ಕೊರಟಗೆರೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಡಿಯಲ್ಲಿ ಈ ತಿಂಗಳ ಜಿಲ್ಲಾಧಿಕಾರಿಗಳ ನಡೆ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ದೊಡ್ಡಪಾಲನಹಳ್ಳಿ ಗ್ರಾಮದ ಕಡೆ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಗ್ರೇಡ್2 ತಹಶೀಲ್ದಾರ್ ನರಸಿಂಹಮೂರ್ತಿ ತಿಳಿಸಿದ್ದಾರೆ.
ದೊಡ್ಡಪಾಲನಹಳ್ಳಿ ಗ್ರಾಮ ಪಂಚಾಯ್ತಿಯ ಎಲ್ಲಾ ಜನರು ತಮ್ಮ ಕುಂದುಕೊರತೆಗಳನ್ನು ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಡಿಯಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ. ಏಪ್ರಿಲ್ 16ರ ಶನಿವಾರ ಬೆಳಗ್ಗೆ 10ಗಂಟೆಗೆ ದೊಡ್ಡ ಪಾಲನಾಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಲಿದ್ದು, ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ನಿಮ್ಮ ಗ್ರಾಮದಲ್ಲಿ ವಾಸ್ತವ್ಯ ಹೂಡುತ್ತಾರೆ ಎಂದು ಅವರು ತಿಳಿಸಿದರು.
ಕೋಳಾಲ ಹೋಬಳಿಯ ದೊಡ್ಡಪಾಲನಹಳ್ಳಿ ಗ್ರಾಮದ ಎಲ್ಲ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಂಡು, ತಮ್ಮ ಊರಿನ ಸಮಸ್ಯೆ, ತಮ್ಮ ಮನೆಯ ದಾಖಲಾತಿಗಳ ಸಮಸ್ಯೆ ಹಾಗೂ ಜಮೀನುಗಳ ತಕರಾರು ಇದ್ದಲ್ಲಿ ಅಥವಾ ಯಾವುದೇ ಕುಂದುಕೊರತೆಗಳನ್ನು ಇಲ್ಲಿ ಯಾವ ಇಲಾಖೆಯ ಅಧಿಕಾರಿಗಳಿಗೆ ಸಂಬಂಧಪಡುತ್ತದೆ ಅಂತಹ ಅಧಿಕಾರಿಗಳಿಗೆ ನೇರವಾಗಿ ಲಿಖಿತ ಖಚಿತ ದಾಖಲೆಗಳೊಂದಿಗೆ ನೀವೂ ನೀಡಬಹುದು ಎಂದು ಮಾಹಿತಿ ನೀಡಿದರು.
ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸುವುದೇ ಈ ಗ್ರಾಮ ವಾಸ್ತವ್ಯದ ಕೆಲಸ ಆಗಿರುತ್ತದೆ ಎಂದು ತಾಲ್ಲೂಕು ಗ್ರೇಡ್2 ತಹಶೀಲ್ದಾರ್ ನರಸಿಂಹಮೂರ್ತಿ ಮಾದ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ವರದಿ : ಮಂಜುಸ್ವಾಮಿ ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5