ಹಿರಿಯೂರು: ಕರ್ನಾಟಕದಾದ್ಯಂತ ಪುನೀತ್ ರಾಜ್ ಕುಮಾರ್ ಅವರ ಜೇಮ್ಸ್ ಚಿತ್ರವು ಬಿಡುಗಡೆಯಾಗಿದೆ. ಇದೇ ಸಂದರ್ಭದಲ್ಲಿ ಹಿರಿಯೂರಿನಲ್ಲಿ ನಿನ್ನೆಯೇ ಟಿಕೆಟ್ ಗಳು ಖರೀದಿಯಾಗಿದೆ.
ತಾಲ್ಲೂಕಿನ ನಂಜುಂಡೇಶ್ವರ ಚಿತ್ರಮಂದಿರದಲ್ಲಿ ಜೇಮ್ಸ್ ಚಿತ್ರ ಪ್ರದರ್ಶನಗೊಳ್ಳುತ್ತಿದ್ದು, ನಿನ್ನೆಯೇ ಪ್ರೇಕ್ಷಕರು ಟಿಕೆಟ್ ಖರೀದಿಸುತ್ತಿರುವುದು ಕಂಡು ಬಂತು.
ಒಂದೆಡೆ ಪುನೀತ್ ರಾಜ್ ಕುಮಾರ್ ಅವರು ನಿಧನರಾದ ನೋವು ಇನ್ನೊಂದೆಡೆ ಅವರ ಕೊನೆ ಚಿತ್ರ ನೋಡುವ ಕಾತರ ಈ ಎರಡೂ ಭಾವನೆಗಳನ್ನು ಸಾರ್ವಜನಿಕರು ನಮ್ಮತುಮಕೂರು.ಕಾಂ ಜೊತೆಗೆ ಹಂಚಿಕೊಂಡರು.
ಮೈಸೂರಿನ ಶಕ್ತಿ ಧಾಮ ಆಶ್ರಮದ ಮೂಲಕ ಸಮಾಜ ಸೇವೆಯಲ್ಲಿ ತೊಡಗಿರುವ ಪುನೀತ್, `ಬೆಂಗಳೂರು ಪ್ರೀಮೀಯರ್ ಪುಟ್ ಬಾಲ್ ತಂಡದ ಒಡೆತನವನ್ನು ಹೊಂದಿದ್ದಾರೆ. ಕರ್ನಾಟಕ ಸರ್ಕಾರದ ನಂದಿನಿ ಹಾಲು ಉತ್ಪನ್ನಗಳು ಮತ್ತು LED ಬಲ್ಬ್ ಗಳ ರಾಯಭಾರಿಯಾಗಿ ಕೂಡ ಆಗಿದ್ದಾರೆ. ಒಂದು ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಭಾರಿಯಾಗಿದ್ದರು ಎಂಬುದಾಗಿ ಪುನೀತ್ ಅಭಿಮಾನಿಗಳು ತುಮಕೂರು ಮಾಧ್ಯಮದ ಮೂಲಕ ತಿಳಿಸಿದರು.
ಪುನೀತ್ ರಾಜಕುಮಾರ್ ರವರ ಸಿನಿಮಾ ರಂಗಕ್ಕೆ ನೀಡಿದ ಕೊಡುಗೆ ಮತ್ತು ಸಮಾಜಮುಖಿ ಕಳಕಳಿಯನ್ನು ಗುರುತಿಸಿ ಮೈಸೂರು ವಿಶ್ವವಿದ್ಯಾನಿಲಯ 2022 ಮಾರ್ಚ್ ತಿಂಗಳಿನಲ್ಲಿ ಮರಣೋತ್ತರ `ಡಾಕ್ಟರೇಟ್’ ನೀಡಿ ಗೌರವಿಸಿದೆ ಎಂಬುದಾಗಿ ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಗಳು ಮಾಧ್ಯಮದೊಂದಿಗೆ ನೋವಿನ ಜೊತೆಗೂ ಖುಷಿ ಹಂಚಿಕೊಂಡರು.
ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB