nammatumakuru

    Subscribe to Updates

    Get the latest creative news from FooBar about art, design and business.

    What's Hot

    ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?

    January 15, 2026

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 15, 2026

    ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ

    January 15, 2026
    Facebook Twitter Instagram
    ಟ್ರೆಂಡಿಂಗ್
    • ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ
    • ಸ್ವಂತ ಉದ್ಯಮ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
    • ರಸ್ತೆ ಬದಿ ಕುಳಿತಿದ್ದವರ ಮೇಲೆ ಹರಿದ ಲಾರಿ: ಒಬ್ಬ ಸಾವು, ಇಬ್ಬರಿಗೆ ಗಂಭೀರ ಗಾಯ
    • ತುಮಕೂರು: ಜ.18ರಂದು ಹಿಂದೂ ಸಮಾಜೋತ್ಸವ
    • ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ
    • 6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ
    ಜಿಲ್ಲಾ ಸುದ್ದಿ February 9, 2023

    ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ

    By adminFebruary 9, 2023No Comments2 Mins Read
    saraguru

    ಸರಗೂರು: ಜೀತದಾಳುಗಳನ್ನು ಗುರುತಿಸಿ ಅವರಿಗೆ ಪುನರ್‌ ವಸತಿ ಹಾಗೂ ಸರಕಾರದ ಇತರ ಸೌಲಭ್ಯ ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುಷ್ಮಾ ಹೇಳಿದರು.

    ತಾಲೂಕಿನ ಬಿ ಮಟಕೆರಿ ಗ್ರಾಪಂಯ ವಿ ಎಸ್ ಎಸ್ ಎನ್ ಸಮುದಾಯ ಭವನದಲ್ಲಿ ಗುರುವಾರ ಜೀತ ಪದ್ಧತಿ ನಿರ್ಮೂಲನೆ ದಿನಾಚರಣೆಯನ್ನು ತಾಲ್ಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ  ಮತ್ತು ಸರಕಾರದ ವಿವಿಧ ಇಲಾಖೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಜೀತ ಪದ್ಧತಿಯ ನಿರ್ಮೂಲನೆ ಮತ್ತು ಹೇಗೆ ಗುರುತಿಸುವುದು ಕುರಿತು ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಹಾಗೂ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಕನಿಷ್ಠ ಕೂಲಿ ಇಲ್ಲದೆ ಜೀತದಾಳುಗಳು ಮತ್ತು ಅವರ ಕುಟುಂಬಗಳು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುತ್ತವೆ. ಆದರೆ ಅವರಿಗೆ ಶಿಕ್ಷಣದ ಕೊರತೆಯಿಂದ ಜೀತದಿಂದ ಹೊರಬಂದು ಸರಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಇಂಥ ಪ್ರಕರಣಗಳನ್ನು ಗುರುತಿಸಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದಲ್ಲಿ ಸರಕಾರದ ಸೌಲಭ್ಯ ಕಲ್ಪಿಸುವ ಮೂಲಕ ಜೀತ ಮುಕ್ತಗೊಳಿಸಬಹುದು. ಅನೇಕ ಸಾಮಾಜಿಕ ಅನಿಷ್ಠಗಳಂತೆ ಜೀತ ಪದ್ಧತಿಯೂ ಅನಿಷ್ಠ ಪದ್ಧತಿ. ಇದನ್ನು ಹೋಗಲಾಡಿಸುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.

    ಜಿವಿಕಾ ತಾಲ್ಲೂಕು ಸಂಚಾಲಕ ಚಂದ್ರಶೇಖರ ಮೂರ್ತಿ  ಸಂಚಾಲಕ ಚಂದ್ರಶೇಖರ ಮೂರ್ತಿ  ಮಾತನಾಡಿ, ಈ ಅನಿಷ್ಠ ಪದ್ಧತಿ ನಿರ್ಮೂಲನೆಯ ಉದ್ದೇಶಕ್ಕಾಗಿ 1993 ರಲ್ಲಿ ಸರಕಾರೇತರ ಸಂಸ್ಥೆ ಆರಂಭಿಸಲಾಗಿದ್ದು, ಈ ಸಂಸ್ಥೆಯಲ್ಲಿ 650 ಕ್ಕೂ ಹೆಚ್ಚು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕರ್ತರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋಟೆ ಮತ್ತು ಸರಗೂರು ತಾಲ್ಲೂಕಿನಲ್ಲಿ ಈವರೆಗೆ ಒಟ್ಟು 560 ಜನರನ್ನು ಜೀತದಾಳುಗಳನ್ನು ಗುರುತಿಸಿ ಅವರನ್ನು ಜೀತದಿಂದ ವಿಮುಕ್ತಿಗೊಳಿಸಿದ್ದಿವಿ ಎಂದರು.

    ಸಂವಿಧಾನ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಗ್ರಾಪಂ ಕುರ್ಣೆಗಾಲ ಬೆಟ್ಞಸ್ವಾಮಿ ಮಾತನಾಡಿ, ಕರ್ನಾಟಕದಲ್ಲಿ ಜೀತ ಪ್ರಕರಣಗಳು ಸಾಕಷ್ಟಿದ್ದರೂ ಪ್ರಕರಣಗಳು ಮಾತ್ರ ಬೆಳಕಿಗೆ ಬರುತ್ತಿಲ್ಲ. ಈ ಕಾರಣದಿಂದಲೇ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಇಲಾಖೆ, ಪಂಚಾಯತ್ ರಾಜ ಇಲಾಖೆ, ಸಮಾಜ ಕಲ್ಯಾಣ ಮತ್ತು ಮಹಿಳಾ ಮತ್ತು ಕಲ್ಯಾಣ ಇಲಾಖೆಗಳ ನೌಕರರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

    ,ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಶಿವಣ್ಣ, ಜಿವಿಕಾ ಮಹೇಶ್, ಗ್ರಾಪಂ ಅಧ್ಯಕ್ಷೆ ರೂಪಾಬಾಯಿ, ಗ್ರಾಪಂ ಉಪಾಧ್ಯಕ್ಷ ದೇವದಾಸ್, ಗ್ರೇಟ್ 2 ತಹಸೀಲ್ದಾರ್ ಪರಶಿವಮೂರ್ತಿ, ಪರಿಶಿಷ್ಟ ಪಂಗಡ ಇಲಾಖೆ ಅಧಿಕಾರಿ ನಾರಾಯಣಸ್ವಾಮಿ,ಗೋಪಾಲಕೃಷ್ಣ ಮೂರ್ತಿ, ತೋಟಗಾರಿಕೆ ಇಲಾಖೆ ಅಧಿಕಾರಿ ಗೋವಿಂದರಾಜು, ರಾಣಿಬಾಯಿ, ಕಾಳಸ್ವಾಮಿ, ತಾಲ್ಲೂಕು ಪಂಚಾಯಿತಿ ಸಂಯೋಜಕ ಮಹದೇವಸ್ವಾಮಿ, ದಸಂಸ ತಾಲ್ಲೂಕು ಸಂಚಾಲಕ ಗೋವಿಂದರಾಜು, ಮಹೇಶ್ ಎಲ್ಲಾ ಗ್ರಾಪಂ ಪಿಡಿಒ ಅಧಿಕಾರಿಗಳು ಭಾಗ್ಯ, ಹನುಮಯ್ಯ, ನಾಗೇಂದ್ರ, ಚೆನ್ನಪ್ಪ,ಸರಿತಾ, ಮಹೇಶ್, ಪ್ರಸನ್ನ, ಮಲ್ಲರಾಜು, ಅರುಣ್, ಚಂದ್ರ, ಕಾಂತರಾಜು, ಅಭಿಲಾಷ್, ವಾಲ್ಮೀಕಿ ನಿಗಮ ಇಲಾಖೆ ಅಧಿಕಾರಿ ಪರಮೇಶ್ವರಪ್ಪ ಎಲ್ಲಾ ಗ್ರಾಪಂ ನೌಕರರು ಕಾರ್ಯಕ್ರಮದಲ್ಲಿ ಮುಖಂಡರು ಹಾಜರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    January 12, 2026

    ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ

    January 12, 2026

    ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ

    January 12, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?

    January 15, 2026

    ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ನಡೆಸಲಿರುವ ಐಎಎಸ್…

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 15, 2026

    ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ

    January 15, 2026

    ಸ್ವಂತ ಉದ್ಯಮ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

    January 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.