ್ಲೆಯ ಫಲಾನುಭವಿ ತಾಲ್ಲೂಕಿನ ಜನರಿಗೆ ಅರಿವು ಮೂಡಿಸಲು ಜನಧ್ವನಿ ಕಾರ್ಯಕ್ರಮ ಕೆ.ಬಿ.ಕ್ರಾಸ್ ಬಳಿ ಆಯೋಜಿಸಲಾಗಿದೆ ಎಂದರು.

    ಗುಬ್ಬಿ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ವೆಂಕಟೇಶ್ ಮಾತನಾಡಿ, ಎತ್ತಿನಹೊಳೆ ಯೋಜನೆ ಮುಗಿಯುವ ಹಂತದಲ್ಲಿ ಐಎ ಇಲಾಖೆಗಳನ್ನು ಧೂ ಬಿಟ್ಟು ತಕರಾರು ಸೃಷ್ಟಿಸಿದ ಕೇಂದ್ರ ಸರ್ಕಾರದ ದುರುದ್ದೇಶ ಬಗ್ಗೆ ಜನರಿಗೆ ತಿಳಿಸಬೇಕಿದೆ. ಈ ಬಗ್ಗೆ ಜಿಲ್ಲೆಯ ರೈತರಿಗೆ, ಮಹಿಳೆಯರಿಗೆ, ಯುವ ಜನಾಂಗಕ್ಕೆ ತಿಳಿಸಿ ಎತ್ತಿನಹೊಳೆ ಯೋಜನೆ ಉಳಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಮುಂದಿನ ಭಾನುವಾರ ತಾಲ್ಲೂಕಿನ ರೈತ ಬಾಂಧವರು ಕೆ.ಬಿ.ಕ್ರಾಸ್ ಹೋರಾಟಕ್ಕೆ ಭಾಗಿಯಾಗುವಂತೆ ಕರೆ ನೀಡಿದರು.

    ಜಿಪಂ ಮಾಜಿ ಸದಸ್ಯ ಜಿ. ಎಚ್.ಜಗನ್ನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ಯತೀಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಭಾಗ್ಯಮ್ಮ, ಮುಖಂಡರಾದ ಗುರು ರೇಣುಕಾರಾಧ್ಯ, ಎ.ನರಸಿಂಹಮೂರ್ತಿ, ವಾಸುಗೌಡ, ಈಶ್ವರಯ್ಯ, ಕಿಟ್ಟದಕುಪ್ಪೆ ನಾಗರಾಜ್, ತಿಮ್ಮಪ್ಪಾಳ್ಳ ಶಶಿ ಇನ್ನಿತರರು ಇದ್ದರು.

    “2014 ರಲ್ಲಿ ಸಿದ್ದರಾಮಯ್ಯ ಅವರೇ ಚಾಲನೆ ನೀಡಿದ್ದ ಎತ್ತಿನಹೊಳೆ ಯೋಜನೆಗೆ ಈಗಾಗಲೇ ರಾಜ್ಯ ಸರ್ಕಾರ 23 ಸಾವಿರ ಕೋಟಿ ರೂ. ವಿನಿಯೋಗಿಸಿ, ಶೇಕಡಾ 90 ರಷ್ಟು ಕೆಲಸ ಪೂರ್ಣವಾಗಿದೆ. ಈ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ಹೆಸರು ಬರುತ್ತದೆ ಎಂಬ ಅಸೂಯೆಯಲ್ಲಿ ಅರಣ್ಯ, ಪರಿಸರ ಹೆಸರಿನಿಂದ ಕೇಂದ್ರ ಸರ್ಕಾರ ಯೋಜನೆಗೆ ಅಡ್ಡಿಗಾಲು ಹಾಕುತ್ತಿದೆ.”

    – ಮುರಳೀಧರ ಹಾಲಪ್ಪ ಉಪಾಧ್ಯಕ್ಷರು, ಕೆಪಿಸಿಸಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ

    May 23, 2026

    ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ

    May 22, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ

    June 18, 2026

    ತುಮಕೂರು: ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜಾರ್ ಯೋಜನೆ (PM–VBRY)ಯ ಯಶಸ್ವಿ ಅನುಷ್ಠಾನದ ಅಂಗವಾಗಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ…

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026

    ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ

    June 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.