nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಹಿತ್ಯ — ಸಂಗೀತದ ಬೆಳವಣಿಗೆಗೆ ಜಿನ ಭಜನೆ ಅಗತ್ಯ: ಡಾ.ಡಿ.ವೀರೇಂದ್ರ ಹೆಗ್ಗಡೆ
    ರಾಜ್ಯ ಸುದ್ದಿ November 24, 2024

    ಸಾಹಿತ್ಯ — ಸಂಗೀತದ ಬೆಳವಣಿಗೆಗೆ ಜಿನ ಭಜನೆ ಅಗತ್ಯ: ಡಾ.ಡಿ.ವೀರೇಂದ್ರ ಹೆಗ್ಗಡೆ

    By adminNovember 24, 2024No Comments2 Mins Read
    veerendra hegade

    ಬೆಳ್ತಂಗಡಿ: ಸಾಹಿತ್ಯ ಹಾಗೂ ಸಂಗೀತಗಳು ಒಂದು ಮರದ ಎರಡು ಕೊಂಬೆಗಳು ಇದ್ದಂತೆ ಇವುಗಳ ಬೆಳವಣಿಗೆಗೆ,   ಜಿನಭಜನೆ ಅತಿ ಅಗತ್ಯವಾಗಿದೆ, ಭಾಷಾ ಸಂಗೀತಕ್ಕೆ ಮೂಲ ಬೇರಾಗಿರುವ  ಜಿನಭಜನೆಗೆ ಪ್ರೋತ್ಸಾಹ ಅಗತ್ಯ ಎಂದು ರಾಜ್ಯಸಭಾ ಸದಸ್ಯರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ,  ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದರು.

    ಅವರಿಂದು ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ನಡೆದ ಭಾರತೀಯ  ಜೈನ್ ಮಿಲನ್ ವಲಯ– 8 ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆ– 20 24 ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಇಂದು ಸಾಹಿತ್ಯದ ಬೆಳವಣಿಗೆಗೆ  ಜಿನ ಭಜನೆ ಅಗತ್ಯವಾಗಿದೆ, ಅಂತರಾತ್ಮದ ಕೂಗಿನ ಜೊತೆಯಲ್ಲಿ ಭಜನೆ ಸ್ಮರಿಸುವುದು ಅಗತ್ಯ ಇದರಿಂದ ತೀರ್ಥಂಕರ ಸ್ಮರಣೆ ಅವರ ತತ್ವಗಳು ಆದರ್ಶಗಳ ಆಚರಣೆ ಸಾಧ್ಯವಾಗಲಿದೆ ಎಂದರು.

    ಜನಿವಾರ ಒಂದು ಮೂಗುದಾರ ವಿದ್ದಂತೆ, ಇದರಿಂದ  ತಪ್ಪನ್ನು ತಿದ್ದಲು ಸಾಧ್ಯವಾಗಲಿದೆ, ಸಾಹಿತ್ಯದ ಮೂಲಕ ಸಂಗೀತ ಪ್ರವೇಶ ಸಾಧ್ಯವಾಗಲಿದ್ದು , ಸಂಗೀತ ಎಲ್ಲವನ್ನು ವಿವರಿಸಿದೆ ಎಂದರು .

    ಈ ಹಿಂದೆ ಸಿನಿಮಾ ಹಾಡಿಗೆ ಜನರು ಸಂಗೀತವನ್ನು ಸೇರಿಸಿಕೊಂಡು  ಹಾಡುತ್ತಿದ್ದರು, ಭಜನೆ ಅಂತರಾತ್ಮ ವನ್ನು ಶುದ್ಧಿಗೊಳಿಸಲಿದೆ  ಎಂದ ಅವರು, ಮಕ್ಕಳನ್ನು ಪ್ರೋತ್ಸಾಹಿಸಿ ಧರ್ಮದ ಜಾರಿಯಲ್ಲಿ ನಡೆಯಲು ಇಂತಹ ಕಾರ್ಯಕ್ರಮಗಳು ಅಗತ್ಯ. ಆಚರಣೆಯಿಂದ ಯಾವುದೂ ಕಷ್ಟವಲ್ಲ  ಕೇಶಲೋಚನೆ ಕಷ್ಟವಾದರೂ ಅದರ ಆಚರಣೆಯಿಂದ ಸಹಜವಾಗಿ ಅನುಭವಿಸುವಂತಹಾಗುತ್ತದೆ ,ಎಲ್ಲವನ್ನು ಸಹಜವಾಗಿಸಿಕೊಳ್ಳಬೇಕು ಧರ್ಮದ ಆಚರಣೆಗಳನ್ನು ಸಹಜವಾಗಿಸಿಕೊಂಡು ಮುನ್ನಡೆಯುವಂತೆ ಕರೆ ನೀಡಿದರು.

    ಜಿನ ಭಜನೆಯಿಂದ ಜನ ತಿದ್ದಿ ನಡೆಯಬೇಕು ,ಇದರಿಂದ ಭಗವಂತನ ಸ್ಮರಣೆ ಸಾಧ್ಯ , ಸೋಲು ಸಹಜ , ಆದರೆ ಸ್ಪರ್ಧೆ ಅಗತ್ಯ ಸೋಲಿನಿಂದ ನಿರಾಶರಾಗದೆ ಮರು ಪ್ರಯತ್ನ ಅಗತ್ಯ, ಭಗವಂತನ ಆದರ್ಶಗಳನ್ನು  ಮನಸ್ಸಿನಲ್ಲಿ ತುಂಬಿಸಿಕೊಳ್ಳಬೇಕು ಇದು ಜಿನ ಭಜನ ಸಿದ್ಧಾಂತವು ಆಗಿದೆ ಎಂದರು.

    ಮಾನವನಿಗೆ ಬಹುಮಾನ ಮುಖ್ಯವಲ್ಲ, ಸ್ಪರ್ಧೆ ಮುಖ್ಯ , ಸ್ಪರ್ಧೆಯಲ್ಲಿ ಭಾಗವಹಿಸಲು ಮನೆಯಲ್ಲೇ ಅಭ್ಯಾಸ ಸ್ಪರ್ಧೆ ಮಾಡಿ,   ತಾವೇ ಸಾಹಿತ್ಯ -ಸಂಗೀತ ರಚಿಸಿಕೊಂಡು ಸ್ಪರ್ಧಿಸಿ ಎಂದರು.

    ಭಾರತೀಯ ಜೈನ್ ಮಹಿಳಾ ಮಿಲನ ರಾಷ್ಟ್ರೀಯ ಅಧ್ಯಕ್ಷರು ಹಾಗೂ  ಜಿನ ಭಜನಾ ಕಾರ್ಯಕ್ರಮದ ರೂವಾರಿ ಅನಿತಾ ಸುರೇಂದ್ರ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಪ್ರಸನ್ನ ಕುಮಾರ್, ಸುದರ್ಶನ್, ಜೀವನದರ್ ಕುಮಾರ್, ಪ್ರವೀಣ್ ಕುಮಾರ್ ಇಂದ್ರ, ಸೋನಿಯೋ ಯಶೋವರ್ಮ, ಸತೀಶ್ ಚಂದ್ರ ಜೈನ್, ತೀರ್ಥ ಕುಮಾರ್  ಜೈನ್, ತ್ರಿಶಾಲ ಉದಯ್ ಕುಮಾರ್, ಚಂದ್ರಹಾಸ, ಮಂಗಳೂರು ವಿಭಾಗ ಮಟ್ಟದ ಅಧ್ಯಕ್ಷ ಸೋಮಶೇಖರ್ ಶೆಟ್ಟಿ, ಸೇರಿದಂತೆ ಮಂಗಳೂರು ವಿಭಾಗದ ಜೈನ್ ಮಿಲನ್ ತಂಡಗಳು ಶ್ರಾವಕ ಶ್ರಾವಕಿಯರು ವಿವಿಧ ಜೈನ ಸಂಘಟನೆಗಳು ಭಾಗವಹಿಸಿದ್ದವು.

    ವರದಿ:  ಜೆ.ರಂಗನಾಥ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಕೊರಟಗೆರೆ: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಒಳ ಮೀಸಲಾತಿ ಜಾರಿಗೊಳಿಸದೆ, ಹಳೆಯ ಪದ್ಧತಿಯಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು…

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.