ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ,ಹೋಬಳಿ ಸೊರವನಹಳ್ಳಿ ಗ್ರಾಮದಲ್ಲಿ , ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯಕಡೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನುದ್ದೇಶಿಸಿ, ಮಾತನಾಡಿದ ತಾಲ್ಲೂಕು ಪಂಚಾಯ್ತಿ ಕಾರ್ಯನಿರವಾಹಣಾಧಿಕಾರಿ ಸತೀಶ್, ಆಧುನಿಕತೆ ಬೆಳೆದ ಹಾಗೆ, ಈ ದೇಶದಲ್ಲಿ ಪ್ರಜಾಪ್ರಭುತ್ವ ಸರ್ಕಾರಗಳು ಜಾರಿಗೆ ಬಂದ ಮೇಲೆ ಎಲ್ಲಾ ಸರ್ಕಾರಗಳು ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೆ ತಂದವು. ಅದರಲ್ಲಿ ನಮ್ಮ ಈಗಿನ ರಾಜ್ಯ ಸರ್ಕಾರ ತಂದ ಕಾರ್ಯಕ್ರಮಗಳಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯಕಡೆಗೆ’ ಕಾರ್ಯಕ್ರಮ ವಿನೂತನ ಕಾರ್ಯಕ್ರಮ ಎಂದರು.
ಜಿಲ್ಲಾಧಿಕಾರಿಗಳೇ ,ಹಳ್ಳಿಗಳಿಗೆ ತೆರಳಿ ಜನ ಸಾಮಾನ್ಯರ , ರೈತರ , ಶೋಷಿತರ ಇನ್ನು ಮುಂತಾದವರ ಸಮಸ್ಯೆ ಆಲಿಸಿ ಸಾಧ್ಯವಾಗುವ ಸಮಸ್ಯೆಗಳನ್ನ, ಸ್ಥಳದಲ್ಲೇ ಬಗೆಹರಿಸುವುದು ಈ ಕಾರ್ಯಕ್ರಮದ ಉದ್ದೇಶ, ಆದುದರಿಂದ ಜಿಲ್ಲಾಧಿಕಾರಿಗಳು ಕೇವಲ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಮಸ್ಯೆ ಆಲಿಸಲು ಮಾತ್ರ ಸಾಧ್ಯ, ಇನ್ನುಳಿದ ಕಾರ್ಯಕ್ರಮಗಳನ್ನು ಆಯಾ ತಾಲೂಕಿನ ತಹಶೀಲ್ದಾರರು ಮತ್ತು ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿ, ಸಮಸ್ಯೆ ಆಲಿಸಿ ಸ್ಥಳದಲ್ಲಿ ಸಾಧ್ಯವಾಗುವ ಸಮಸ್ಯೆಯನ್ನು, ಬಗೆಹರಿಸ ಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.
ತಾಲೂಕಿನ ಶಾಸಕರಾದ ಮಸಾಲ ಜಯರಾಮ್ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಅರ್ಹ ಸುಮಾರು 30 ಜನರಿಗೆ ಪಿಂಚಣಿ ಆದೇಶ ಪ್ರತಿಯನ್ನು ಸ್ಥಳದಲ್ಲೇ ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ದಂಢಾದಿಕಾರಿಗಳು ಮತ್ತು ತಹಸೀಲ್ದಾರ್ ನಯಿಮ್ ಉನ್ನಿಸ್ಸ ವಹಿಸಿದ್ದರು. ಮಹಿಳಾ ಮತ್ತು ಶಿಶು ಯೋಜನಾಧಿಕಾರಿಗಳಾದ ಸ್ವಾಮಿ , ಸೊರವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಾಬೀರ್ ಹುಸೇನ್ ಉಪಸ್ಥಿತರಿದ್ದರು. ಗ್ರಾಮ ಲೆಕ್ಕಿಗ ಅಣ್ಣಪ್ಪ ಕಾರ್ಯಕ್ರಮಕ್ಕೆ ಅತಿಥಿಗಳನ್ನು ಸ್ವಾಗತಿಸಿದರು.
ವರದಿ: ಸುರೇಶ್ ಬಾಬು ಎಂ.ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB