ಗುಬ್ಬಿ: ತಾಲ್ಲೂಕಿನ ನೇರಲೆಕೆರೆ ಗ್ರಾಮದಲ್ಲಿ ಕಂದಾಯ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿ ನಡೆ ಹಳ್ಳಿಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮ ವನ್ನು ಶಾಸಕರು ಹಾಗೂ ತಾಲ್ಲೂಕಿನ ದಂಢಾಧಿಕಾರಿ ಮತ್ತು ಇತರೆ ಇಲಾಖೆ ಅಧಿಕಾರಿಗಳು ಗೈರಾಗಿದ್ದು ಕಾಟಚಾರಕ್ಕೆ ಕಾರ್ಯಕ್ರಮ ಮಾಡುತ್ತಿದ್ದೀರಿ ಎಂದು ಸಾರ್ವಜನಿಕರು ಅಧಿಕಾರಿಗಳು ಮತ್ತು ಶಾಸಕ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಕಾರ್ಯಕ್ರಮದ ಬಗ್ಗೆ ಸಮರ್ಪಕವಾಗಿ ಕರ್ತವ್ಯ ನಿರ್ವಾಹಣೆ ಮಾಡದೆ ಸ್ಥಳೀಯರಿಗೆ ಕಾರ್ಯಕ್ರಮ ಆಯೋಜನೆ ಮಾಡಿರುವ ಬಗ್ಗೆ ಮಾಹಿತಿ ನೀಡದೆ ಕರ್ತವ್ಯ ಲೋಪ ವೆಸಗಿದ ನಿಟ್ಟೂರು ಕಂದಾಯ ನಿರೀಕ್ಷಕ ನಾರಾಯಣ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಅಧಿಕಾರಿಯ ದುರ್ವತನೆ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಒಟ್ಟಾರೆ ಯಾಗಿ ಇಂದು ನಡೆಸಿದ ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಎಂಬ ಕಾರ್ಯಕ್ರಮ ವಿಫಲವಾಗಿದ್ದು ಕೆಲ ಇಲಾಖೆ ಅಧಿಕಾರಿಗಳು ಗೈರು ಹಾಜರಿಯಿಂದ ಸಭೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿ ಯಾಯಿತು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB