nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್

    November 12, 2025

    ಕಪಿಲ‌ ನದಿಗೆ 30 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಅನಿಲ್ ಚಿಕ್ಕಮಾದು

    November 12, 2025

    ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ

    November 12, 2025
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್
    • ಕಪಿಲ‌ ನದಿಗೆ 30 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಅನಿಲ್ ಚಿಕ್ಕಮಾದು
    • ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ
    • ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
    • ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ
    • ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ
    • ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!
    • ಮನೆ–ಮನೆಗೆ ಪೊಲೀಸ್‌: ಮನೆಗಳಿಗೆ ಭೇಟಿ ನೀಡಿ ಅಹವಾಲು ಕೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ
    ಕೊರಟಗೆರೆ October 17, 2022

    ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

    By adminOctober 17, 2022No Comments2 Mins Read
    nahida

    ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿನ್ನೆಪಾಳ್ಯ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಯ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಡಿಯಲ್ಲಿ ಇದುವರೆಗೂ ಪಿಂಚಣಿ ಕಾಣದ ಒಂದೇ ಗ್ರಾಮದ 25 ಜನ ವೃದ್ಧರಿಗೆ   ಸ್ಥಳದಲ್ಲಿಯೇ ಪಿಂಚಣಿ ಮಂಜೂರಾತಿ ಪತ್ರವನ್ನು ತಹಶೀಲ್ದಾರ್ ನಹಿದಾ ಜಮ್ ಜಮ್ ನೀಡಿದರು.

    ಬಳಿಕ ಮಾತನಾಡಿದ ಅವರು, ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಈ ಬಾರಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿನ್ನೆಪಾಳ್ಯ  ಗ್ರಾಮದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ  ನಮ್ಮ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಗ್ರಾಮದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ನಿಮ್ಮ ಈ ಗ್ರಾಮದಲ್ಲಿ ಇರುತ್ತಾರೆ. ಸ್ಥಳೀಯ ಸಾರ್ವಜನಿಕರ  ಕುಂದು ಕೊರತೆಗಳ ಸಮಸ್ಯೆಗಳನ್ನು ಬಗೆಹರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ. ಇದರಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟಂತೆ ಸುಮಾರು 47 ಅರ್ಜಿಗಳು ನಮ್ಮ ಬಳಿ ಸಾರ್ವಜನಿಕರು ಕೊಟ್ಟಿದ್ದಾರೆ. ಕೂಡಲೇ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇನೆ. ಜತೆಗೆ ಇದೇ ಗ್ರಾಮದ 25 ವೃದ್ಧರಿಗೆ ಪಿಂಚಣಿ ಪ್ರಮಾಣ ಪತ್ರವನ್ನು ವಿತರಿಸಿದ್ದೇವೆ. ಹಾಗೆಯೇ ಬೋಡಬಂಡೇನಹಳ್ಳಿ ಸರ್ಕಾರಿ ಶಾಲೆಗೆ ಸಂಬಂಧಿಸಿದಂತೆ ಸುಮಾರು ವರ್ಷಗಳಿಂದ  ಶೌಚಾಲಯ ಹಾಗೂ ಕಾಂಪೌಂಡ್  ಇಲ್ಲದಿರುವುದು ನಮ್ಮ ಗಮನಕ್ಕೆ ಬಂದಿತ್ತು ಕೂಡಲೇ ಕಾಮಗಾರಿ ಪ್ರಾರಂಭಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಲಾಯಿತು  ಎಂದು ತಿಳಿಸಿದರು.


    Provided by
    Provided by

    ಬೋಡಬಂಡೇನಹಳ್ಳಿ ಸರ್ಕಾರಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಹರೀಶ್ ಬಾಬು ಮಾತನಾಡಿ, ಅನೇಕ ವರ್ಷಗಳಿಂದ ನಮ್ಮ ಶಾಲೆಯ ಮಕ್ಕಳಿಗೆ ಶೌಚಾಲಯಗಳು ಇಲ್ಲದಿರುವ ಕಾರಣ  ಬಯಲಿಗೆ ಹೋಗಿ ಬರುತ್ತಿರುವ ಮಕ್ಕಳ ಜವಾಬ್ದಾರಿ ಯಾರು ತೆಗೆದುಕೊಳ್ಳುತ್ತಾರೆ.  ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಶೌಚಾಲಯ ಹಾಗೂ ಕಾಂಪೌಂಡ್ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

    ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದೊಡ್ಡ ಸಿದ್ದಯ್ಯ ಮಾತನಾಡಿ, ಬೋಡಬಂಡೇನಹಳ್ಳಿ ಸರ್ಕಾರಿ ಶಾಲೆ ಸೇರಿದಂತೆ ಇನ್ನುಳಿದ ತಾಲ್ಲೂಕಿನ ಯಾವುದೇ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳು ಹಾಗೂ ಕಾಂಪೌಂಡ್ ಸರಿಯಾಗಿ ಇಲ್ಲದಿದ್ದರೆ ಕೂಡಲೇ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ ಬರುವ ಅನುದಾನಗಳು ಅಥವಾ  ನರೇಗಾ ಯೋಜನೆ ಅಡಿಯಲ್ಲಿ ಶಾಲೆಗಳಿಗೆ ಶೌಚಾಲಯ ಹಾಗೂ ಕಾಂಪೌಂಡ್ ವ್ಯವಸ್ಥೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೂಡಲೇ ನಿರ್ಮಿಸಿಕೊಡಬೇಕು ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದ ತಹಶೀಲ್ದಾರ್ ನಹಿದಾ ಜಮ್ ಜಮ್ ಅವರ ಕೆಲಸವನ್ನು ಕಂಡು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ತಾಲ್ಲೂಕಿನ  ಎಲ್ಲಾ ಇಲಾಖೆಯ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಧಿಕಾರಿಗಳು  ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ

    November 12, 2025

    ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!

    November 8, 2025

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್

    November 12, 2025

    ಕೂಡ್ಲಿಗಿ: ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವುದನ್ನು ರೂಢಿಸಿಕೊಳ್ಳಬೇಕು , ಶಿಕ್ಷಕರು ವಿದ್ಯಾರ್ಥಿಗಳಿಗೆ ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕಿದೆ ಎಂದು ಸಮಾಜ ಸೇವಕರು…

    ಕಪಿಲ‌ ನದಿಗೆ 30 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಅನಿಲ್ ಚಿಕ್ಕಮಾದು

    November 12, 2025

    ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ

    November 12, 2025

    ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!

    November 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.